Thursday, October 3, 2024
Thursday, October 3, 2024

Mahatma Gandhi ಗಾಂಧಿ ಟೋಪಿ ಧಾರಣೆ ಕೇವಲ ತೋರಿಕೆಯಾಗಬಾರದು. ಆದರ್ಶಗಳ ಪಾಲನೆಯಾಗಬೇಕು-ಡಾ.ಎಚ್.ಬಿ.ಮಂಜುನಾಥ್.

Date:

Mahatma Gandhi ಗಾಂಧಿ ಟೋಪಿಯನ್ನು ಧರಿಸುವುದು ಕೇವಲ ತೋರಿಕೆಯಾಗದೆ ಮಹಾತ್ಮರ ಆದರ್ಶಗಳ ಪಾಲಿಕೆಯಾಗಬೇಕು, ಇದು ನಾವು ಮಹಾತ್ಮರ ದಿವ್ಯಾತ್ಮಕ್ಕೆ ಸಲ್ಲಿಸಬಹುದಾದ ಶ್ರೇಷ್ಠ ಗೌರವ ಎಂದು ಹಿರಿಯ ಪತ್ರಕರ್ತ ಡಾ. ಎಚ್ ಬಿ ಮಂಜುನಾಥ ಹೇಳಿದರು.

ದಾವಣಗೆರೆ ನಗರದ ದೇವರಾಜ ಅರಸು ಬಡಾವಣೆಯಲ್ಲಿರುವ ಲಯನ್ಸ್ ಕ್ಲಬ್, ಲಯನ್ಸ್ ಟ್ರಸ್ಟ್ ಹಾಗೂ ಲಯನ್ಸ್ ಶಾಲಾ ಸಂಯುಕ್ತ ಆಶ್ರಯದಲ್ಲಿ ನೆರವೇರಿದ ಮಹಾತ್ಮ ಗಾಂಧೀ, ಲಾಲ್ ಬಹದ್ದೂರ್ ಶಾಸ್ತ್ರೀ ಜಯಂತಿ ವಿಶೇಷ ಉಪನ್ಯಾಸ ನೀಡುತ್ತಾ ಆಂಧ್ರಪ್ರದೇಶದಲ್ಲಿ ಮಹಾತ್ಮ ಗಾಂಧೀಜಿಯವರ ಭಾಷಣ ಕೇಳಿದ ಶ್ರೀಮಂತ ಮಹಿಳೆಯೋರ್ವಳು ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಲು ಗಾಂಧೀಜಿಯವರ ತಂಡದ ಹಿಂದೆ ಹೋಗುವ ನಿರ್ಧಾರ ಮಾಡಿ ತನ್ನ ಮೈ ಮೇಲಿದ್ದ ಎಲ್ಲಾ ಒಡವೆಗಳನ್ನು ಬಿಚ್ಚಿ ಕರವಸ್ತದಲ್ಲಿ ಕಟ್ಟಿ ಅಪರಿಚಿತ ವ್ಯಕ್ತಿಯೋರ್ವನ ಕೈಗೆ ಕೊಟ್ಟು ತನ್ನ ಮಾವನಿಗೆ ತಲುಪಿಸುವಂತೆ ಹೇಳಿದಳು.
ಗಾಬರಿಗೊಂಡ ಆ ವ್ಯಕ್ತಿ “ಪರಿಚಯವೇ ಇಲ್ಲದ ನನ್ನ ಕೈಗೆ ಇಷ್ಟೊಂದು ಆಭರಣ ಕೊಟ್ಟಿರಲ್ಲ?!!, ನನ್ನ ಬಗ್ಗೆ ನಿಮಗೆ ವಿಶ್ವಾಸ ಹೇಗೆ ಬಂತು?!” ಎಂದು ಕೇಳಿದಾಗ ಆ ಮಹಿಳೆಯು “ನಿನ್ನ ತಲೆಯ ಮೇಲೆ ಗಾಂಧಿ ಟೋಪಿ ಇದೆ ಅಂದ ಮೇಲೆ ನೀನು ಪ್ರಾಮಾಣಿಕ ವ್ಯಕ್ತಿಯೇ ಆಗಿರುತ್ತೀ ಎಂಬ ವಿಶ್ವಾಸ ನನ್ನದು”ಎಂದಳು.

ಗಾಂಧಿ ಟೋಪಿ ಧರಿಸಿದವರು ಈ ವಿಶ್ವಾಸಾರ್ಹತೆಯನ್ನು ಕಾಪಾಡಿಕೊಳ್ಳಬೇಕು,ಆಗ ತೋರಿಕೆಯಾಗದೆ ಪಾಲಿಕೆಯಾಗುತ್ತದೆ ಎಂದು ಡಾ.ಎಚ್ ಬಿ ಮಂಜುನಾಥ್ ಹೇಳಿದರು.

ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರೀಜಿಯವರ ಸರಳ ಜೀವನ, ಪ್ರಾಮಾಣಿಕತೆ ನಿದರ್ಶನ ಘಟನೆಗಳನ್ನು ಮನೋಜ್ಞವಾಗಿ ವಿವರಿಸಿದರು. ಲಯನ್ ಆರ್ ಜೆ ಶ್ರೀನಿವಾಸ ಮೂರ್ತಿ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದ ಉದ್ಘಾಟನೆಯನ್ನು ಲಯನ್ ಉಳವಯ್ಯ ಎಸ್ ಜಿ ನೆರವೇರಿಸಿದರು.

Mahatma Gandhi ಲಯನ್ ಹೆಚ್ ಸಿ ಹುಲ್ಲತ್ತಿ ಹಾಗೂ ಲಯನ್ ಎಂ ಎಸ್ ಉದಯಕುಮಾರ್ ಪ್ರಾಯೋಜಿಸಿದ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಲಯನ್ ಗಳಾದ ವೈ ಬಿ ಸತೀಶ್, ಬೆಳ್ಳೂಡಿ ಶಿವಕುಮಾರ್, ಕೆ ಮುರುಗೇಶಪ್ಪ, ಎ ರಮೇಶ್, ಎ ಎಸ್ ಮೃತ್ಯುಂಜಯ, ಎನ್ ವಿ ಬಂಡಿವಾಡ, ಎಸ್ ನಾಗರಾಜ, ಎಚ್ ಎಂ ನಾಗರಾಜ್, ಶಾಲಾ ಮುಖ್ಯೋಪಾಧ್ಯಾಯನಿ,ಶಿಕ್ಷಕಿಯರು ಮುಂತಾದವರು ಭಾಗವಹಿಸಿದ್ದರು. ಶಾಲಾ ಮಕ್ಕಳು ಗಾಂಧೀಜಿ ಹಾಗೂ ಶಾಸ್ತ್ರೀಜಿ ಬಗ್ಗೆ ಮಾತುಗಳನ್ನಾಡಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Navaratri Festival ಬಂಗಾರಮಕ್ಕಿಯಲ್ಲಿ ಶರನ್ನವರಾತ್ರಿ ಉತ್ಸವ

Navaratri Festival ಬಂಗಾರಮಕ್ಕಿಯ ಹೇಮಪುರ ಮಹಾಪೀಠದ ಶ್ರೀ ವಿಶ್ವ ವೀರಾಂಜನೇಯ...

Klive Special Article ನವರಾತ್ರಿಯ ಮೊದಲ ದಿನ. ಶೈಲಪುತ್ರಿ ದೇವಿರೂಪ ಆರಾಧನೆ

ಲೇ; ಎನ್.ಜಯಭೀಮ ಜೊಯಿಸ್. ಶಿವಮೊಗ್ಗ Navaratri Festival ವಂದೇ ವಾಂಛಿತ ಲಾಭಾಯಚಂದ್ರಾರ್ಧಕೃತಶೇಖರಂ/ವೃಷಾರೂಢಂ...

Gandhi Jayanthi ನಗರದ ರೋವರ್ಸ್ ಕ್ಲಬ್ ನಲ್ಲಿ ಗಾಂಧಿ ಜಯಂತಿ ಆಚರಣೆ

Gandhi Jayanthi ನಗರದ ರೋವರ್ಸ್ ಕ್ಲಬ್ ಆವರಣದಲ್ಲಿ ಮಹಾತ್ಮ ಗಾಂಧೀಜಿಯವರ...

B.Y.Raghavendra ಸಾರ್ವಜನಿಕ ಉದ್ಯಮಗಳು & ಗೃಹ ಇಲಾಖೆ ಸಂಬಂಧಿತ ಸ್ಥಾಯಿ ಸಮಿತಿಗೆ ನೇಮಕವಾಗಿರುವ ಸಂಸದ ರಾಘವೇಂದ್ರರಿಗೆ ಅಭಿನಂದನೆ

B.Y.Raghavendra ಕೇಂದ್ರ ಸರ್ಕಾರದ ಸಂಸದೀಯ ಸಂಸ್ಥೆಗಳಾದ ಸಾರ್ವಜನಿಕ ಉದ್ಯಮಗಳ ಸಮಿತಿ,...