Thursday, October 3, 2024
Thursday, October 3, 2024

Klive Special Article ನವರಾತ್ರಿಯ ಮೊದಲ ದಿನ. ಶೈಲಪುತ್ರಿ ದೇವಿರೂಪ ಆರಾಧನೆ

Date:

ಲೇ; ಎನ್.ಜಯಭೀಮ ಜೊಯಿಸ್. ಶಿವಮೊಗ್ಗ

Navaratri Festival ವಂದೇ ವಾಂಛಿತ ಲಾಭಾಯ
ಚಂದ್ರಾರ್ಧಕೃತಶೇಖರಂ/
ವೃಷಾರೂಢಂ ಶೂಲಧರಾಂ
ಶೈಲಪುತ್ರೀಂ ಯಶಸ್ವಿನೀಂ//


ಇಂದು ಶರನ್ನವರಾತ್ರಿ ಹಬ್ಬದ ಮೊದಲನೆಯ ದಿನ. ಈದಿನ ದುರ್ಗಾಮಾತೆಯನ್ನು ಶೈಲಪುತ್ರಿದೇವಿ ಎಂಬ
ರೂಪದಿಂದ ಆರಾಧಿಸಲಾಗುತ್ತದೆ. ದೇವಿಯು ಕೈಯಲ್ಲಿ ತ್ರಿಶೂಲ ಮತ್ತು ಕಮಲವನ್ನು ಹಿಡಿದು ಎತ್ತನ್ನು ವಾಹನವನ್ನಾಗಿ ಮಾಡಿಕೊಂಡಿದ್ದಾಳೆ. ಪರ್ವತರಾಜ ಹಿಮವಂತನ ಪುತ್ರಿಯಾದ್ದರಿಂದ ಈಕೆಯನ್ನು ಶೈಲಪುತ್ರಿ ಎಂದು ಕರೆಯುತ್ತಾರೆ. ಸುಂದರ ಮತ್ತು ಸೌಮ್ಯ ರೂಪ ಶೈಲಪುತ್ರಿದೇವಿಯದು. ಶಿವ ಪುರಾಣದ ಪ್ರಕಾರ,ಸತಿದೇವಿ ದಕ್ಷಪ್ರಜಾಪತಿಯ
ಯಜ್ಞಕುಂಡಕ್ಕೆ ಹಾರಿ ಮುಂದಿನ ಜನ್ಮದಲ್ಲಿ ಶೈಲರಾಜ ಹಿಮವಂತನಿಗೆ ಮಗಳಾಗಿ ಜನಿಸಿ ಶೈಲಪುತ್ರಿ ಎಂದು
ಹೆಸರು ಪಡೆದಳು.

Navaratri Festival ಕಠಿಣ ತಪಸ್ಸು ಮಾಡಿ ಶಿವನೊಂದಿಗೆ ಮದುವೆಯಾದಳು.ಅಸುರರಿಂದ ತೊಂದರೆ ಅನುಭವಿಸುತ್ತಿದ್ದ ದೇವಾನುದೇವತೆಗಳಿಗೆ ಅಭಯ ಹಸ್ತ ನೀಡಿದವಳೇ ಶೈಲಪುತ್ರಿದೇವಿ. ನವರಾತ್ರಿ ಹಬ್ಬದ ಮೊದಲನೆಯ ದಿನ ಶೈಲಪುತ್ರಿದೇವಿಯನ್ನು ಶ್ರದ್ಧಾ,ಭಕ್ತಿಯಿಂದ ಆರಾಧಿಸಿದರೆ ದೇವಿಯು ಭಕ್ತರಿಗೆ ವಿಶೇಷ ಶಕ್ತಿಯನ್ನು ಕರುಣಿಸುತ್ತಾಳೆ ಎಂಬ ದೃಢವಾದ ನಂಬಿಕೆ ಇದೆ.
ಇಂತಹ ಅಭಯಕೊಟ್ಟು ಕಾಪಾಡುವ ಶೈಲಪುತ್ರಿ ದೇವಿಯನ್ನು ನಾವು ಭಕ್ತಿಯಿಂದ ಆರಾಧಿಸಿ,ಪೂಜೆ ಸಲ್ಲಿಸಿ,ತಾಯಿಯ ಅನುಗ್ರಹವನ್ನು ಪಡೆಯೋಣ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Navaratri Festival ಬಂಗಾರಮಕ್ಕಿಯಲ್ಲಿ ಶರನ್ನವರಾತ್ರಿ ಉತ್ಸವ

Navaratri Festival ಬಂಗಾರಮಕ್ಕಿಯ ಹೇಮಪುರ ಮಹಾಪೀಠದ ಶ್ರೀ ವಿಶ್ವ ವೀರಾಂಜನೇಯ...

Gandhi Jayanthi ನಗರದ ರೋವರ್ಸ್ ಕ್ಲಬ್ ನಲ್ಲಿ ಗಾಂಧಿ ಜಯಂತಿ ಆಚರಣೆ

Gandhi Jayanthi ನಗರದ ರೋವರ್ಸ್ ಕ್ಲಬ್ ಆವರಣದಲ್ಲಿ ಮಹಾತ್ಮ ಗಾಂಧೀಜಿಯವರ...

B.Y.Raghavendra ಸಾರ್ವಜನಿಕ ಉದ್ಯಮಗಳು & ಗೃಹ ಇಲಾಖೆ ಸಂಬಂಧಿತ ಸ್ಥಾಯಿ ಸಮಿತಿಗೆ ನೇಮಕವಾಗಿರುವ ಸಂಸದ ರಾಘವೇಂದ್ರರಿಗೆ ಅಭಿನಂದನೆ

B.Y.Raghavendra ಕೇಂದ್ರ ಸರ್ಕಾರದ ಸಂಸದೀಯ ಸಂಸ್ಥೆಗಳಾದ ಸಾರ್ವಜನಿಕ ಉದ್ಯಮಗಳ ಸಮಿತಿ,...

Mahatma Gandhi ಗಾಂಧಿ ಟೋಪಿ ಧಾರಣೆ ಕೇವಲ ತೋರಿಕೆಯಾಗಬಾರದು. ಆದರ್ಶಗಳ ಪಾಲನೆಯಾಗಬೇಕು-ಡಾ.ಎಚ್.ಬಿ.ಮಂಜುನಾಥ್.

Mahatma Gandhi ಗಾಂಧಿ ಟೋಪಿಯನ್ನು ಧರಿಸುವುದು ಕೇವಲ ತೋರಿಕೆಯಾಗದೆ ಮಹಾತ್ಮರ ಆದರ್ಶಗಳ...