Thursday, October 3, 2024
Thursday, October 3, 2024

Shivamogga Dasara ಶಿವಮೊಗ್ಗ ಚಲನಚಿತ್ರ ದಸರಾ ಚಾಲನೆಗೆ ಹಿರಿಯ ನಟಿ ಉಮಾಶ್ರೀ ಆಗಮನ

Date:

Shivamogga Dasara ಶಿವಮೊಗ್ಗ ಮಹಾ ನಗರ ಪಾಲಿಕೆ ವತಿಯಿಂದ ಆಯೋಜಿಸಲಾಗಿರುವ ಶಿವಮೊಗ್ಗ ದಸರಾ ಭಾಗವಾಗಿ ಚಲನಚಿತ್ರ ದಸರಾ ಅ.04 ರಂದು ಆರಂಭವಾಗಲಿದೆ.

ಅಂಬೇಡ್ಕರ್ ಭವನದಲ್ಲಿ ಅ. ೦೪ರಂದು ಬೆಳಿಗ್ಗೆ 9 :30ಕ್ಕೆ ಹೆಸರಾಂತ ಚಲನಚಿತ್ರ ಕಲಾವಿದೆ, ಮಾಜಿ ಸಚಿವೆ, ಹಾಲಿ ವಿಧಾನ ಪರಿಷತ್ ಸದಸ್ಯೆ ಉಮಾಶ್ರೀ ಯವರು ಚಲನಚಿತ್ರೋತ್ಸವಕ್ಕೆ ಚಾಲನೆ ನೀಡಲಿದ್ದಾರೆ.

ಇದೇ ಸಂದರ್ಭದಲ್ಲಿ ಆಯೋಜಿಸಲಾಗಿರುವ ಛಾಯಾಚಿತ್ರ ಪ್ರದರ್ಶನ, ಕ್ಯಾಮರಾ ಪ್ರದರ್ಶನ, ಪತ್ರಿಕೆಗಳ ಪ್ರದರ್ಶನ, ವ್ಯಂಗ್ಯ ಚಿತ್ರ ಪ್ರದರ್ಶನಗಳಿಗೆ ಖ್ಯಾತ ಚಿತ್ರ ಸಾಹಿತಿ ಡಾ. ವಿ. ನಾಗೇಂದ್ರ ಪ್ರಸಾದ್ ಚಾಲನೆ ನೀಡಿ, ಚಲನಚಿತ್ರ ಸಂಗೀತ ಬೆಳೆದು ಬಂದ ದಾರಿಯನ್ನು ಅವಲೋಕಿಸಲಿದ್ದಾರೆ.

ಪೃಥ್ವಿಗೌಡ, ಸಂಗೀತ ಹುಂಚರವರು ಗೀತೆಗಳನ್ನು ಹಾಡಲಿದ್ದಾರೆ.ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಭೀಮ ಚಿತ್ರದ ಖ್ಯಾತಿಯ ಇನ್ಸ್ಪೆಕ್ಟರ್ ಪಾತ್ರಧಾರಿ ಪ್ರಿಯಾ, ಚಲನಚಿತ್ರ ನಟ ಅವಿನಾಶ್, ಶಾಖಾಹಾರಿ ಚಿತ್ರದ ನಿರ್ದೇಶಕ ಸಂದೀಪ್ ಸುಂಕದ್, ನಿರ್ಮಾಪಕ ರಾಜೇಶ್ ಕೀಳಂಬಿ ಪಾಲ್ಗೊಳ್ಳಲಿದ್ದಾರೆ.

ವಿಧಾನ ಪರಿಷತ್ ಸದಸ್ಯರಾದ ಡಿ.ಎಸ್. ಅರುಣ್, ವಾರ್ತಾಽಕಾರಿ ಮಾರುತಿ, ಸಿನಿಮೊಗೆ-ಶಿವಮೊಗ್ಗ ಚಿತ್ರ ಸಮಾಜ, ಬೆಳ್ಳಿಮಂಡಲದ ಸಂಚಾಲಕ ವೈದ್ಯ, ಆಯುಕ್ತರು ಹಾಗೂ ದಸರಾ ಚಲನಚಿತ್ರೋತ್ಸವ ಸಮಿತಿ ಅಧ್ಯಕ್ಷರಾದ ಡಾ. ಕವಿತಾ ಯೋಗಪ್ಪನವರ್, ಕಾರ್ಯದರ್ಶಿ ಯಶವಂತ್, ಮಲ್ಲಿಕಾರ್ಜುನ ಚಿತ್ರ ಮಂದಿರದ ಮಾಲೀಕರಾದ ಹೆಚ್. ಆರ್. ಶೈಲೇಶ್, ಶ್ರೀ ವೀರಭದ್ರೇಶ್ವರ ಚಿತ್ರ ಮಂದಿರದ ಮಾಲೀಕರಾದ ಎನ್. ಜೆ. ವೀರಣ್ಣ ಪಾಲ್ಗೊಳ್ಳಲಿದ್ದಾರೆ.

Shivamogga Dasara ಅಧ್ಯಕ್ಷತೆಯನ್ನು ಶಾಸಕ ಎಸ್. ಎನ್. ಚನ್ನಬಸಪ್ಪ ವಹಿಸಲಿದ್ದಾರೆ.
ಚಿತ್ರೋತ್ಸವದ ಮೊದಲ ಚಿತ್ರವಾಗಿ ಮಲ್ಲಿಕಾರ್ಜುನ ಚಿತ್ರಮಂದಿರದಲ್ಲಿ ಶಾಖಾಹಾರಿ ಚಿತ್ರ ಪ್ರಡರ್ಶನ ನಡೆಯಲಿದೆ.
ಇದೇ ಸಂದರ್ಭದಲ್ಲಿ ನಗರದ ಖ್ಯಾತ ಪತ್ರಿಕಾ ಛಾಯಾಗ್ರಾಹಕರಾದ ಶಿವಮೊಗ್ಗ ನಂದನ್, ಶಿವಮೊಗ್ಗ ನಾಗರಾಜ್‌ರವರ ಛಾಯಾಚಿತ್ರಗಳ ಪ್ರದರ್ಶನ, ಪ್ರದೀಪ್ ಕುಮಾರ್-ವಾಸುಕಿ ಕುಮಾರ್‌ರವರ ಅಪರೂಪದ ಕ್ಯಾಮರಾಗಳ ಪ್ರದರ್ಶನ ನಡೆಯಲಿದೆ.

ಚಿತ್ರ ಪ್ರದರ್ಶನ
ನಾಲ್ಕು ದಿನಗಳ ಈ ಚಿತ್ರೋತ್ಸವದಲ್ಲಿ ಅ. 05ರಂದು ಬೆಳಿಗ್ಗೆ 9:00ಗಂಟೆಗೆ ಶ್ರೀ ವೀರಭದ್ರೇಶ್ವರ ಚಿತ್ರಮಂದಿರದಲ್ಲಿ ಟಗರು ಪಲ್ಯ, 06ರ ಭಾನುವಾರ ಬೆಳಿಗ್ಗೆ ಮಲ್ಲಿಕಾರ್ಜುನ ಚಿತ್ರ ಮಂದಿರದಲ್ಲಿ ಕಂಬ್ಳಿಹುಳ, ಅ. 07ರಂದು ಬೆಳಿಗ್ಗೆ 9:00ಗಂಟೆಗೆ ಶ್ರೀ ವೀರಭದ್ರೇಶ್ವರ ಚಿತ್ರಮಂದಿರದಲ್ಲಿ ಕಾಲಾಪತ್ಥರ್ ಚಿತ್ರಗಳು ಪ್ರದರ್ಶನ ಕಾಣಲಿವೆ.

ಚಲನಚಿತ್ರ ಕಾರ್ಯಗಾರ
ದಸರಾ ಚಲನಚಿತ್ರೋತ್ಸವದ ಭಾಗವಾಗಿ ಅ. 05ರ ಶನಿವಾರ ಬೆಳಿಗ್ಗೆ 9:00ರಿಂದ 12ರ ವರೆಗೆ ಅಂಬೇಡ್ಕರ್ ಭವನದಲ್ಲಿ ಚಲನಚಿತ್ರ ಕ್ಕೆ ಸಂಬಂಧಿಸಿದ ಕಾರ್ಯಗಾರ ನಡೆಯಲಿದ್ದು, ಕಿರುಚಿತ್ರ ನಿರ್ಮಾಣ ಕುರಿತು ರಾಮ ರಾಮ ರೇ ಖ್ಯಾತಿಯ ನಿರ್ದೇಶಕ-ನಟ ಡಿ. ಸತ್ಯಪ್ರಕಾಶ್, ಮಾತನಾಡಲಿದ್ದು, ಛಾಯಾಗ್ರಾಹಣ ಒಂದು ಅನುಸಂಧನ ಕುರಿತು ಪ್ರಸಿದ್ಧ ಛಾಯಾಗ್ರಾಹಕ ಶ್ರೀಶ ಕೂದುವಳ್ಳಿ, ಛಾಯಾಗ್ರಾಹಣ ವರ್ತಮಾನದ ಬೆಳವಣ ಗೆಗಳು ಕುರಿತು ಗುರು ಪ್ರಸಾದ ಕಾಶಿ ಮಾತನಾಡಲಿದ್ದಾರೆ.

ಚಲನಚಿತ್ರ ಆಸಕ್ತರು ಈ ಎಲ್ಲಾ ಕಾರ್ಯಕ್ರಮಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಕೋರಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Jawahar Navodaya Vidyalaya ಗಾಜನೂರಿನ ನವೋದಯ ಶಾಲಾ ಪ್ರವೇಶಾತಿ 2025-26 ಪರೀಕ್ಷೆಗೆ ಆನ್ ಲೈನ್ ಅರ್ಜಿ ಆಹ್ವಾನ

Jawahar Navodaya Vidyalaya ಜವಾಹರ ನವೋದಯ ವಿದ್ಯಾಲಯವು 2025-26ನೇ ಸಾಲಿಗೆ 9...

Department of Parliamentary Affairs and Legislation ಅಕ್ಟೋಬರ್ 5 ರಂದು ನಡೆಯುವ “ಯುವ ಸಂಸತ್” ಸ್ಥಳ‌ ಬದಲಾವಣೆ ಗಮನಿಸಿ

Department of Parliamentary Affairs and Legislation ಸಂಸದೀಯ ಮತ್ತು ವ್ಯವಹಾರಗಳು...

MESCOM ಅ.4 ರಿಂದ7 ವರೆಗೆ ಮೆಸ್ಕಾಂ ಆನ್ ಲೈನ್ ಸೇವೆ ತಾತ್ಕಾಲಿಕ ಅಲಭ್ಯ

MESCOM ಅ.04ರಿಂದ 07 ರ ವರೆಗೆ ಮೆಸ್ಕಾಂ ಮಾಹಿತಿ ತಂತ್ರಜ್ಞಾನ...

Navaratri Festival ಬಂಗಾರಮಕ್ಕಿಯಲ್ಲಿ ಶರನ್ನವರಾತ್ರಿ ಉತ್ಸವ

Navaratri Festival ಬಂಗಾರಮಕ್ಕಿಯ ಹೇಮಪುರ ಮಹಾಪೀಠದ ಶ್ರೀ ವಿಶ್ವ ವೀರಾಂಜನೇಯ...