Monday, February 2, 2026
Monday, February 2, 2026

Klive Special Article ನವರಾತ್ರಿ ಎರಡನೇ ದಿನ.ದೇವಿಯ ಶ್ರೀಬ್ರಹ್ಮಚಾರಿಣಿ ರೂಪದಲ್ಲಿ ಆರಾಧನೆ. ಲೇ: ಎನ್.ಜಯಭೀಮ ಜೊಯ್ಸ್.ಶಿವಮೊಗ್ಗ.

Date:

Klive Special Article “ದಧಾನಾಂ ಕರಪದ್ಮಾಭ್ಯಾಂ
ಅಕ್ಷಮಾಲಾ ಕಮಂಡಲೂ/
ದೇವಿ ಪ್ರಸೀದತು ಮಯಿ
ಬ್ರಹ್ಮಚಾರಿಣ್ಯನುತ್ತಮಾ//

ಮೊದಲನೆಯ ದಿನ ದೇವಿಯ ಶೈಲಪುತ್ರಿರೂಪದಿಂದ ಪೂಜಿಸಲ್ಪಡುತ್ತಾಳೆ.ಇಂದು ನವರಾತ್ರಿಯ ಎರಡನೇ ದಿವಸ.
ಎರಡನೆಯ ದಿನ ದೇವಿಯನ್ನು ಬ್ರಹ್ಮಚಾರಿಣಿ
ರೂಪದಲ್ಲಿ ಪೂಜಿಸಲಾಗುತ್ತದೆ.
ಜಗನ್ಮಾತೆಯನ್ನು ಬ್ರಾಹ್ಮೀ ಸ್ವರೂಪದಲ್ಲಿ
ನೋಡುವಬಗೆ,ಕಮಂಡಲುಧಾರಿಣಿ,ಅಕ್ಷಮಾಲೆ.ಸಪ್ತಮಾತೃಕೆಯರಲ್ಲಿ ಬ್ರಾಹ್ಮಿಯೂ ಒಬ್ಬಳೆಂದು ಗುರುತಿಸಲ್ಪಟ್ಟಿದ್ದಾಳೆ.ಬ್ರಹ್ಮಚಾರಿಣಿ ಎಂದರೆ ಸಂತೋಷ ಮತ್ತುಶಾಂತ ಶಕ್ತಿಯನ್ನು ಹೊಂದಿರುವ ರೂಪ.ಮೋಕ್ಷವನ್ನು ಬಯಸಿಅಥವಾ ಕಾರ್ಯಗಳ
ವಿಮೋಚನೆಗೆ ಬಯಸಿ ದೇವಿಯ ಈ ಅವತಾರಕ್ಕೆ ಪೂಜೆ ಸಲ್ಲಿಸಿ ಆರಾಧಿಸಿದರೆದೇವಿ ಅನುಗ್ರಹ ಮಾಡುವಳು.
Klive Special Article ಪ್ರಜಾಪತಿ ದಕ್ಷನಿಂದ ತನ್ನ ಪತಿ ಶಿವನು ಅವಮಾನಿತಗೊಂಡಾಗ,ಸತಿಯಾಗಿ ಮರುಜನ್ಮ ಪಡೆದು
ಮತ್ತೆ ಶಿವನನ್ನೇ ವರಿಸಲು ಬ್ರಹ್ಮಚಾರಿಣಿಯಾಗಿ ಅವತರಿಸಿದ ರೂಪವೇ ಬ್ರಹ್ಮಚಾರಿಣಿ ದೇವಿ.
ಶಿವನನ್ನು ವಿವಾಹವಾಗಲು ದೀರ್ಘಕಾಲ ಬ್ರಹ್ಮಚಾರಿಣಿಯು ಹಣ್ಣು-ಎಲೆ ಸೇವಿಸುತ್ತಾ ,ನಂತರ ಎಲ್ಲವನ್ನೂ ನಿಲ್ಲಿಸಿ ಬಹಳ ಕಠೋರವಾಗಿ ತಪಸ್ಸನ್ನು ಆಚರಿಸುತ್ತಾಳೆ.ಈ ತಪಶಕ್ತಿಯಿಂದ ಶಿವನನ್ನು ಒಲಿಸಿಕೊಂಡು ವಿವಾಹವಾಗುವ ಅವತಾರವೇ ಬ್ರಹ್ಮಚಾರಿಣಿ.
ಬಲಗೈಯಲ್ಲಿ ಜಪಮಾಲೆ,ಮತ್ತೊಂದು ಕೈಯಲ್ಲಿ ಕಮಂಡಲ ಹಿಡಿದು ನಿಂತ ಸ್ವರೂಪದಲ್ಲೇ ಬಹು ದೀರ್ಘಕಾಲತಪಸ್ಸನ್ನು ಆಚರಿಸಿ ತನ್ನನ್ನು ತಾನು ಶಿವನಿಗೆ ಅರ್ಪಿಸಿಕೊಂಡಿದ್ದರಿಂದ ಈ ದೇವಿಯನ್ನು ಅರ್ಪಣಾದೇವಿ ಎನ್ನುವ ಹೆಸರಿನಿಂದಲೂ ಕಲ
ರೆಯಲಾಗಿದೆ.ಮುಂದೆ ಈಶ್ವರನೂ ಪಾರ್ವತಿಯನ್ನು ಪತ್ನಿಯಾಗಿ ಸ್ವೀಕರಿಸುತ್ತಾನೆ.ಬ್ರಹ್ಮಚಾರಿಣಿಯ ಈ ಅವತಾರದಲ್ಲಿ ಬಲಗೈಯಲ್ಲಿ ಜಪಮಾಲೆ ಹಾಗೂ ಎಡಗೈಯಲ್ಲಿ ಕಮಂಡಲುವನ್ನು ಹಿಡಿದಿರುವ ದುರ್ಗೆಯ ರೂಪವನ್ನು ಕಾಣಬಹುದು.ದೇವಿಯ ಎರಡನೆಯ ಅವತಾರವಾದಬ್ರಹ್ಮಚಾರಿಣಿದೇವಿಯನ್ನುಆರಾಧಿಸಿ,
ಪೂಜಿಸಿ ದೇವಿಯ ಅನುಗ್ರಹಕ್ಕೆ ಪ್ರಾರ್ಥಿಸೋಣ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...