Friday, October 4, 2024
Friday, October 4, 2024

Madhu Bangarappa ಸಾರ್ವಜನಿಕರ ಅಹವಾಲುಗಳಿಗೆ ಸಕಾಲದಲ್ಲಿ ಅಗತ್ಯ ಸೌಲಭ್ಯ ಒದಗಿಸಿ- ಮಧು ಬಂಗಾರಪ್ಪ

Date:

Madhu Bangarappa ಸೌಲಭ್ಯ ಅರಸಿ ಕಚೇರಿಗೆ ಆಗಮಿಸುವ ಗ್ರಾಮೀಣ ಮತ್ತು ನಗರ ಪ್ರದೇಶದ ಸಾರ್ವಜನಿಕರಿಗೆ ಅಧಿಕಾರಿಗಳು ಸಕಾಲದಲ್ಲಿ ಅಗತ್ಯ ಸೌಲಭ್ಯಗಳನ್ನು ಒದಗಿಸಿಕೊಡುವಂತೆ ರಾಜ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಧು ಎಸ್ ಬಂಗಾರಪ್ಪ ಅವರು ಹೇಳಿದರು

ಅವರು ಇಂದು ಸಾಗರ ಸಮೀಪದ ತಾಳಗುಪ್ಪದಲ್ಲಿ ಏರ್ಪಡಿಸಲಾಗಿದ್ದ ಜನಸ್ಪಂದನಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು.

ಜಿಲ್ಲೆಯ ಎಲ್ಲಾ ತಾಲೂಕುಗಳನ್ನು ಸಮಾನ ದೃಷ್ಟಿಕೋನದಿಂದ ಗಮನಿಸುವುದಾಗಿ ತಿಳಿಸಿದ ಅವರು ತಾಳಗುಪ್ಪ ಹಾಗೂ ಸುತ್ತಮುತ್ತಲ ಗ್ರಾಮೀಣ ಪ್ರದೇಶಗಳ ಜನರ ಅಹವಾಲುಗಳನ್ನು ಆಲಿಸಿ, ಅವರ ಸಮಸ್ಯೆಗಳಿಗೆ ಸಕಾರಾತ್ಮಕವಾಗಿ ಸ್ಪಂದಿಸುವುದಾಗಿ ತಿಳಿಸಿದರು. ಜನರ ಎಲ್ಲಾ ಸಮಸ್ಯೆಗಳ ಪರಿಹಾರಕ್ಕಾಗಿ ಸರ್ಕಾರ ಬದ್ದವಾಗಿದ್ದು, ಜನರು ಆತಂಕಪಡುವ ಅಗತ್ಯವಿಲ್ಲ. ಜನರ ಆಶೋತ್ತರಗಳಿಗೆ ಪೂರಕವಾಗಿ ಕಾರ್ಯಕ್ರಮಗಳನ್ನು ರೂಪಿಸಿ, ಅನುಸ್ತಾನಗೊಳಿಸುತ್ತಿದೆ ಎಂದರು.

Madhu Bangarappa ಜನಸಾಮಾನ್ಯರಿಗೆ ಸರ್ಕಾರದ ವಿವಿಧ ಇಲಾಖೆಗಳ ಸೌಲಭ್ಯ ನೀಡುವ ಸಂದರ್ಭಗಳಿದ್ದಲ್ಲಿ ಜನಪ್ರತಿನಿದಿಗಳ ಸೂಚನೆಗಾಗಿ ಕಾಯದೆ ಸೌಲಭ್ಯ ಗಳನ್ನು ವಿತರಿಸಿವಂತೆ ಹಾಗೂ ಅಭಿವೃದ್ಧಿ ಕಾರ್ಯಗಳಲ್ಲಿ ಇನ್ನಷ್ಟು ವೇಗ ಹೆಚ್ಚಿಸುವಂತೆ ಅವರು ಸೂಚಿಸಿದರು.

94ಸಿ ಯೋಜನೆ ಗ್ರಾಮೀಣ ಬಡ ಜನರಿಗೆ ಹಕ್ಕುಪತ್ರ ನೀಡಿ ಅವರ ನೆಮ್ಮದಿಯ ಬದುಕಿಗೆ ಆಸರೆಯಾಗುವ ಸರ್ಕಾರದ ಮಹತ್ವಕಾoಕ್ಷಿ ಯೋಜನೆ ಯಾಗಿದ್ದು, ಈ ಯೋಜನೆಯ ಅನುಸ್ತಾನಕ್ಕಾಗಿ ಅಂದು ಹಗಲಿರುಳು ಶ್ರಮಿಸಿದ ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಅವರು ಅಭಿನಂದನಾರ್ಹರು ಎಂದರು.

ಈ ಜನಸ್ಪಂದನ ಕಾರ್ಯಕ್ರಮದಿಂದಾಗಿ ಸರ್ಕಾರವೇ ಜನರ ಮನೆ ಬಾಗಿಲಿಗೆ ತೆರಳಿ ಅವರ ಸಮಸ್ಯೆಗೆ ಪರಿಹಾರ ನೀಡುತ್ತಿದೆ. ಜನಸ್ಪಂದನದಲ್ಲಿ ಸ್ವೀಕರಿಸಲಾಗುವ ಅರ್ಜಿಗಳನ್ನು ವಿಲೇವಾರಿ ಹಾಗೂ ಪ್ರತಿ ಹಂತದ ಬೆಳವಣಿಗೆಯನ್ನು ಮಾನ್ಯ ಮುಖ್ಯ ಮಂತ್ರಿಗಳ ಕಚೇರಿಯಿಂದ ಗಮನಿಸಲಾಗುತ್ತಿದೆ ಎಂದ ಅವರು ವಯಸ್ಕರು, ವಿಕಲಾoಗರು, ಮಹಿಳೆಯರು ನಂತರ ಸಾರ್ವಜನಿಕರು ತಮ್ಮ ಅಹವಾಲುಗಳನ್ನು ಸಲ್ಲಿಸಬಹುದಾಗಿದೆ ಎಂದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N.Chennabasappa ಬನ್ನಿ ಪೂಜೆಗೆ ಶಾಸಕ ಚೆನ್ನಿ ಅವರಿಂದ ಪೂರ್ವೋಚಿತ ಸಿದ್ಧತೆ

S.N.Chennabasappa ನವರಾತ್ರಿ ಉತ್ಸವದ ಕಡೆಯ ದಿನದಂದು ನಗರದ ಅಲ್ಲಮಪ್ರಭು ಮೈದಾನದಲ್ಲಿ (ಫ್ರೀಡಂ...

Shree Sigandur Chowdeshwari Temple ಸಿಗಂದೂರು ದೇವಿ ವೈಭವದ ನವರಾತ್ರಿ ಉತ್ಸವ

Shree Sigandur Chowdeshwari Temple ಶ್ರೀ ಕ್ಷೇತ್ರ ಸಿಗಂದೂರಿನಲ್ಲಿ...

CM Siddharamaiah ಚಾಮುಂಡೇಶ್ವರಿ ಆಶೀರ್ವಾದದಿಂದಲೇ ಎರಡನೇ ಬಾರಿಗೆ ಮುಖ್ಯಮಂತ್ರಿಯಾಗಿದ್ದೇನೆ- ಸಿದ್ಧರಾಮಯ್ಯ

CM Siddharamaiah ತಾಯಿ ಚಾಮುಂಡೇಶ್ವರಿ ಹಾಗೂ ಇಲ್ಲಿನ ಜನರ ಆಶೀರ್ವಾದದಿಂದಲೇ ಎರಡನೇ...

MESCOM ಅ.6 ರಂದು ಮಂಡ್ಲಿ ಸುತ್ತಮುತ್ತ ಕೆಲವೆಡೆ ಮೆಸ್ಕಾಂ ವಿದ್ಯುತ್ ಸರಬರಾಜು ಇರುವುದಿಲ್ಲ

MESCOM ಶಿವಮೊಗ್ಗ ನಗರ ಉಪವಿಭಾಗ-2ರ ಮಂಡ್ಲಿ ವ್ಯಾಪ್ತಿಯಲ್ಲಿ ತುರ್ತು ನಿರ್ವಹಣೆಯ...