Sunday, December 7, 2025
Sunday, December 7, 2025

Chain Snatching ಬಸ್ ಪ್ರಯಾಣದಲ್ಲಿ ಚಿನ್ನಾಭರಣ ಕಳವು ಪ್ರಕರಣ

Date:

Chain Snatching ಬಂಗಾರದ ಕಿವಿರಿಂಗ್ ರಿಪೇರಿ ಮಾಡಿಸಲು ಬಜಾರ್ ಗೆ ಬಂದಿದ್ದ ಮಹಿಳೆ ಬಂಗಾರದ ಅಂಗಡಿ ಬಂದ್ ಮಾಡಿದ ಪರಿಣಾಮ ಬಸ್ ನಿಲ್ಧಾಣಕ್ಕೆ ಹೋಗಿ ಮನೆವಸ್ತುಗಳನ್ನು ಖರೀದಿಸಿ ಬಿಲ್ ನೀಡಲು ಮುಂದಾದಾಗ ಚಿನ್ನಾಭರಣ ಕಳೆದುಕೊಂಡಿರುವ ಘಟನೆ ನಡೆದಿದೆ‌.
ಹೊಸಳ್ಳಿಯ ನಿವಾಸಿಯ ಮಹಿಳೆ ತಮ್ಮ
ದೊಡ್ಡಮ್ಮನ ಮಗಳ ಜೊತೆ ಸೆ.21 ರಂದು ಬಟ್ಟೆ ಖರೀದಿ ಮಾಡಲು ಮತ್ತು ಬಂಗಾರದ ಕಿವಿರಿಂಗ್ ರಿಪೇರಿ ಹಾಗೂ ಮನೆ ಸಾಮಾನುಗಳನ್ನು ಖರೀದಿಸಲು ಊರಿನಿಂದ ಶಿವಮೊಗ್ಗಕ್ಕೆ ಬಂದಿದ್ದರು.
ಗಾಂಧಿಬಜಾರ್ ನಲ್ಲಿ ಬಟ್ಟೆ ಮತ್ತು ಮನೆ ಸಾಮಾನುಗಳನ್ನು ಖರೀದಿಸಿದ ನಂತರ ಕಿವಿರಿಂಗ್ ರಿಪೇರಿ ಮಾಡಿಸಲು ಅಂಗಡಿಗೆ ಹೋಗಿ ನೋಡಿದಾಗ ಅಂಗಡಿ ಬಂದ್ ಆಗಿದ್ದರಿಂದ ವಾಪಾಸ್ ಊರಿಗೆ ಹೋಗಲು ಶಿವಪ್ಪನಾಯಕ ಸರ್ಕಲ್ ನಲ್ಲಿ ಕೆ.ಎಸ್.ಆರ್.ಟಿ.ಸಿ ಬಸ್ ನ್ನು ಹತ್ತಿ ಬಸ್ ಸ್ಟ್ಯಾಂಡ್ ಗೆ ಬಂದಿದ್ದಾರೆ.

Chain Snatching ಬಸ್ ಸ್ಟ್ಯಾಂಡ್ ನಲ್ಲಿ ಮದ್ಯಾಹ್ನ 04-30 ಗಂಟೆಗೆ ಸ್ಮಾರ್ಟ್ ಬಜಾರ್ ನಲ್ಲಿ ಸಾಮಾನುಗಳನ್ನು ಖರೀದಿಸಿದ ನಂತರ ಬಿಲ್ ಕೊಡಲು ಬ್ಯಾಗ್ ನಲ್ಲಿದ್ದ ಪರ್ಸ್ ನ್ನು ತೆಗೆಯಲು ಹೋದಾಗ ಬ್ಯಾಗಿನ ಜಿಪ್ ಅರ್ಧ ತೆರೆದಿದ್ದು, ತಕ್ಷಣ ಮಹಿಳೆಯು ಗಾಭರಿಯಾಗಿ ಬ್ಯಾಗ್ ನ್ನು ಚೆಕ್ ಮಾಡಿದಾಗ ಬ್ಯಾಗ್ ನಲ್ಲಿದ್ದ ಬಂಗಾರದ ಒಡವೆಗಳಿದ್ದ ಪರ್ಸ್ ಇರಲಿಲ್ಲ.
ಪರ್ಸ್ ನಲ್ಲಿ 1) 2010 ನೇ ಸಾಲಿನಲ್ಲಿ ಖರೀದಿಸಿ ಸುಮಾರು 6 ಗ್ರಾಂ 800 ಮೀಲಿ ತೂಕದ ಸುಮಾರು 25,000/-ರೂ ಬೆಲೆಬಾಳುವ ಬಂಗಾರದ ಸ್ನೇಕ್ ಚೈನ್ ಮತ್ತು 2) ಸುಮಾರು 3 ಗ್ರಾಂ 500 ಮೀಲಿ ತೂಕದ 12,000/ -ರೂ ಬೆಲೆಬಾಳುವ ಒಂದು ಜೊತೆ ಬಂಗಾರದ ಕಿವಿರಿಂಗ್ ಇದ್ದುದ್ದ ಪರ್ಸ್ ಕಳುವಾಗಿತ್ತು.
ಶಿವಪ್ಪನಾಯಕ ಸರ್ಕಲ್ ನಿಂದ ಬಸ್ ಸ್ಟ್ಯಾಂಡ್ ಗೆ ಬಸ್ ನಲ್ಲಿ ಬರುವಾಗ ಅವರ ಬ್ಯಾಗ್ ನ ಜಿಪ್ ನ್ನು ತೆಗೆದು ಬಂಗಾರದ ಒಡವೆಗಳಿದ್ದ ಪರ್ಸ್ ನ್ನು ಕಳ್ಳತನ ಮಾಡಿಕೊಂಡು ಹೋಗಿರುವ ಬಗ್ಗೆ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

CM Siddharamaiah ಕಾಂಗ್ರೆಸ್ ಕಾರ್ಯಕರ್ತ ಗಣೇಶ್ ಗೌಡ ಹತ್ಯೆ, ಸೀಎಂ ಸಿದ್ಧರಾಮಯ್ಯ ಖಂಡನೆ

CM Siddharamaiah ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ಸಖರಾಯಪಟ್ಟಣದ ಕಾಂಗ್ರೆಸ್ ಕಾರ್ಯಕರ್ತ...

ಶಾಲಾ ಬಸ್ ಅತಿವೇಗ ಚಾಲನೆ, ಬೈಕಿಗೆ ಢಿಕ್ಕಿ‌ ಸವಾರನ ಸ್ಥಿತಿ ಗಂಭೀರ

ಶಾಲಾ ಪ್ರವಾಸಕ್ಕೆ ಮಕ್ಕಳನ್ನು ಕರೆದೊಯ್ಯುತ್ತಿದ್ದ ಖಾಸಗಿ ಬಸ್ಸು ಮತ್ತು ಬೈಕ್ ನಡುವೆ...

B.Y.Raghavendra ಆರ್.ಎಸ್.ಎಸ್. ಗೃಹ ಸಂಪರ್ಕ ಅಭಿಯಾನದಲ್ಲಿ ಸಂಸದ ರಾಘವೇಂದ್ರ ಭಾಗಿ.

B.Y.Raghavendra ರಾಷ್ಟ್ರೀಯ ಸ್ವಯಂಸೇವಕ ಸಂಘದ ನೂರನೇ ವರ್ಷದ ಪ್ರಯುಕ್ತ, ಇಂದು...