Bhadravati Police 2019 ರಲ್ಲಿ ಪರೀಕ್ಷೆಯ ಹಿನ್ನೆಲೆಯಲ್ಲಿ ಶಿವಮೊಗ್ಗದ ಬಾಪೂಜಿ ನಗರದಲ್ಲಿ ಟ್ಯೂಷನ್ ಮುಗಿಸಿಕೊಂಡು ವಾಪಾಸ್ ಭದ್ರಾವತಿಗೆ ಬೈಕ್ ನಲ್ಲಿ ಹೋಗುವಾಗ ಮೂವರು ಅಪರಿಚಿತರಿಂದ ನಡೆದ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳಿಗೆ ನ್ಯಾಯಾಲಯ ಶಿಕ್ಷೆ ಪ್ರಕಟಿಸಿದೆ.
2019ರಲ್ಲಿ ಮೊಹಮ್ಮದ್ ಖಾಲೀದ್ (21) ವಾಪಾಸ್ ಭದ್ರಾವತಿಗೆ ಶಿವಮೊಗ್ಗದಿಮದ ವಾಪಾಸ್ ಹೋಗುವಾಗ ರಾಷ್ಟ್ರೀಯ ಹೆದ್ದಾರಿ 206 ರಲ್ಲಿರುವ ಪಾಪಣ್ಣನ ಕ್ಯಾಂಟೀನ್ ಮುಂದೆ ದ್ವಿ ಚಕ್ರ ವಾಹನದಲ್ಲಿ ಹೋಗುತ್ತಿದ್ದಾಗ ಮೂವರು ಅಪರಿಚಿತ ವ್ಯಕ್ತಿಗಳು ಬಂದು ಅವರನ್ನು ತಡೆದು ಅಡ್ಡಗಟ್ಟಿ ನಿಲ್ಲಿಸಿ ನಗದು ಹಣ, ಮೊಬೈಲ್ ಫೋನ್ ಮತ್ತು ವಾಚ್ ಅನ್ನು ಕಿತ್ತು ಕೊಂಡು ಹೋಗಿದ್ದರು.
ಪ್ರಕರಣವು ಭದ್ರಾವತಿ ನ್ಯೂ ಟೌನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.
ಪ್ರಕಣದಲ್ಲಿ ಆಗಿನ ತನಿಖಾಧಿಕಾರಿಗಳಾದ ಭದ್ರಾವತಿ ನಗರ ವೃತ್ತ ಸಿಪಿಐ ರಾಘವೇಂದ್ರ ಕಾಂಡಿಕೆ, ಪ್ರಕರಣದ ತನಿಖೆ ಪೂರೈಸಿ ನ್ಯಾಯಾಲಯಕ್ಕೆ ದೋಷಾರೋಪಣಾ ಪತ್ರವನ್ನು ಸಲ್ಲಿಸಿದ್ದರು.
Bhadravati Police ನ್ಯಾಯಾಲಯದಲ್ಲಿ ಸರ್ಕಾರದ ಪರವಾಗಿ ರತ್ನಮ್ಮ ಪಿ, ಸರ್ಕಾರಿ ಅಭಿಯೋಜಕರಾಗಿ ವಾದ ಮಂಡಿಸಿದ್ದರು,
ಘನ ೪ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಶಿವಮೊಗ್ಗ (ಪೀಠಾಸೀನ ಭದ್ರಾವತಿ)ಯಲ್ಲಿ ಪ್ರಕರಣದ ವಿಚಾರಣೆ ನಡೆದು, ಆರೋಪಿತರ ವಿರುದ್ಧ ಆರೋಪ ದೃಡಪಟ್ಟ ಹಿನ್ನೆಲೆಯಲ್ಲಿ ನ್ಯಾಯಾಧೀಶೆ ಇಂದಿರಾ ಮೈಲಸ್ವಾಮಿ ಚೆಟ್ಟಿಯಾರ ಆರೋಪಿತರಾದ ಶಿವಮೊಗ್ಗ ನಗರದ ಸಯ್ಯದ್ ಇಬ್ರಾಹಿಂ (23), ಮೊಹಮ್ಮದ್ ಮುಸ್ತಫಾ (22), ಮೊಹಮ್ಮದ್ ಅಲ್ಲಾಭಕ್ಷಿ (22) ಇವರಿಗೆ. 05 ವರ್ಷ 1 ತಿಂಗಳು ಸಾದಾ ಕಾರಾವಾಸ ಶಿಕ್ಷೆ ವಿಧಿಸಿ ಆದೇಶಿಸಿದ್ದಾರೆ.