Thursday, May 28, 2026
Thursday, May 28, 2026

Bhadravati Police ವಾಹನ ಸವಾರನ ಮೇಲೆ ದಾಳಿ ನಡೆಸಿ ದರೋಡೆಗೈದ ಮೂವರು ಆರೋಪಿಗಳಿಗೆ ಕೋರ್ಟ್ ಶಿಕ್ಷೆ ಪ್ರಕಟ

Date:

Bhadravati Police 2019 ರಲ್ಲಿ ಪರೀಕ್ಷೆಯ ಹಿನ್ನೆಲೆಯಲ್ಲಿ ಶಿವಮೊಗ್ಗದ ಬಾಪೂಜಿ ನಗರದಲ್ಲಿ ಟ್ಯೂಷನ್ ಮುಗಿಸಿಕೊಂಡು ವಾಪಾಸ್ ಭದ್ರಾವತಿಗೆ ಬೈಕ್ ನಲ್ಲಿ ಹೋಗುವಾಗ ಮೂವರು ಅಪರಿಚಿತರಿಂದ ನಡೆದ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳಿಗೆ ನ್ಯಾಯಾಲಯ ಶಿಕ್ಷೆ ಪ್ರಕಟಿಸಿದೆ.

2019ರಲ್ಲಿ ಮೊಹಮ್ಮದ್ ಖಾಲೀದ್ (21) ವಾಪಾಸ್ ಭದ್ರಾವತಿಗೆ ಶಿವಮೊಗ್ಗದಿಮದ ವಾಪಾಸ್ ಹೋಗುವಾಗ ರಾಷ್ಟ್ರೀಯ ಹೆದ್ದಾರಿ 206 ರಲ್ಲಿರುವ ಪಾಪಣ್ಣನ ಕ್ಯಾಂಟೀನ್ ಮುಂದೆ ದ್ವಿ ಚಕ್ರ ವಾಹನದಲ್ಲಿ ಹೋಗುತ್ತಿದ್ದಾಗ ಮೂವರು ಅಪರಿಚಿತ ವ್ಯಕ್ತಿಗಳು ಬಂದು ಅವರನ್ನು ತಡೆದು ಅಡ್ಡಗಟ್ಟಿ ನಿಲ್ಲಿಸಿ ನಗದು ಹಣ, ಮೊಬೈಲ್ ಫೋನ್ ಮತ್ತು ವಾಚ್ ಅನ್ನು ಕಿತ್ತು ಕೊಂಡು ಹೋಗಿದ್ದರು.

ಪ್ರಕರಣವು ಭದ್ರಾವತಿ ನ್ಯೂ ಟೌನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.
ಪ್ರಕಣದಲ್ಲಿ ಆಗಿನ ತನಿಖಾಧಿಕಾರಿಗಳಾದ ಭದ್ರಾವತಿ ನಗರ ವೃತ್ತ ಸಿಪಿಐ ರಾಘವೇಂದ್ರ ಕಾಂಡಿಕೆ, ಪ್ರಕರಣದ ತನಿಖೆ ಪೂರೈಸಿ ನ್ಯಾಯಾಲಯಕ್ಕೆ ದೋಷಾರೋಪಣಾ ಪತ್ರವನ್ನು ಸಲ್ಲಿಸಿದ್ದರು.

Bhadravati Police ನ್ಯಾಯಾಲಯದಲ್ಲಿ ಸರ್ಕಾರದ ಪರವಾಗಿ ರತ್ನಮ್ಮ ಪಿ, ಸರ್ಕಾರಿ ಅಭಿಯೋಜಕರಾಗಿ ವಾದ ಮಂಡಿಸಿದ್ದರು,
ಘನ ೪ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಶಿವಮೊಗ್ಗ (ಪೀಠಾಸೀನ ಭದ್ರಾವತಿ)ಯಲ್ಲಿ ಪ್ರಕರಣದ ವಿಚಾರಣೆ ನಡೆದು, ಆರೋಪಿತರ ವಿರುದ್ಧ ಆರೋಪ ದೃಡಪಟ್ಟ ಹಿನ್ನೆಲೆಯಲ್ಲಿ ನ್ಯಾಯಾಧೀಶೆ ಇಂದಿರಾ ಮೈಲಸ್ವಾಮಿ ಚೆಟ್ಟಿಯಾರ ಆರೋಪಿತರಾದ ಶಿವಮೊಗ್ಗ ನಗರದ ಸಯ್ಯದ್ ಇಬ್ರಾಹಿಂ (23), ಮೊಹಮ್ಮದ್ ಮುಸ್ತಫಾ (22), ಮೊಹಮ್ಮದ್ ಅಲ್ಲಾಭಕ್ಷಿ (22) ಇವರಿಗೆ. 05 ವರ್ಷ 1 ತಿಂಗಳು ಸಾದಾ ಕಾರಾವಾಸ ಶಿಕ್ಷೆ ವಿಧಿಸಿ ಆದೇಶಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ಸಿದ್ಧರಾಮಯ್ಯ ರಾಜೀನಾಮೆ? ಡಿ.ಕೆ.ಶಿವಕುಮಾರ್ ಗೆ ಸೀಎಂ ಪಟ್ಟ?.

Breaking News ನವದೆಹಲಿಯಲ್ಲಿ ರಾಜಕೀಯ ಚಟುವಟಿಕೆ ಬಿರುಸಾಗಿ ನಡೆದಿದೆ. ರಾಜ್ಯದ ಕಾಂಗ್ರೆಸ್...

Akashavani Bhadravati ಜೂನ್ 2. ಭದ್ರಾವತಿ ಆಕಾಶವಾಣಿಯಿಂದ” ಬಾನುಲಿ ಬರಹ ” ವಿಶೇಷ ಕಾರ್ಯಾಗಾರ

Akashavani Bhadravati ಭಾರತದ ಸಾರ್ವಜನಿಕ ಪ್ರಸಾರ ಸೇವೆ ಸಂಸ್ಥೆಯಾದ ಪ್ರಸಾರ ಭಾರತಿಯ...

JCI Institute ಯುವ ನಾಯಕತ್ವ ಬೆಳವಣಿಗೆಯಲ್ಲಿ ಜೆಸಿಐ ಸಂಸ್ಥೆ ಸದಾ ಮುಂಚೂಣಿಯಲ್ಲಿದೆ- ವಿಜಯಲಕ್ಷ್ಮಿ ಕಡಂಬ.

JCI Institute ಸ್ಥಳೀಯ ಸಮಾಜಮುಖಿ ಕಾರ್ಯಗಳಲ್ಲಿ ಹಾಗೂ ಯುವ ನಾಯಕತ್ವದ ಬೆಳವಣಿಗೆಯಲ್ಲಿ...