Sunday, December 14, 2025
Sunday, December 14, 2025

Dasara Festival ದೇವಿಗೆ ನಾಲಗೆಯನ್ನೇ ಕತ್ತರಿಸಿ ಅರ್ಪಿಸಿದ ಭಕ್ತ!

Date:

Dasara Festival ದಸರಾ ಹಬ್ಬದಂದು 9 ದಿನಗಳ ಕಾಲ ದುರ್ಗಾ ದೇವಿಯ ಒಂಬತ್ತು ರೂಪಗಳನ್ನು ಪೂಜಿಸಲಾಗುತ್ತದೆ. ಪ್ರತಿ ವರ್ಷ ಆಶ್ವಿಯುಜ ಮಾಸದಲ್ಲಿ ಈ ಪೂಜೆ ನಡೆಯುತ್ತದೆ. ಈ ವರ್ಷ ಅಕ್ಟೋಬರ್ 3 ರಂದು ನವರಾತ್ರಿ ಪ್ರಾರಂಭವಾಗಿ ವಿಜಯದಶಮಿಗೆ ಮುಗಿದಿದೆ.
ಇನ್ನು ದೇಶದೆಲ್ಲೆಡೆ ಈ ಹಬ್ಬಗಳನ್ನು ವಿಜೃಂಭಣೆಯಿಂದ ಆಚರಿಸಲಾಯಿತು ಈ ಪೈಕಿ ಮಧ್ಯಪ್ರದೇಶದಲ್ಲಿ ಭಕ್ತರೊಬ್ಬರು ದೇವಿಗೆ ಅರ್ಪಿಸಿದ ನೈವೇದ್ಯ ನೋಡಿ ಸ್ಥಳೀಯರು ಬೆಚ್ಚಿಬಿದ್ದಿದ್ದಾರೆ. ಹೌದು, ರಾಮ್ ಸರಣ್ ಎಂಬ ಭಕ್ತ ತನ್ನ ನಾಲಿಗೆಯನ್ನು ಕತ್ತರಿಸಿ ದೇವಿಗೆ ಅರ್ಪಿಸಿದ್ದಾನೆ ಎಂದು ದೇವಸ್ಥಾನದ ಅರ್ಚಕ ಜೈ ಕಿಶನ್ ಹೇಳಿದ್ದಾರೆ.
ಈ ಭಕ್ತ ತನ್ನ ನಾಲಿಗೆಯನ್ನು ಸುಮಾರು ಮೂರು ಇಂಚು ಕತ್ತರಿಸಿ ದೇವಿಗೆ ಅರ್ಪಿಸಿದನೆಂದು ಹೇಳಲಾಗುತ್ತದೆ. ಅಲ್ಲದೆ, ಸ್ವಲ್ಪ ರಕ್ತವನ್ನೂ ಪಾತ್ರೆಯಲ್ಲಿ ತುಂಬಿ ಮಾತೆಗೆ ಅರ್ಪಿಸಿದ್ದಾನೆ.. ವಿಷಯ ತಿಳಿದ ನೆರೆಹೊರೆಯವರು ದೃಶ್ಯವನ್ನು ನೋಡಲು ದೇವಸ್ಥಾನಕ್ಕೆ ಆಗಮಿಸಿದ್ದಾರೆ. ರತ್ನಗಿರಿ ಅಮ್ಮನವರು ಅಂದ್ರೆ ನನಗೆ ಅಪಾರವಾದ ಭಕ್ತಿ ಮತ್ತು ನಂಬಿಕೆ ಇದೆ, ಅದಕ್ಕೆ ನನ್ನ ನಾಲಿಗೆಯನ್ನು ಅರ್ಪಿಸಿದೆ ಅಂತ ಭಕ್ತ ಹೇಳಿಕೊಂಡಿದ್ದಾನೆ ಎನ್ನಲಾಗಿದೆ..
Dasara Festival ಈ ರತ್ನನಗರ ದೇವಾಲಯವನ್ನು 2015 ರಲ್ಲಿ ನಿರ್ಮಿಸಲಾಯಿತು. ಈ ದೇವಾಲಯದಲ್ಲಿರುವ ದುರ್ಗಾ ಮಾತೆಯ ಮೇಲೆ ತಮಗೆ ಅಪಾರ ನಂಬಿಕೆಯಿದೆ ಎನ್ನುತ್ತಾರೆ ಭಕ್ತರು. ಲಹರ್ ನಗರದಲ್ಲಿರುವ ಈ ದೇವಾಲಯದಲ್ಲಿ ಅಮ್ಮನನ್ನು ಕಣ್ತುಂಬಿಕೊಳ್ಳಲು ಅಪಾರ ಸಂಖ್ಯೆಯಲ್ಲಿ ಜನರು ಬರುತ್ತಾರೆ. ಮೇಲಾಗಿ ಭಕ್ತನಿಗೆ ನಾಲಿಗೆ ಮರಳಿ ಬರುತ್ತದೆ ಎಂಬ ನಂಬಿಕೆಯೂ ಸಹ ಇದೆ.. ಎನ್ನುತ್ತಾರೆ ದೇವಸ್ಥಾನಕ್ಕೆ ಬರುವ ಭಕ್ತರು.
ನಿನ್ನೆ ಕೂಡ ದೇವಸ್ಥಾನದಲ್ಲಿ ಹವನ ಮಾಡಿದ ಭಕ್ತರು ಭಕ್ತಿಯಿಂದ ನಾಲಿಗೆ ಕತ್ತರಿಸಿ ದೇವಿಗೆ ಅರ್ಪಿಸಿದ್ದಾರೆ. ಇನ್ನು ಕೆಲವರು ಇಷ್ಟಾರ್ಥಗಳು ನೆರವೇರಿದಾಗ ದೇವಿಯ ಮೇಲಿನ ಭಕ್ತಿಯನ್ನು ತೋರಿಸಲು ಹೀಗೆ ಮಾಡುತ್ತಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...