Saturday, December 6, 2025
Saturday, December 6, 2025

Shivamogga Police ಬಸ್ ಹತ್ತುವಾಗ ಮಹಿಳೆಯ ಆಭರಣ ಕಳವು ಪೊಲೀಸ್ ಠಾಣೆಯಲ್ಲಿ ದೂರು ದಾಖಲು

Date:

Shivamogga Police ಶಿವಮೊಗ್ಗ ನಗರದ ಸರಕಾರಿ ಬಸ್ ನಿಲ್ದಾಣದಲ್ಲಿ ಮಹಿಳೆಯ ಚಿನ್ನಾಭರಣ ಕಳ್ಳತನ ಮಾಡಲಾಗಿದೆ.

ತಾಲೂಕಿನ ರಾಮೇನಕೊಪ್ಪದಲ್ಲಿರುವ ತವರು ಮನೆಗೆ ಬಂದಿದ್ದ 28 ವರ್ಷದ ಮಹಿಳೆ ಗಂಡನ ಮನೆಯಾದ ಶಿಕಾರಿಪುರದ ನೆಲವಾಗಿಲು ಗ್ರಾಮಕ್ಕೆ ವಾಪಾಸ್ ಆಗಲು ಶಿವಮೊಗ್ಗ ಬಸ್ ನಿಲ್ದಾಣದಲ್ಲಿ ಧರ್ಮಸ್ಥಳ-ಹುಬ್ಬಳ್ಳಿ KSRTC ಬಸ್ ಹತ್ತಿದ್ದಾರೆ. ಎಂದಿನಂತೆ ಬಸ್ ಹತ್ತಲು ರಶ್ ಆಗಿದೆ.

Shivamogga Police ರಶ್ ನಲ್ಲೇ ಸೀಟು ಹಿಡಿಯಲು ಮುಂದಾದ ಮಹಿಳೆಯು ಸೀಟು ಹಿಡಿದ ನಂತರ ವ್ಯಾನಿಟಿ ಬ್ಯಾಗ್ ನಲ್ಲಿದ್ದ ಆಧಾರ್ ಕಾರ್ಡ್ ತೆಗೆಯಲು ಬ್ಯಾಗ್ ನೋಡಿಕೊಂಡಿದ್ದಾರೆ. ವ್ಯಾನಿಟಿ ಬ್ಯಾಗ್ ನ ಜಿಪ್ ಅರ್ಧ ತೆಗೆದಿರುವುದು ಗಮನಕ್ಕೆ ಬಂದಿದೆ. ವ್ಯಾನಿಟಿ ಬ್ಯಾಗ್ ಪರಿಶೀಲಿಸಿದಾಗ ಬ್ಯಾಗ್ ನಲ್ಲಿದ್ದ ಚಿನ್ನಾಭರಣ ಮತ್ತು ಹಲವು ಕಾರ್ಡ್ ಗಳು ಕಾಣೆಯಾಗಿವೆ.

20 ಸಾವಿರದ ಕರಿಮಣಿ ಮತ್ತು ತಾಳಿಗುಂಡು ಇರುವ ತಾಳಿ ಸರ, ಈಶ್ವರನ ಡಾಲರ್, ಕೆನೆರಾ ಮತ್ತು ಇಂಡಿಯನ್ ಬ್ಯಾಂಕ್‌ನ ಎಟಿಎಂ ಕಾರ್ಡ್, ಕೆಎಂವೈ ಕಾರ್ಡ್, ಪಾನ್ ಕಾರ್ಡ್ ಕಳುವಾಗಿದೆ ಎಂದು ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಮಹಿಳೆ ದೂರು ದಾಖಲಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...