Monday, April 21, 2025
Monday, April 21, 2025

Actor Darshan ನಟ ದರ್ಶನ್​​ ಭೇಟಿಗಾಗಿ ಟೆಡ್ಡಿಬೇರ್​ ಧರಿಸಿ ಬಳ್ಳಾರಿ ಜೈಲಿಗೆ ಬಂದ ಅಭಿಮಾನಿ

Date:

Actor Darshan ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಕೇಸ್​ನಲ್ಲಿ ಬಳ್ಳಾರಿ ಜೈಲಿನಲ್ಲಿ ಶಿಕ್ಷೆ ಅನುಭವಿಸುತ್ತಿರುವ ನಟ ದರ್ಶನ್​​​​ ಅವರನ್ನು ನೋಡಲು ಅಭಿಮಾನಿಯೋರ್ವ ಟೆಡ್ಡಿ ಬೇರ್​ ಧರಿಸಿ ಶಿವಮೊಗ್ಗ ಜಿಲ್ಲೆಯ ಸಾಗರದಿಂದ ಆಗಮಿಸಿದ್ದಾನೆ.
ಬಳ್ಳಾರಿ ಕೇಂದ್ರ ಕಾರಾಗೃಹದೆದುರು ಇಂದು ಬೆಳಗ್ಗೆ ಅಭಿಮಾನಿ ಕಾರ್ತಿಕ್ ಎಂಬಾತ ಕಾಣಿಸಿಕೊಂಡಿದ್ದಾನೆ. ಟೆಡ್ಡಿಬೇರ್​ ಉಡುಪು ಧರಿಸಿ, We are waiting you D BOSS ಎಂಬ ಸಂದೇಶದ ಫಲಕ ಹಿಡಿದು ನಿಂತಿದ್ದ. ದರ್ಶನ್ ಆದಷ್ಟು ಬೇಗ ಜೈಲಿನಿಂದ ಹೊರಬರಲಿ ಎಂದು ಪ್ರಾರ್ಥಿಸುತ್ತಿರುವ ಈತ ಜೈಲು ಸಿಬ್ಬಂದಿಯನ್ನು ಮಾತನಾಡಿಸಿದ್ದಾನೆ. ಈ ವೇಳೆ ಆರೋಪಿಯ ಭೇಟಿಗೆ ಹೊರಗಿನವರಿಗೆ ಅವಕಾಶವಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Actor Darshan ಜೈಲಿಗೆ ದರ್ಶನ್ ಅವರ ಪತ್ನಿ ವಿಜಯಲಕ್ಷ್ಮೀ ಹಾಗೂ ವಕೀಲರು ಸೇರಿದಂತೆ ಕುಟುಂಬಸ್ಥರು, ಸ್ನೇಹಿತರು ಈಗಾಗಲೇ ಹಲವು ಬಾರಿ ಭೇಟಿ ನೀಡಿದ್ದಾರೆ. ಸಂಗೀತ ನಿರ್ದೇಶಕ ವಿ.ಹರಿಕೃಷ್ಣ ಮತ್ತು ನಿರ್ಮಾಪಕಿ ಶೈಲಜಾ ನಾಗ್​ ಕೂಡಾ ಇತ್ತೀಚೆಗೆ ಆಗಮಿಸಿದ್ದರು.
ರೇಣುಕಾಸ್ವಾಮಿ ಹತ್ಯೆ ಪ್ರಕರಣದ 2ನೇ ಆರೋಪಿಯಾಗಿರುವ ದರ್ಶನ್​ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ಬೆಂಗಳೂರಿನ 57ನೇ ಸಿಸಿಹೆಚ್ ನ್ಯಾಯಾಲಯದಲ್ಲಿ ಪೂರ್ಣಗೊಂಡಿದ್ದು, ಅಂತಿಮ ಆದೇಶ ಸೋಮವಾರ ಹೊರಬೀಳಲಿದೆ. ಸರ್ಕಾರದ ಪರವಾಗಿ ಅಭಿಯೋಜಕ ಪ್ರಸನ್ನ‌ಕುಮಾರ್ ಹಾಗೂ ದರ್ಶನ್ ಪರ ವಕೀಲ ಸಿ.ವಿ.ನಾಗೇಶ್ ವಾದಿಸಿದ್ದರು.

ಇದೇ ಪ್ರಕರಣದಲ್ಲಿ ಆರೋಪಿಗಳಾದ ಪವಿತ್ರಾಗೌಡ, ರವಿ, ನಾಗರಾಜ್, ಲಕ್ಷ್ಮಣ್ ಹಾಗೂ ದೀಪಕ್ ಜಾಮೀನು ಆದೇಶ ಕೂಡಾ ಇದೇ ದಿನ ಹೊರಬರಲಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Sri Chidambara Mahaswami ಗುಬ್ಬಿ ಚಿದಂಬರಾಶ್ರಮದಲ್ಲಿಎಲೆಕ್ಟ್ರಿಷಿಯನ್ ವೃತ್ತಿ ಶಿಕ್ಷಣಕ್ಕೆ ಅರ್ಜಿ ಆಹ್ವಾನ

Sri Chidambara Mahaswami ಶ್ರೀ ಶ್ರೀ ಚಿದಂಬರ ಮಹಾಸ್ವಾಮಿಗಳು ಶ್ರೀ ಚಿದಂಬರಾಶ್ರಮವನ್ನು...

CM Siddharamaih ಪೌರ ಕಾರ್ಮಿಕರ ಸೇವೆ ಖಾಯಂಗೊಳಿಸುವ ಕಾರ್ಯ ನಡೆಯುತ್ತಿದೆ- ಸಿದ್ಧರಾಮಯ್ಯ

CM Siddharamaih ಎಲ್ಲಾ ಪೌರ ಕಾರ್ಮಿಕರ ಸೇವೆಯನ್ನು ಕಾಯಂಗೊಳಿಸುವ ಕಾರ್ಯ ನಡೆಯುತ್ತಿದೆ.ಈಗಾಗಲೇ...

DC Shivamogga ಪರೀಕ್ಷಾರ್ಥಿಯ ಜನಿವಾರ ತೆಗೆಸಿದ ಪ್ರಕರಣ, ಈರ್ವರು ಗೃಹ ರಕ್ಷಕ ದಳ ಸಿಬ್ಬಂದಿ ಅಮಾನತು-ಗುರುದತ್ತ‌ ಹೆಗಡೆ

DC Shivamogga ಶಿವಮೊಗ್ಗ ನಗರದ ಖಾಸಗಿ ಶಿಕ್ಷಣ ಸಂಸ್ಥೆಯೊಂದರಲ್ಲಿ ಇತ್ತೀಚಿಗೆ...

Mental health ಮಾನಸಿಕ ಸಮಸ್ಯೆಗಳು‌‌ ಮತ್ತು‌ ಸೂಕ್ತ ಪರಿಹಾರಗಳು ...

Mental health ಮಾನಸಿಕ ಖಾಯಿಲೆಗಳು ಯಾರಿಗಾದರೂ ಬರಬಹುದು : ಸೂಕ್ತ...