Friday, March 20, 2026
Friday, March 20, 2026

Civil Defense Forum ಕಲುಷಿತಗೊಂಡ ನೀರು: ಪಾಲಿಕೆ ವಿರುದ್ಧ ನಾಗರಿಕ ಹಿತರಕ್ಷಣಾ ವೇದಿಕೆ ಆರೋಪ

Date:

Civil Defense Forum ಶಿವಮೊಗ್ಗ ನಗರದಲ್ಲಿ ಇತ್ತೀಚೆಗೆ, ಕಲುಷಿತ ಕುಡಿಯುವ ನೀರು ಪೂರೈಕೆಯಾಗುತ್ತಿರುವುದಕ್ಕೆ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದೆ. ಭಾರೀ ಮಳೆಯಿಂದ ನೀರಿನಲ್ಲಿ ಟರ್ಬಿಡಿಟಿ ಹೆಚ್ಚಾಗಿ ಸಮಸ್ಯೆಯಾಗಿದೆ ಎಂದು ಜಲ ಮಂಡಳಿ ತಿಳಿಸಿತ್ತು.
ಆದರೆ ನಾಗರೀಕರ ಹಿತರಕ್ಷಣಾ ವೇದಿಕೆಗಳ ಒಕ್ಕೂಟ ಇದನ್ನು ತಳ್ಳಿ ಹಾಕಿದೆ. ಕಲುಷಿತ ನೀರು ಸರಬರಾಜಿಗೆ ನೀರು ಶುದ್ಧೀಕರಣ ಘಟಕದಲ್ಲಿನ ಅಸಮರ್ಪಕ ನಿರ್ವಹಣೆ ಕಾರಣವಾಗಿದೆ ಎಂದು ಆರೋಪಿಸಿದೆ.
ಈ ಸಂಬಂಧ ಅ. 14 ರ ಬೆಳಿಗ್ಗೆ ಘಟಕದ ಪ್ರಮುಖರು ಮಂಡ್ಲಿಯಲ್ಲಿರುವ ನೀರು ಶುದ್ಧೀಕರಣ ಘಟಕಕ್ಕೆ ಭೇಟಿ ನೀಡಿ ಸತ್ಯಾಸತ್ಯತೆ ಪರಿಶೀಲಿಸಿದ್ದಾರೆ. ಭೇಟಿಯ ವೇಳೆ ಕಂಡುಬಂದ ವಿವರಗಳ ಕುರಿತಂತೆ ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿದೆ. ವಿವರ ಈ ಮುಂದಿನಂತಿದೆ.
Civil Defense Forum ಅಸಮರ್ಪಕ ನಿರ್ವಹಣೆ : ‘ಜಲ ಮಂಡಳಿ ಹೇಳುವಂತೆ, ಮಳೆ ಕಾರಣದಿಂದ ನೀರಿನಲ್ಲಿ ಅಧಿಕ ಮಣ್ಣಿನ ಅಂಶವಿದೆ’ ಎಂಬುವುದು ಬಹುತೇಕ ಸುಳ್ಳಾಗಿದೆ. ಕೊಳಚೆ ನೀರು ಸರಬರಾಜಿಗೆ ನಿರ್ವಹಣೆಯ ವೈಫಲ್ಯವೇ ಮುಖ್ಯ ಕಾರಣವಾಗಿದೆ’ ಎಂದು ವೇದಿಕೆ ಆರೋಪ ಮಾಡಿದೆ.
‘ಶುದ್ಧೀಕರಣ ಘಟಕದಲ್ಲಿರುವ 3 ಕ್ಲಾರಿ ಪ್ಲಕ್ಚುವೇಟರ್ ಕೆಲಸ ನಿಲ್ಲಿಸಿ 2 ತಿಂಗಳಾಗಿದೆ. ಇದರಿಂದ ಘಟಕದಲ್ಲಿ ಶೇ. 85 ರಷ್ಟು ನೀರು ಶುದ್ಧೀಕರಣವಾಗುತ್ತಿಲ್ಲ. ಲ್ಯಾಬ್ ಟೆಸ್ಟಿಂಗ್ ಉಪಕರಣಗಳು ಕಾರ್ಯನಿರ್ವಹಣೆ ಮಾಡುತ್ತಿಲ್ಲ. ನೀರು ಶುದ್ಧೀಕರಣಕ್ಕೆ ಆಲಂ ಸರಿಯಾಗಿ ಬಳಸುತ್ತಿಲ್ಲ.
ನೀರಿಗೆ ಕ್ಲೋರಿನ್ ಮಿಕ್ಸ್ ಮಾಡಲು ಅಳತೆಯ ಎರಡೂ ಗೇಜ್ ಗಳು ಹಾಳಾಗಿವೆ. ಅವೈಜ್ಞಾನಿಕವಾಗಿ ನೀರಿಗೆ ಕ್ಲೋರಿನ್ ಮಿಶ್ರಣ ಮಾಡಲಾಗುತ್ತಿದೆ. ಜಲ ಮಂಡಳಿಯ ನಿರ್ವಹಣೆಯಲ್ಲಿನ ವೈಫಲ್ಯದಿಂದ ಕೊಳಚೆ ನೀರು ಸರಬರಾಜಾಗಲು ಮುಖ್ಯ ಕಾರಣವಾಗಿದೆ’ ಎಂದು ವೇದಿಕೆ ಗಂಭೀರ ಆರೋಪ ಮಾಡಿದೆ.
ಘಟಕಕ್ಕೆ ಭೇಟಿ ನೀಡಿದ ತಂಡದಲ್ಲಿ ಕೆ.ವಿ.ವಸಂತಕುಮಾರ್, ಡಾ. ಸತೀಶ್ ಕುಮಾರ್ ಶೆಟ್ಟಿ, ಆಶೋಕ ಕುಮಾರ, ಸೀತಾರಾಮ್, ಸುಬ್ರಮಣ್ಯ, ವಿನೊದ್ ಪೈ, ರಘಪತಿ ಮೊದಲಾದವರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ಗೋಪಾಲ ಗೌಡರು ಶಿವಮೊಗ್ಗ ಜಿಲ್ಲೆಯನ್ನ ಸಮಾಜವಾದದ ತೊಟ್ಟಿಲನ್ನಾಗಿ ರೂಪಿಸಿದವರು- ವೈ.ಎಸ್.ವಿ.ದತ್ತ.

Shimoga News ನಗರದ ಮಥುರಾ ಪ್ಯಾರಡೈಸ್ ಸಭಾಂಗಣದಲ್ಲಿ ಮಾಜಿ ಶಾಸಕ ಹಾಗೂ...

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...