Wednesday, April 23, 2025
Wednesday, April 23, 2025

Civil Defense Forum ಕಲುಷಿತಗೊಂಡ ನೀರು: ಪಾಲಿಕೆ ವಿರುದ್ಧ ನಾಗರಿಕ ಹಿತರಕ್ಷಣಾ ವೇದಿಕೆ ಆರೋಪ

Date:

Civil Defense Forum ಶಿವಮೊಗ್ಗ ನಗರದಲ್ಲಿ ಇತ್ತೀಚೆಗೆ, ಕಲುಷಿತ ಕುಡಿಯುವ ನೀರು ಪೂರೈಕೆಯಾಗುತ್ತಿರುವುದಕ್ಕೆ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದೆ. ಭಾರೀ ಮಳೆಯಿಂದ ನೀರಿನಲ್ಲಿ ಟರ್ಬಿಡಿಟಿ ಹೆಚ್ಚಾಗಿ ಸಮಸ್ಯೆಯಾಗಿದೆ ಎಂದು ಜಲ ಮಂಡಳಿ ತಿಳಿಸಿತ್ತು.
ಆದರೆ ನಾಗರೀಕರ ಹಿತರಕ್ಷಣಾ ವೇದಿಕೆಗಳ ಒಕ್ಕೂಟ ಇದನ್ನು ತಳ್ಳಿ ಹಾಕಿದೆ. ಕಲುಷಿತ ನೀರು ಸರಬರಾಜಿಗೆ ನೀರು ಶುದ್ಧೀಕರಣ ಘಟಕದಲ್ಲಿನ ಅಸಮರ್ಪಕ ನಿರ್ವಹಣೆ ಕಾರಣವಾಗಿದೆ ಎಂದು ಆರೋಪಿಸಿದೆ.
ಈ ಸಂಬಂಧ ಅ. 14 ರ ಬೆಳಿಗ್ಗೆ ಘಟಕದ ಪ್ರಮುಖರು ಮಂಡ್ಲಿಯಲ್ಲಿರುವ ನೀರು ಶುದ್ಧೀಕರಣ ಘಟಕಕ್ಕೆ ಭೇಟಿ ನೀಡಿ ಸತ್ಯಾಸತ್ಯತೆ ಪರಿಶೀಲಿಸಿದ್ದಾರೆ. ಭೇಟಿಯ ವೇಳೆ ಕಂಡುಬಂದ ವಿವರಗಳ ಕುರಿತಂತೆ ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿದೆ. ವಿವರ ಈ ಮುಂದಿನಂತಿದೆ.
Civil Defense Forum ಅಸಮರ್ಪಕ ನಿರ್ವಹಣೆ : ‘ಜಲ ಮಂಡಳಿ ಹೇಳುವಂತೆ, ಮಳೆ ಕಾರಣದಿಂದ ನೀರಿನಲ್ಲಿ ಅಧಿಕ ಮಣ್ಣಿನ ಅಂಶವಿದೆ’ ಎಂಬುವುದು ಬಹುತೇಕ ಸುಳ್ಳಾಗಿದೆ. ಕೊಳಚೆ ನೀರು ಸರಬರಾಜಿಗೆ ನಿರ್ವಹಣೆಯ ವೈಫಲ್ಯವೇ ಮುಖ್ಯ ಕಾರಣವಾಗಿದೆ’ ಎಂದು ವೇದಿಕೆ ಆರೋಪ ಮಾಡಿದೆ.
‘ಶುದ್ಧೀಕರಣ ಘಟಕದಲ್ಲಿರುವ 3 ಕ್ಲಾರಿ ಪ್ಲಕ್ಚುವೇಟರ್ ಕೆಲಸ ನಿಲ್ಲಿಸಿ 2 ತಿಂಗಳಾಗಿದೆ. ಇದರಿಂದ ಘಟಕದಲ್ಲಿ ಶೇ. 85 ರಷ್ಟು ನೀರು ಶುದ್ಧೀಕರಣವಾಗುತ್ತಿಲ್ಲ. ಲ್ಯಾಬ್ ಟೆಸ್ಟಿಂಗ್ ಉಪಕರಣಗಳು ಕಾರ್ಯನಿರ್ವಹಣೆ ಮಾಡುತ್ತಿಲ್ಲ. ನೀರು ಶುದ್ಧೀಕರಣಕ್ಕೆ ಆಲಂ ಸರಿಯಾಗಿ ಬಳಸುತ್ತಿಲ್ಲ.
ನೀರಿಗೆ ಕ್ಲೋರಿನ್ ಮಿಕ್ಸ್ ಮಾಡಲು ಅಳತೆಯ ಎರಡೂ ಗೇಜ್ ಗಳು ಹಾಳಾಗಿವೆ. ಅವೈಜ್ಞಾನಿಕವಾಗಿ ನೀರಿಗೆ ಕ್ಲೋರಿನ್ ಮಿಶ್ರಣ ಮಾಡಲಾಗುತ್ತಿದೆ. ಜಲ ಮಂಡಳಿಯ ನಿರ್ವಹಣೆಯಲ್ಲಿನ ವೈಫಲ್ಯದಿಂದ ಕೊಳಚೆ ನೀರು ಸರಬರಾಜಾಗಲು ಮುಖ್ಯ ಕಾರಣವಾಗಿದೆ’ ಎಂದು ವೇದಿಕೆ ಗಂಭೀರ ಆರೋಪ ಮಾಡಿದೆ.
ಘಟಕಕ್ಕೆ ಭೇಟಿ ನೀಡಿದ ತಂಡದಲ್ಲಿ ಕೆ.ವಿ.ವಸಂತಕುಮಾರ್, ಡಾ. ಸತೀಶ್ ಕುಮಾರ್ ಶೆಟ್ಟಿ, ಆಶೋಕ ಕುಮಾರ, ಸೀತಾರಾಮ್, ಸುಬ್ರಮಣ್ಯ, ವಿನೊದ್ ಪೈ, ರಘಪತಿ ಮೊದಲಾದವರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa ಎಲ್ಲಾ ತಾಲ್ಲೂಕುಗಳಲ್ಲಿ ಜನಸ್ಪಂದನ ಕಾರ್ಯಕ್ರಮ- ಮಧು ಬಂಗಾರಪ್ಪ

Madhu Bangarappa ಜನರ ಸಮಸ್ಯೆಗಳನ್ನು ಆಲಿಸಿ, ಶೀಘ್ರ ಪರಿಹಾರ ದೊರಕಿಸಲು...

Fisheries project 2024-25ನೇ ಸಾಲಿನ ಮತ್ಸ್ಯಸಂಪದ ಯೋಜನೆಗೆ ಅರ್ಹರಿಂದ ಅರ್ಜಿ ಆಹ್ವಾನ

Fisheries project 2024-25 ನೇ ಸಾಲಿನ ಪ್ರಧಾನ ಮಂತ್ರಿ ಮತ್ಯ್ಸ ಸಂಪದ...

Ravi Telex ಪತ್ರಕರ್ತ‌ “ಟೆಲೆಕ್ಸ್ ರವಿ ” ಗೆ ಅಬ್ದುಲ್ಲ ಮಾದುಮೂಲೆ ದತ್ತಿ ಪ್ರಶಸ್ತಿ

Ravi Telex ಕಾಸರಗೋಡು ಜಿಲ್ಲಾ ಕನ್ನಡ ಪತ್ರಕರ್ತರ ಕ್ಷೇಮಾಭಿವೃದ್ದಿ ಸಂಘದ...

Inner Wheel East Shimoga ಆಶ್ರಮವಾಸಿಗಳ ಸೇವೆ ,ದೇವರ ಸೇವೆಗೆ ಸಮ- ವಾಗ್ದೇವಿ ಬಸವರಾಜ್

Inner Wheel East Shimoga ಆಶ್ರಮವಾಸಿಗಳ ಸೇವೆ ದೇವರ ಸೇವೆಗೆ ಸಮಾನ....