Monday, February 2, 2026
Monday, February 2, 2026

Chamber Of Commerce Shivamogga ರಾಮಾಯಣ ನಮ್ಮ ಐತಿಹಾಸಿಕ ಹಿನ್ನೆಲೆಗೆ ಭದ್ರ ಬುನಾದಿ- ಜಿ.ವಿಜಯ ಕುಮಾರ್

Date:

Chamber Of Commerce Shivamogga ಮಹರ್ಷಿ ವಾಲ್ಮೀಕಿ ಅವರ ತತ್ವ ಆದರ್ಶ ಗುಣಗಳು ಇಂದಿಗೂ ಸಹ ಅಜರಾಮರ. ಅವರು ರಚಿಸಿದ ರಾಮಾಯಣ ಮಹಾಕಾವ್ಯ ಇಂದಿಗೂ ಪ್ರಸ್ತುತ ಹಿಂದೂ ಧರ್ಮದ ಪವಿತ್ರ ಗ್ರಂಥಗಳಲ್ಲಿ ಒಂದಾದ ರಾಮಾಯಣವು ನಮ್ಮ ಐತಿಹಾಸಿಕ ಹಿನ್ನೆಲೆಗೆ ಭದ್ರ ಬುನಾದಿ ಎಂದು ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಉಪಾಧ್ಯಕ್ಷ ಜಿ ವಿಜಯಕುಮಾರ್ ಅಭಿಮತ ವ್ಯಕ್ತಪಡಿಸಿದರು.

ಅವರು ರಾಜೇಂದ್ರ ನಗರದ ರೋಟರಿ ಸಭಾಂಗಣದಲ್ಲಿ. ರೋಟರಿ ಈಸ್ಟ್ ಎಜುಕೇಶನಲ್ ಚಾರಿಟೇಬಲ್ ಟ್ರಸ್ಟ್. ರೋಟರಿ ಶಿವಮೊಗ್ಗ ಪೂರ್ವ.ಮತ್ತು ಇನ್ನರ್ ವೀಲ್ ಕ್ಲಬ್ ವತಿಯಿಂದ. ಆಯೋಜಿಸಲಾದ ಮಹರ್ಷಿ ವಾಲ್ಮೀಕಿ ಜಯಂತಿಯ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಮಾತನಾಡಿದರು.

ಮಹರ್ಷಿ ವಾಲ್ಮೀಕಿ ಅವರ ಬಾಲ್ಯದ ಜೀವನ ನೆನೆಸಿಕೊಂಡರೆ ಅವರು ಈ ಮಟ್ಟದಲ್ಲಿ ಬೆಳೆಯುತ್ತಾರೆ ಎನ್ನುವುದೇ ಒಂದು ಅಸಾಧ್ಯವಾಗಿತ್ತು ಒಬ್ಬ ಬೇಡ ನಾಗಿ ತನ್ನ ಬದುಕನ್ನೇ ಪರಿವರ್ತಿಸಿಕೊಂಡು ಸಮಾಜಕ್ಕೆ ಉತ್ತಮ ಸಂದೇಶಗಳನ್ನು ಕೊಡುವ ದೊಡ್ಡ ಮಹರ್ಷಿಯಾಗಿ ಬೆಳೆದಿದ್ದು ಮರೆಯಲಾಗದ ಕಥೆಯಾಗಿದೆ ಈ ನಿಟ್ಟಿನಲ್ಲಿ ಇಂದು ರಾಜ್ಯಾದ್ಯಂತ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ ಮಾಡುತ್ತಿರುವುದು ತುಂಬಾ ಪ್ರಸ್ತುತವಾಗಿದೆ ಎಂದು ನುಡಿದರು.

Chamber Of Commerce Shivamogga ಇದೇ ಸಂದರ್ಭದಲ್ಲಿ ಛಾರಿಟೇಬಲ್ ಟ್ರಸ್ಟ್ ನ ಉಪಾಧ್ಯಕ್ಷರಾದ ಡಾಕ್ಟರ್ ಪರಮೇಶ್ವರ್ ಡಿ ಶಿಗ್ಗಾವ್ ಅಧ್ಯಕ್ಷತೆ ವಹಿಸಿ ಮಾತನಾಡುತ್ತಾ ಮಹರ್ಷಿ ವಾಲ್ಮೀಕಿ ಅವರ ಬದುಕು ಬರಹಗಳು ಇಂದಿನ ಯುವ ಪೀಳಿಗೆಗೆ ಮಾರ್ಗದರ್ಶನ ಅವರ ಗ್ರಂಥಗಳು ಇಂದಿಗೂ ಸಹ ಪ್ರಸ್ತುತ. ಈ ಹುಣ್ಣಿಮೆಯ ಮಹರ್ಷಿ ವಾಲ್ಮೀಕಿ ಅವರ ಜಯಂತಿ ಆಚರಣೆ ತುಂಬಾ ಅರ್ಥಪೂರ್ಣವಾಗಿದೆ ಎಂದು ನುಡಿದರು ಸಮಾರಂಭದಲ್ಲಿ. ಪ್ರಾಂಶುಪಾಲ ಆರ್ ಸೂರ್ಯನಾರಾಯಣರಾವ್. ಶಿಕ್ಷಕರಾದ ಶ್ರೀಮತಿ ಶ್ವೇತಾ ಸುಜಾತ ಪ್ರದೀಪ ಕುಮಾರ್. ಹನುಮಂತಪ್ಪ ಇಂದ್ರಮ್ಮ. ಮಹೇಶ್ ಪೋಷಕರು ಪದಾಧಿಕಾರಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...