Sunday, August 2, 2026
Sunday, August 2, 2026

Rotary Club Shivamogga ಅಭಿವೃದ್ಧಿಯು ಸಬಲೀಕರಣ,ಮಾನವ ಹಕ್ಕುಗಳು, ನ್ಯಾಯ.& ಸಾಮೂಹಿಕ ಕ್ರಿಯಾ ತತ್ವ ಆಧರಿಸಿದೆ- ಪ್ರೊ.ಕುಮಾರಸ್ವಾಮಿ

Date:

Rotary Club Shivamogga ಸಮುದಾಯದ ಅಭಿವೃದ್ಧಿ ಕಾರ್ಯಕ್ರಮಗಳು ಸಾಮಾಜಿಕ ಒಗ್ಗಟ್ಟು ಹಾಗೂ ಆರ್ಥಿಕ ಉನ್ನತಿ ಸಾಧಿಸುತ್ತದೆ ಎಂದು ನಿವೃತ್ತ ಪ್ರಾಚಾರ್ಯ ಪ್ರೊ. ಬಿ.ಎಂ.ಕುಮಾರಸ್ವಾಮಿ ಹೇಳಿದರು.
ರೋಟರಿ ಕ್ಲಬ್ ಶಿವಮೊಗ್ಗ ಸೆಂಟ್ರಲ್ ವತಿಯಿಂದ ಆಯೋಜಿಸಿದ್ದ ಆರ್ಥಿಕ ಮತ್ತು ಸಮುದಾಯ ಅಭಿವೃದ್ಧಿ ವಿಚಾರ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿ, ಸಮುದಾಯದ ಮೂಲ ಅಂಶಗಳನ್ನು ಅರ್ಥ ಮಾಡಿಕೊಳ್ಳುವುದು ಬಹು ಮುಖ್ಯ ಎಂದು ತಿಳಿಸಿದರು.
ಸಮುದಾಯದ ಅಭಿವೃದ್ಧಿಯು ಸಬಲೀಕರಣ, ಮಾನವ ಹಕ್ಕುಗಳು ಸೇರ್ಪಡೆ, ಸಾಮಾಜಿಕ ನ್ಯಾಯ, ಸ್ವನಿರ್ಣಯ ಮತ್ತು ಸಾಮೂಹಿಕ ಕ್ರಿಯೆಗಳ ತತ್ವಗಳನ್ನು ಆಧರಿಸಿದೆ ಎಂದರು.
Rotary Club Shivamogga ಸಹಾಯಕ ಗವರ್ನರ್ ಸುರೇಶ್ ಮಾತನಾಡಿ, ಸಮುದಾಯದಲ್ಲಿ ಬದಲಾವಣೆ ಮಾಡಲು ಅಗತ್ಯವಿರುವ ಕೌಶಲ್ಯಗಳೊಂದಿಗೆ ಸಬಲೀಕರಣಗೊಳಿಸಲು ಪ್ರಯತ್ನಿಸುವುದು ಮುಖ್ಯ ಉದ್ದೇಶ ಎಂದು ಹೇಳಿದರು.
ರೋಟರಿ ವಲಯ 11ರ ಸಹಾಯಕ ಗವರ್ನರ್, ಏಳು ಕ್ಲಬ್ ಅಧ್ಯಕ್ಷರು ಮತ್ತು ಕಾರ್ಯದರ್ಶಿ, ವಲಯ ಲೆಫ್ಟಿನೆಂಟ್, ವಲಯ ತರಬೇತುದಾರ, ವಲಯ ಸಂಯೋಜಕರು ಭಾಗವಹಿಸಿದ್ದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ರೋಟರಿ ಕ್ಲಬ್ ಶಿವಮೊಗ್ಗ ಸೆಂಟ್ರಲ್ ಅಧ್ಯಕ್ಷ ಕಿರಣ್ ಕುಮಾರ್ ಜಿ ಮಾತನಾಡಿ, ಸಂಸ್ಥೆಯು ನಿರಂತರವಾಗಿ ಸಮಾಜಮುಖಿ ಸೇವಾ ಕಾರ್ಯಗಳನ್ನು ನಡೆಸುತ್ತಿದ್ದು, ಸಾಮಾಜಿಕ ಚಟುವಟಿಕೆಗಳ ಜತೆಯಲ್ಲಿ ತರಬೇತಿ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತದೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಕೆಪಿಎಲ್ ಸ್ವಾಮಿ, ಮಂಜುನಾಥ್ ರಾವ್ ಕದಂ, ರಾಧಾಕೃಷ್ಣ, ಸಂತೋಷ್ ಹಾಗೂ ಈಶ್ವರ ಬಿವಿ, ರವಿ ಕೋಟೋಜಿ, ಚುಡಾಮಣಿ ಪವಾರ್, ಜಿಎನ್ ಪ್ರಕಾಶ್, ಜಿ.ವಿಜಯಕುಮಾರ್, ವಸಂತ ಹೋಬಳಿದಾರ್, ರೋಟರಿಯ ಎಲ್ಲ ಪದಾಧಿಕಾರಿಗಳು ಹಾಗೂ ಪ್ರಮುಖರು, ಸದಸ್ಯರು ಉಪಸ್ಥಿತರಿದ್ದರು

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ₹ 6.400 ಕೋಟಿ ವೆಚ್ಚದ ಶಿವಮೊಗ್ಗ- ತುಮಕೂರು ಚತುಷ್ಪಥ ರಸ್ತೆ ಮುಂದಿನ ಮಾರ್ಚ್ ಗೆ ಸಿದ್ಧ- ಬಿ.ವೈ.ರಾಘವೇಂದ್ರ

B.Y. Raghavendra ಮಲೆನಾಡು ಹಾಗೂ ರಾಜಧಾನಿ ಬೆಂಗಳೂರು ನಡುವಿನ ಸಂಪರ್ಕವನ್ನು ಕ್ರಾಂತಿಕಾರಕವಾಗಿ...

S. N. Channabasappa ಬಡಾವಣೆಗಳಿಗೆ ಮೂಲಭೂತ ಸೌಕರ್ಯ ಒದಗಿಸುವುದು ನಮ್ಮ ಮುಖ್ಯ ಕರ್ತವ್ಯ- ಎಸ್.ಎನ್.ಚನ್ನಬಸಪ್ಪ

S. N. Channabasappa ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಒಳಪಡುವ...

Rotary Club of Shivamogga ಮಕ್ಕಳಲ್ಲಿ ರೋಟರಿ ಸಂಸ್ಥೆ ನಾಯಕತ್ವ ಗುಣಗಳನ್ನ ಬೆಳೆಸುತ್ತದೆ- ಡಿ.ಕೆ.ನರಹರಿ

Rotary Club of Shivamogga ರೋಟರಿ ಸಂಸ್ಥೆಯು ಮಕ್ಕಳಿಗೆ ಶಾಲಾ ಹಂತದಲ್ಲಿಯೇ...

B.Y. Raghavendra ಹವಾಮಾನ ಆಧಾರಿತ ಬೆಳೆವಿಮೆ: ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ವಿಸ್ತರಿಸಿ- ಸಂಸದ ಬಿ.ವೈ‌.ರಾಘವೇಂದ್ರ

B.Y. Raghavendra ಮುಂಗಾರು ಹಂಗಾಮಿನಲ್ಲಿ ರಾಜ್ಯಾದ್ಯಂತ ವಾಡಿಕೆಗಿಂತ ಶೇ.34 ರಷ್ಟು ಮಳೆ...