Thursday, March 19, 2026
Thursday, March 19, 2026

Thirthahalli Accident News ಬೆಜ್ಜುವಳ್ಳಿಯಲ್ಲಿ ಅಪಘಾತ. ವಿದ್ಯಾರ್ಥಿಯ ಸಾವು

Date:

Thirthahalli Accident News ತೀರ್ಥಹಳ್ಳಿ ತಾಲೂಕಿನ ಬೆಜ್ಜುವಳ್ಳಿ ಗ್ರಾಮದಲ್ಲಿ ಇಂದು ಬೆಳಗ್ಗೆ ದ್ವಿಚಕ್ರ ವಾಹನಕ್ಕೆ ಖಾಸಗಿ ಬಸ್‌ ಡಿಕ್ಕಿಯಾಗಿ ವಿದ್ಯಾರ್ಥಿಯೊಬ್ಬ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.

ತಾಲೂಕಿನ ತನಿಕಲ್‌ ಸಮೀಪದ ಬಾಂಡ್ಯ ಗ್ರಾಮದ ಪ್ರಥಮ್ ಮೃತ ವಿದ್ಯಾರ್ಥಿ ಎಂದು ತಿಳಿದುಬಂದಿದೆ. ಈತ ತೀರ್ಥಹಳ್ಳಿಯಲ್ಲಿ ಡಿಪ್ಲೋಮೋ ಕಾಲೇಜಿಗೆ ತೆರಳುತ್ತಿದ್ದ ಎನ್ನಲಾಗಿದೆ.

ಗೋವಾ ನೋಂದಣಿಯ ಬಸ್ ಮಂಗಳೂರಿನಿಂದ ಶಿವಮೊಗ್ಗ ಕಡೆಗೆ ತೆರಳುತ್ತಿತ್ತು. ಈ ಸಂದರ್ಭದಲ್ಲಿ ದ್ವಿಚಕ್ರ ವಾಹನಕ್ಕೆ ಬಸ್ ಡಿಕ್ಕಿ ಆಗಿದೆ. ಗಂಭೀರ ಗಾಯಗೊಂಡಿದ್ದ ಪ್ರಥಮ್‌ನನ್ನು ಕೂಡಲೇ ತೀರ್ಥಹಳ್ಳಿಯ ಜೆ.ಸಿ.ಆಸ್ಪತ್ರೆಗೆ ಸಾಗಿಸಲಾಯಿತಾದರು ಆತ ಮಾರ್ಗ ಮಧ್ಯೆ ಮೃತಪಟ್ಟಿರುವುದನ್ನು ವೈದ್ಯರು ಖಚಿತ ಪಡಿಸಿದ್ದಾರೆ.

Thirthahalli Accident News ಅಘಪಾತದ ಭೀಕರ ದೃಶ್ಯ ಸಮೀಪದ ಸಿಸಿ ಕ್ಯಾಮರಾದಲ್ಲಿ ರೆಕಾರ್ಡ್ ಆಗಿದ್ದು, ಬೈಕ್ ಸವಾರ ಏಕಾಏಕಿ ಮುಖ್ಯ ರಸ್ತೆ ಪ್ರವೇಶಿಸಿರುವುದು ತಿಳಿದುಬಂದಿದೆ. ಅಪಘಾತದ ರಭಸಕ್ಕೆ ಬೈಕ್‌ ಸಂಪೂರ್ಣ ಜಖಂಗೊಂಡಿದೆ. ಬಸ್ ನ ಮುಂಭಾಗ ಸಹ ನುಜ್ಜುಗುಜ್ಜಾಗಿದೆ.

ಘಟನಾ ಸ್ಥಳಕ್ಕೆ ಮಾಳೂರು ಠಾಣೆ ಪೊಲೀಸರು ಭೇಟಿ ನೀಡಿ, ಪರಿಶೀಲಿಸಿದ್ದು, ಪ್ರಕರಣ ದಾಖಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...