Monday, December 15, 2025
Monday, December 15, 2025

Karnataka Rajyotsava ವೈಭವದ ರಾಜ್ಯೋತ್ಸವ. ಪೂರ್ವಭಾವಿ ಸಿದ್ಧತೆ ಬಗ್ಗೆ ಡಿಸಿ ಗುರುದತ್ತ ಹೆಗಡೆ ಸೂಚನೆ

Date:

Karnataka Rajyotsava ಕನ್ನಡ ರಾಜ್ಯೋತ್ಸವ ಪೂರ್ವಬಾವಿ ಸಭೆ: ಸಕಲ ಸಿದ್ದತೆಗೆ ಡಿಸಿ ಸೂಚನೆ
ಶಿವಮೊಗ್ಗ, ಅಕ್ಟೋಬರ್ ೧೮ (ಕರ್ನಾಟಕ ವಾರ್ತೆ) : ನವೆಂಬರ್ ೧ ರಂದು ನಗರದ ಡಿಎಆರ್ ಮೈದಾನದಲ್ಲಿ ಕನ್ನಡ ರಾಜ್ಯೋತ್ಸವ ಸಮಾರಂಭವನ್ನು ಏರ್ಪಡಿಸಲಾಗಿದ್ದು, ಸಮಾರಂಭಕ್ಕೆ ಅಗತ್ಯವಾದ ಸಕಲ ಸಿದ್ದತೆಗಳನ್ನು ಮಾಡಿಕೊಳ್ಳುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಸೂಚನೆಗಳನ್ನು ನೀಡಿದರು.
ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಕನ್ನಡ ರಾಜ್ಯೋತ್ಸವ ಸಿದ್ದತೆ ಕುರಿತು ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಚರ್ಚಿಸಲು ಕರೆಯಲಾಗಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಸಲಹೆ-ಸೂಚನೆಗಳನ್ನು ನೀಡಿದರು.
ಅಪರ ಜಿಲ್ಲಾಧಿಕಾರಿಗಳು, ಜಿ.ಪಂ. ಉಪ ಕಾರ್ಯದರ್ಶಿ, ಪಾಲಿಕೆ ಆಯುಕ್ತರು ಹಾಗೂ ಶಿವಮೊಗ್ಗ ತಹಶೀಲ್ದಾರರು ಶಿಷ್ಟಾಚಾರದಂತೆ ಆಹ್ವಾನ ಪತ್ರಿಕೆಯನ್ನು ಮುದ್ರಿಸಿ, ಮುದ್ರಣಗೊಂಡ ಆಹ್ವಾನ ಪತ್ರಿಕೆಗಳನ್ನು ಸಮಾರಂಭದ ಅತಿಥಿಗಳು, ಜನಪ್ರತಿನಿಧಿಗಳು, ಸರ್ಕಾರಿ ಕಚೇರಿಗಳು, ಸಂಘಸAಸ್ಥೆಗಳು, ಕನ್ನಡ ಸಂಘಟನೆಗಳು ಹಾಗೂ ನಾಗರೀಕರಿಗೆ ಜಾರಿ ಮಾಡಲು ಸೂಚಿಸಿದರು.
ನ.೧ ರ ಬೆಳಿಗ್ಗೆ ೮ ಗಂಟೆಯಿAದ ನಗರದ ಸೈನ್ಸ್ ಮೈದಾನದಿಂದ ಮೆರವಣ ಗೆ ಹೊರಡುವುದು. ಮೆರವಣ ಗೆಯಲ್ಲಿ ಪೊಲೀಸ್, ಗೃಹರಕ್ಷಕ ದಳ, ಸೇವಾದಳ, ಎನ್‌ಸಿಸಿ ಬ್ಯಾಂಡ್, ಡೊಳ್ಳುಕುಣ ತ, ವೀರಗಾಸೆ, ಕೋಲಾಟ, ಭಜನೆ ಸೇರಿದಂತೆ ವಿವಿಧ ತಂಡಗಳು ಭಾಗವಹಿಸಲು ಸೂಕ್ತ ವ್ಯವಸ್ಥೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಜಿಲ್ಲಾ ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಜಿಲ್ಲಾ ಪಂಚಾಯತ್ ತಲಾ ಎರಡು ಕಲಾ ತಂಡಗಳನ್ನು ಕಳುಹಿಸಿಕೊಂಡುವAತೆ ತಿಳಿಸಿದರು.
ಭುವನೇಶ್ವರಿ ದೇವಿ ಪ್ರತಿಮೆ ಅಲಂಕಾರ ಮತ್ತು ವಾಹನ ವ್ಯವಸ್ಥೆಯನ್ನು ಪಾಲಿಕೆ ಆಯುಕ್ತರು ಮಾಡಬೇಕು. ಧ್ವಜಾರೋಹಣಕ್ಕೆ ಅಗತ್ಯ ವ್ಯವಸ್ಥೆಗಳಾದ ಧ್ವಜ, ಧ್ವಜಸ್ತಂಭ, ವೇದಿಕೆ ಅಲಂಕಾರ ಇತ್ಯಾದಿ ವ್ಯವಸ್ಥೆಯನ್ನು ಪಾಲಿಕೆ ಆಯುಕ್ತರು, ತೋಟಗಾರಿಕೆ ಇಲಾಖೆ ಹಾಗೂ ಜಿಲ್ಲಾ ಪೊಲೀಸ್ ಕಚೇರಿ ವತಿಯಿಂದ ಕೈಗೊಳ್ಳಬೇಕು. ಸ್ವಾಗತ ಕಮಾನು, ಹೂವಿನ ತೋರಣ, ಅತಿಥಿ ಸತ್ಕಾರ, ಪೂರ್ವ ಸಿದ್ದತೆಯನ್ನು ಸಾರಿಗೆ ಉಪ ಆಯುಕ್ತರು, ನಿರ್ಮಿತಿ ಕೇಂದ್ರ ಮತ್ತು ಜಿಲ್ಲಾ ಯುವಜನ ಸಬಲೀಕರಣ ಇಲಾಖೆಯವರು ನಿರ್ವಹಿಸಬೇಕು.
ಕೃಷಿ ಇಲಾಖೆ, ಪಾಲಿಕೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ಪ್ರವಾಸೋದ್ಯಮ, ಯೋಜನಾ ನಿರ್ದೇಶಕರು ನಗರಾಭಿವೃದ್ಧಿ ಕೋಶ, ಸಹಾಯಕ ನಿರ್ದೇಶಕರು ಪ್ರವಾಸೋದ್ಯಮ ಇಲಾಖೆ,ಪರಿಶಿಷ್ಟ ವರ್ಗಗಳ ಕಲ್ಯಾಧಿಕಾರಿ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ಉಪ ಅರಣ್ಯ ಸಂರಕ್ಷಣಾಧಿಕಾರಿಗಳು, ಸಮಾಜ ಕಲ್ಯಾಣ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಅಲ್ಪಸಂಖ್ಯಾತರ ಇಲಾಖೆ, ಕೆಎಸ್‌ಆರ್‌ಟಿಸಿ, ಆರೋಗ್ಯ ಇಲಾಖೆಯವರು ಟ್ಯಾಬ್ಲೋಗಳನ್ನು ತಯಾರಿಸಿ ಪ್ರದರ್ಶಿಸುವಂತೆ ಸೂಚಿಸಿದರು.
ಶಾಲಾ ಮಕ್ಕಳನ್ನು ಮೆರವಣ ಗೆಯಲ್ಲಿ ಕರೆತರಲು ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರು, ರೂಟ್ ಮ್ಯಾಪ್ ತಯಾರಿಸಿ ನಿರ್ವಹಿಸಬೇಕು. ಹಾಗೂ ಮಕ್ಕಳ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸೂಕ್ತ ವ್ಯವಸ್ಥೆ ಮಾಡಿಕೊಳ್ಳಬೇಕು. ಮೈದಾನದಲ್ಲಿ ಷಾಮಿಯಾನ, ಉತ್ತಮ ಸೌಂಡ್ ಸಿಸ್ಟಂ ಇತರೆ ವ್ಯವಸ್ಥೆಯನ್ನು ಲೋಕೋಪಯೋಗಿ ಇಲಾಖೆ, ಆಸನ ವ್ಯವಸ್ಥೆಯನ್ನು ತಹಶೀಲ್ದಾರರು, ಪಾಲಿಕೆಯವರು ಸ್ವಚ್ಚತೆ ಹಾಗೂ ಕುಡಿಯುವ ನೀರಿನ ವ್ಯವಸ್ಥೆಯನ್ನು ಪಾಲನೆ ಮತ್ತು ನಿರ್ವಹಣೆ ವಿಭಾಗದ ಕಾರ್ಯಪಾಲಕ ಅಭಿಯಂತರರು, ಸಹಿ ಹಂಚಿಕೆಯನ್ನು ಶಿಮುಲ್, ಪಾಲಿಕೆ, ಡಿಡಿಪಿಐ ನೋಡಿಕೊಳ್ಳುವಂತೆ ತಿಳಿಸಿದರು.
Karnataka Rajyotsava ಪ್ರಮುಖ ರಸ್ತೆಯ ವೃತ್ತಗಳಿಗೆ ವಿದ್ಯುತ್ ಅಲಂಕಾರವನ್ನು ಮೆಸ್ಕಾಂ, ಪಾಲಿಕೆ ಆಯುಕ್ತರು, ಸೂಡಾ ಆಯುಕ್ತರು ಹಾಗೂ ಧ್ವನಿ ವರ್ಧಕದ ಮೂಲಕ ಕನ್ನಡ ದೇಶಭಕ್ತಿ ಗೀತೆಗಳನ್ನು ಪ್ರಸಾರ ಮಾಡುವ ವವಸ್ಥೆಯನ್ನು ಅಬಕಾರಿ ಇಲಾಖೆ, ನೋಂದಣ ಹಾಗೂ ವಾಣ ಜ್ಯ ತೆರಿಗೆ ಇಲಾಖೆಯವರು ನೋಡಿಕೊಳ್ಳಬೇಕೆಂದು ತಿಳಿಸಿದರು.
ಸಂಜೆಯ ಸಾಂಸ್ಕೃತಿಕ ಕಾರ್ಯಕ್ರಮಗಳು ಕುವೆಂಪು ರಂಗಮAದಿರದಲ್ಲಿ ನಡೆಯಲಿದ್ದು, ಸಾರ್ವಜನಿಕ ಶಿಕ್ಷಣ ಇಲಾಖೆ, ಪಾಲಿಕೆ ಆಯುಕ್ತರು ನಿರ್ವಹಿಸಬೇಕು. ಆಂಬುಲೆನ್ಸ್ ಮತ್ತು ಅಗ್ನಿಶಾಮಕ ವಾಹನ ವ್ಯವಸ್ಥೆಯನ್ನು ಜಿಲ್ಲಾ ಸರ್ಜನ್‌ರು ಹಾಗೂ ಜಿಲ್ಲಾ ಅಗ್ನಿ ಶಾಮಕ ಅಧಿಕಾರಿ ನಿರ್ವಹಿಸುವಂತೆ ಸೂಚಿಸಿದರು

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...