Monday, February 2, 2026
Monday, February 2, 2026

N Ravikumar ಜೀವನದಲ್ಲಿ‌ ಧನಾತ್ಮಕತೆ & ಶಾಂತಿ ಭಾವ ಕ್ರೀಡೆಗಳಿಂದ ಲಭ್ಯ- ಎನ್.ರವಿಕುಮಾರ್

Date:

N Ravikumar ಕ್ರೀಡೆ ಎಂಬುದು ಸಂಘಟಿಕ ಸ್ಪರ್ಧಾತ್ಮಕ ಮತ್ತು ಕುಶಲತೆಯಿಂದ ಕೂಡಿದ ದೈಹಿಕ ಚಟುವಟಿಕೆಯಾಗಿದೆ ಜೀವನದ ಸವಾಲುಗಳನ್ನು ಅತ್ಯಂತ ಧನಾತ್ಮಕ ಮತ್ತು ಶಾಂತ ರೀತಿಯಿಂದ ಎದುರಿಸಲು ಕ್ರೀಡೆ ನಮ್ಮನ್ನು ಸಿದ್ಧಪಡಿಸುತ್ತದೆ
ಹಾಗೂ ದೈಹಿಕ ಹಾಗೂ ಮಾನಸಿಕ ಸದೃಢತೆಯನ್ನು ಕಾಪಾಡಿಕೊಳ್ಳಲು ಸಹಾಯ ಮಾಡುತ್ತದೆ ಎಂದು ಕರ್ನಾಟಕ ರಾಜ್ಯ ಬೋವಿ ನಿಗಮದ ಅಧ್ಯಕ್ಷರಾದ ಎಸ್ ರವಿಕುಮಾರ್ ಅವರು ಅಭಿಮತ ವ್ಯಕ್ತಪಡಿಸಿದರು. ಅವರು ಇಂದು ಶಾಲಾ ಶಿಕ್ಷಣ ಇಲಾಖೆ( ಪದವಿಪೂರ್ವ). ಶಿವಮೊಗ್ಗ. ಮತ್ತು ಮಹೇಶ್ ಪದವಿಪೂರ್ವ ಕಾಲೇಜ್ ಶಿವಮೊಗ್ಗ ಇವರ ಸಹಯೋಗದಲ್ಲಿ 19 ವರ್ಷ ವಯೋಮಿತಿ ಒಳಗಿನ ರಾಜ್ಯಮಟ್ಟದ ಪದವಿಪೂರ್ವ ಕಾಲೇಜುಗಳ 2 ದಿನದ ಬಾಕ್ಸಿಂಗ್ ಕ್ರೀಡಾಕೂಟ 2024 -25 .ನ್ನೂ.. ನೆಹರು ಒಳ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದು ಈ ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿ ಮಾತನಾಡಿದರು. ವಿದ್ಯಾಭ್ಯಾಸದ ಜೊತೆಗೆ ಕ್ರೀಡೆಯೂ ಸಹ ತುಂಬಾ ಮುಖ್ಯ ಇದು ಪ್ರಥಮ ಬಾರಿಗೆ ಶಿವಮೊಗ್ಗದಲ್ಲಿ ಆ ಯೋಜನೆ ಗೊಂಡಿರುವಂತಹ ಈ ಬಾಕ್ಸಿಂಗ್ ಕ್ರೀಡಾಕೂಟಕ್ಕೆ 17 ಜಿಲ್ಲೆಗಳಿಂದ ಸ್ಪರ್ಧೆಗಳು ಆಗಮಿಸಿದ್ದು ತುಂಬಾ ಸಂತೋಷವಾಗಿದೆ ಎಂದು ಎಲ್ಲಾ ಕ್ರೀಡಾಪಟುಗಳಿಗೂ ಅಭಿನಂದಿಸಿದರು.. ಶಿವಮೊಗ್ಗ ಜಿಲ್ಲೆ ಸಾಂಸ್ಕೃತಿಕ ಹಾಗೂ ಕ್ರೀಡೆಗೆ ಹೆಸರುವಾಸಿಯಾಗಿದೆ ಇಲ್ಲಿನ ಸಾಕಷ್ಟು ಕ್ರೀಡಾಪಟುಗಳು ರಾಜ್ಯ ರಾಷ್ಟ್ರಮಟ್ಟದಲ್ಲಿ ಹೆಸರನ್ನಗಳಿಸಿದ್ದಾರೆ. ಈ ನಿಟ್ಟಿನಲ್ಲಿ ಇಂದು ಈ ಕ್ರೀಡೆ ಯಶಸ್ವಿಯಾಗಲಿ ಎಂದು ಹಾರೈಸಿದರು ಇದೇ ಸಂದರ್ಭದಲ್ಲಿ ಸಹಾಯಕ ನಿರ್ದೇಶಕರು ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆಯ ಶ್ರೀ ರೇಖಾ ನಾಯಕ ಅವರು ಮಾತನಾಡುತ್ತಾ ಸುಮಾರು 15 ಲಕ್ಷ ವೆಚ್ಚದಲ್ಲಿ ಈ ಬಾಕ್ಸಿಂಗ್ ರೌಂಡ್ ಅನ್ನು ಆಯೋಜಿಸಲಾಗಿದ್ದು ರಾಷ್ಟ್ರಮಟ್ಟದ ಕ್ರೀಡಾಕೂಟದ ತರಹ ವ್ಯವಸ್ಥೆ ಮಾಡಲಾಗಿದೆ ಈ ಕಾರ್ಯಕ್ರಮ ನಮ್ಮ ಜಿಲ್ಲೆಗೆ ಹೆಮ್ಮೆ ತಂದಿದೆ ಎಂದು ನೋಡಿದರು ಪದವಿ ಪೂರ್ವ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಚಂದ್ರಪ್ಪ ಎಸ್ ಗುಂಡಪಲ್ಲಿ ಅವರು ಅಧ್ಯಕ್ಷತೆ ವಹಿಸಿ ಮಾತನಾಡುತ್ತಾ ಇಂತಹ ಕ್ರೀಡೆಗಳು ನಮ್ಮಲ್ಲಿ ಖಿನ್ನತೆಯನ್ನು ಕಡಿಮೆ ಮಾಡುವುದರ ಜೊತೆಗೆ ನಾವು ಸದಾ ಸದೃಢರಾಗಿ ಧನಾತ್ಮಕ ಚಿಂತೆಯಿಂದ ಇರುತ್ತೇವೆ ಎಂದು ಈ ಕ್ರೀಡೆಯನ್ನು ಆಯೋಜಿಸಿದ ಮಹೇಶ್ ಪಿಯು ಕಾಲೇಜ್ ಅವರಿಗೆ ಧನ್ಯವಾದಗಳು ತಿಳಿಸಿದರು ಈ ರಾಜ್ಯ ಮಟ್ಟದ ಬಾಕ್ಸಿಂಗ್ ಕ್ರೀಡೆಯಲ್ಲಿ 160 ಜನ ಸ್ಪರ್ದಾಳುಗಳು ಭಾಗವಹಿಸಿದ್ದು ಅದರಲ್ಲಿ 120 ಯುವಕರು ಹಾಗೂ 40 ಜನ ಯುವತಿಯರು ಭಾಗವಹಿಸಿದ್ದಾರೆ. ಕಾರ್ಯಕ್ರಮದ ಪ್ರಸ್ತಾವಿಕ ನುಡಿಯನ್ನು
N Ravikumar ಡಿ ವಿ ಎಸ್ ಸ್ವತಂತ್ರ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ . ಎಇ ರಾಜಶೇಖರ್ ಅವರು ನಡೆಸಿಕೊಟ್ಟರು ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಕರ್ನಾಟಕ ಬಾಕ್ಸಿಂಗ್ ಅಸೋಸಿಯೇಷನ್ ನ ಗೌರವಾಧ್ಯಕ್ಷರಾದ ದೇವರಾಜ್ ಮಂಡನೆಕೊಪ್ಪ. ಕರ್ನಾಟಕ ಅಮೆಚೂರ್ ಬಾಕ್ಸಿಂಗ್ ಅಸೋಸಿಯೇಷನ್ ಪ್ರಧಾನ. ಕಾರ್ಯದರ್ಶಿ. ಸಾಯಿ ಸತೀಶ್. ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಉಪಾಧ್ಯಕ್ಷನ ಜಿ ವಿಜಯಕುಮಾರ್.. ಪಂಡ್ರಿನಾಥ್. ಪಳನಿ ವೇಲು ಶ್ರೀ ಹರಿ. ಶಶಿಕುಮಾರ್. ನಾಗೇಂದ್ರ ಪ್ರಸಾದ್. ಶ್ರೀ ಪ್ರಸನ್ನ ಕೆ. ಹೆಚ್ ವಿ ಶುಭಕರ. ಬೆಂಜಮಿನ್ ಫ್ರಾನ್ಸಿಸ್. ಜಿಎಫ್ ಕುಟ್ರಿ ಜಿಎಫ್ ಕುಟ್ರಿ… ಶಿವಮೊಗ್ಗ ವಿನೋದ್. ಉಪಸ್ಥಿತರಿದ್ದರು

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...