Wednesday, December 17, 2025
Wednesday, December 17, 2025

Forest Department ಸಾಗರ ತಾಲ್ಲೂಕಿನಲ್ಲಿ ಅಕ್ರಮ ಅಕೇಶಿಯ ಮರ ಕಡಿತಲೆ. ಡಿಎಫ್ಓ ಮೋಹನ್ ಭೇಟಿ, ಪರಿಶೀಲನೆ

Date:

Forest Department ಸಾಗರ ತಾಲೂಕಿನ ಹೊಸಹಳ್ಳಿ, ಹಂಸಗಾರು ಮತ್ತು ಗಿಳಿಗಾರು ಗ್ರಾಮಗಳ ವ್ಯಾಪ್ತಿಯಲ್ಲಿ ಅಕ್ರಮವಾಗಿ ಅಕೇಶಿಯಾ ಮರಗಳ ಕಡಿತಲೆ ಮತ್ತು ಸಾಗಾಟದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಶಾಮೀಲಾಗಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಈ ಸಂಬಂಧ ಶಿವಮೊಗ್ಗ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮೂರು ದಿನಗಳ ಒಳಗಾಗಿ ತನಿಖೆ ನಡೆಸಿ ವರದಿ ನೀಡುವಂತೆ ಉಪ ಅರಣ್ಯ ಸಂರಕ್ಷಣಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
Forest Department ಈ ಕುರಿತು ಮಾತನಾಡಿದ ಡಿಎಫ್​ಒ ಮೋಹನ್, “ಅಕ್ರಮವಾಗಿ ಅಕೇಶಿಯಾ ಮರಗಳ ಕಡಿತಲೆ ಮತ್ತು ಸಾಗಣೆ ಸಂಬಂಧ ಗ್ರಾಮಸ್ಥರು ಅರಣ್ಯ ಸಚಿವ ಈಶ್ವರ ಖಂಡ್ರೆ ಅವರಿಗೆ ಪತ್ರ ಬರೆದ ಹಿನ್ನೆಲೆ ನಾನು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದೇನೆ. ಘಟನೆ ಸಂಬಂಧ ತನಿಖೆ ನಡೆಸಿ ವರದಿ ನೀಡುವಂತೆ ಉಪ ಅರಣ್ಯ ಸಂರಕ್ಷಣಾಧಿಕಾರಿಗಳಿಗೆ ಸೂಚನೆ ಕೊಟ್ಟಿದ್ದೇನೆ. ರೇಂಜರ್​ ಕೊಟ್ಟ ತನಿಖಾ ವರದಿಯನ್ನು ಉನ್ನತಾಧಿಕಾರಿಗಳ ಮೂಲಕ ಅರಣ್ಯ ಸಚಿವರಿಗೆ ತಲುಪಿಸಲಾಗುತ್ತದೆ” ಎಂದು ತಿಳಿಸಿದರು.
ಸ್ಥಳೀಯರಾದ ಹರ್ಷ ಮಾತನಾಡಿ, “ಹೊಸಹಳ್ಳಿ ಗ್ರಾಮದ ಸರ್ಕಾರಿ ಅಕೇಶಿಯಾ ನೆಡುತೋಪಿನಲ್ಲಿ ಐದಾರು ವರ್ಷಗಳಿಂದ ಅಕ್ರಮವಾಗಿ ಅಕೇಶಿಯಾ ಮರಗಳ ಕಡಿತಲೆ‌ ಮಾಡಲಾಗುತ್ತಿದೆ. ಈ ಕುರಿತು ಕ್ರಮ ಜರುಗಿಸಬೇಕಾದ ಅರಣ್ಯಾಧಿಕಾರಿಗಳೇ ಅಕ್ರಮದಲ್ಲಿ ಭಾಗಿಯಾಗಿದ್ದಾರೆ. ಹೀಗಾಗಿ ಅವರ ಮೇಲೆ ಕ್ರಮ ಜರುಗಿಸಬೇಕು ಹಾಗೂ ಅವರನ್ನು ಕೆಲಸದಿಂದ ವಜಾ ಮಾಡಬೇಕು” ಎಂದು ಆಗ್ರಹಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Scheduled Castes Welfare Department ಮಾನಿಸಿಕ ಒತ್ತಡ ನಿರ್ವಹಣೆ ಬಗ್ಗೆ ಆನ್ ಲೈನ್ ಪಾಡ್ ಕ್ಯಾಸ್ಟ್ ವಿಡಿಯೊ ಸಂವಾದ

Scheduled Castes Welfare Department ಶಿವಮೊಗ್ಗ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್,...

Kuvempu University ಶ್ರೀಕಾಂತ್ ಬಿರಾದಾರ್ ಅವರಿಗೆ ಕುವೆಂಪು ವಿವಿ ಡಾಕ್ಟರೇಟ್ ಪದವಿ

Kuvempu University ಮೂಡಲಗಿ ಶ್ರೀ ಶ್ರೀಪಾದಬೋಧ ಸ್ವಾಮೀಜಿ ಸರ್ಕಾರಿ ಪ್ರಥಮ ದರ್ಜೆ...

Karnataka Information Commission ಡಿಸೆಂಬರ್ 20. ರಾಜ್ಯ ಮಾಹಿತಿ ಆಯುಕ್ತರ ಶಿವಮೊಗ್ಗ ಜಿಲ್ಲಾ ಪ್ರವಾಸ ಮಾಹಿತಿ

Karnataka Information Commission ರಾಜ್ಯ ಮಾಹಿತಿ ಆಯೋಗದ ಆಯುಕ್ತರಾದ ರುದ್ರಣ್ಣ ಹರ್ತಿಕೋಟೆ...

B.Y. Raghavendra ವೈಯಕ್ತಿಕವಾಗಿ ಕುಟುಂಬದ ಹಿರಿಯರನ್ನ ಕಳೆದುಕೊಂಡಂತಾಗಿದೆ, ಶಾಮನೂರು ನಿಧನಕ್ಕೆ ಬಿ.ವೈ.ರಾಘವೇಂದ್ರ ಕಂಬನಿ

B.Y. Raghavendra ಅಖಿಲಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರು, ಹಿರಿಯ...