Thursday, August 13, 2026
Thursday, August 13, 2026

Forest Department ಸಾಗರ ತಾಲ್ಲೂಕಿನಲ್ಲಿ ಅಕ್ರಮ ಅಕೇಶಿಯ ಮರ ಕಡಿತಲೆ. ಡಿಎಫ್ಓ ಮೋಹನ್ ಭೇಟಿ, ಪರಿಶೀಲನೆ

Date:

Forest Department ಸಾಗರ ತಾಲೂಕಿನ ಹೊಸಹಳ್ಳಿ, ಹಂಸಗಾರು ಮತ್ತು ಗಿಳಿಗಾರು ಗ್ರಾಮಗಳ ವ್ಯಾಪ್ತಿಯಲ್ಲಿ ಅಕ್ರಮವಾಗಿ ಅಕೇಶಿಯಾ ಮರಗಳ ಕಡಿತಲೆ ಮತ್ತು ಸಾಗಾಟದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಶಾಮೀಲಾಗಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಈ ಸಂಬಂಧ ಶಿವಮೊಗ್ಗ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮೂರು ದಿನಗಳ ಒಳಗಾಗಿ ತನಿಖೆ ನಡೆಸಿ ವರದಿ ನೀಡುವಂತೆ ಉಪ ಅರಣ್ಯ ಸಂರಕ್ಷಣಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
Forest Department ಈ ಕುರಿತು ಮಾತನಾಡಿದ ಡಿಎಫ್​ಒ ಮೋಹನ್, “ಅಕ್ರಮವಾಗಿ ಅಕೇಶಿಯಾ ಮರಗಳ ಕಡಿತಲೆ ಮತ್ತು ಸಾಗಣೆ ಸಂಬಂಧ ಗ್ರಾಮಸ್ಥರು ಅರಣ್ಯ ಸಚಿವ ಈಶ್ವರ ಖಂಡ್ರೆ ಅವರಿಗೆ ಪತ್ರ ಬರೆದ ಹಿನ್ನೆಲೆ ನಾನು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದೇನೆ. ಘಟನೆ ಸಂಬಂಧ ತನಿಖೆ ನಡೆಸಿ ವರದಿ ನೀಡುವಂತೆ ಉಪ ಅರಣ್ಯ ಸಂರಕ್ಷಣಾಧಿಕಾರಿಗಳಿಗೆ ಸೂಚನೆ ಕೊಟ್ಟಿದ್ದೇನೆ. ರೇಂಜರ್​ ಕೊಟ್ಟ ತನಿಖಾ ವರದಿಯನ್ನು ಉನ್ನತಾಧಿಕಾರಿಗಳ ಮೂಲಕ ಅರಣ್ಯ ಸಚಿವರಿಗೆ ತಲುಪಿಸಲಾಗುತ್ತದೆ” ಎಂದು ತಿಳಿಸಿದರು.
ಸ್ಥಳೀಯರಾದ ಹರ್ಷ ಮಾತನಾಡಿ, “ಹೊಸಹಳ್ಳಿ ಗ್ರಾಮದ ಸರ್ಕಾರಿ ಅಕೇಶಿಯಾ ನೆಡುತೋಪಿನಲ್ಲಿ ಐದಾರು ವರ್ಷಗಳಿಂದ ಅಕ್ರಮವಾಗಿ ಅಕೇಶಿಯಾ ಮರಗಳ ಕಡಿತಲೆ‌ ಮಾಡಲಾಗುತ್ತಿದೆ. ಈ ಕುರಿತು ಕ್ರಮ ಜರುಗಿಸಬೇಕಾದ ಅರಣ್ಯಾಧಿಕಾರಿಗಳೇ ಅಕ್ರಮದಲ್ಲಿ ಭಾಗಿಯಾಗಿದ್ದಾರೆ. ಹೀಗಾಗಿ ಅವರ ಮೇಲೆ ಕ್ರಮ ಜರುಗಿಸಬೇಕು ಹಾಗೂ ಅವರನ್ನು ಕೆಲಸದಿಂದ ವಜಾ ಮಾಡಬೇಕು” ಎಂದು ಆಗ್ರಹಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive special Article ಆಧ್ಯಾತ್ಮದ ಆನಂದ ಹಂಚಿದ ದಾವಣಗೆರೆಯ ಶ್ರೀಶಿವಾನಂದ ತೀರ್ಥರು ...

"ಅಧ್ಯಾತ್ಮಾನಂದ ನೀಡುತ್ತಿದ್ದ ದಾವಣಗೆರೆಯ ಶ್ರೀ ಶಿವಾನಂದ ತೀರ್ಥರು" ( ಅವರ ಜಯಂತ್ಯೋತ್ಸವ ತನ್ನಿಮಿತ್ತಈವಿಶೇಷಲೇಖನ) -Klive...

Kuvempu University ಆಗಸ್ಟ್ 13 & 14. ರಂದು ಕುವೆಂಪು ವಿವಿಯ ಸ್ನಾತಕೋತ್ತರ ಪದವಿಗಳಿಗೆ ಪ್ರವೇಶಾತಿ

2026-27ನೇ ಸಾಲಿಗೆ ಕುವೆಂಪು ವಿಶ್ವವಿದ್ಯಾಲಯದ ಜ್ಞಾನ ಸಹ್ಯಾದ್ರಿ ಕ್ಯಾಂಪಸ್, ಮತ್ತು ವಿವಿ...