Friday, March 20, 2026
Friday, March 20, 2026

Shivaganga Yoga Centre ಯೋಗದಿಂದ ಮಾನಸಿಕ ಖಿನ್ನತೆ ದೂರ ಮತ್ತು ಉತ್ತಮ ಆರೋಗ್ಯ- ಸಿ.ವಿ.ರುದ್ರಾರಾಧ್ಯ

Date:

Shivaganga Yoga Centre ಯೋಗ ಅಭ್ಯಾಸದಿಂದ ಮಾನಸಿಕ ಖಿನ್ನತೆ ದೂರವಾಗುತ್ತದೆ. ನಮಗೆ ಸದಾ ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಸಾಧ್ಯವಾಗುವ ಜತೆಯಲ್ಲಿ ಆತ್ಮವಿಶ್ವಾಸ ವೃದ್ಧಿಯಾಗುತ್ತದೆ ಎಂದು ರಾಜ್ಯಪ್ರಶಸ್ತಿ ಪುರಸ್ಕೃತ ಶಿವಗಂಗಾ ಯೋಗಕೇಂದ್ರದ ಯೋಗಾಚಾರ್ಯ ಸಿ.ವಿ.ರುದ್ರಾರಾಧ್ಯ ಹೇಳಿದರು.
ನಗರದ ಬೊಮ್ಮನಕಟ್ಟೆಯ ಮಮತಾ ನಗರದಲ್ಲಿ ಆಯೋಜಿಸಿದ್ದ 20 ದಿನಗಳ ಉಚಿತ ಯೋಗ ಶಿಬಿರದ ಸಮಾರೋಪ ಹಾಗೂ 32ನೇ ಶಾಖೆ ಪ್ರಾರಂಭೋತ್ಸವದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಯೋಗದ ಕಲಿಕೆಯಲ್ಲಿ ತೊಡಗಿಸಿಕೊಳ್ಳುವುದರಿಂದ ನಕರಾತ್ಮಕ ಭಾವನೆಗಳನ್ನು ದೂರ ಮಾಡುವುದರ ಜತೆಯಲ್ಲಿ ಮನುಷ್ಯನ ಮನಸ್ಸನ್ನು ತಿಳಿಗೊಳಿಸುತ್ತದೆ. ಮುಖದಲ್ಲಿ ಕಾಂತಿ ಹೆಚ್ಚಿಸುತ್ತದೆ. ದ್ವೇಷ ಅಸೂಹೆಗಳನ್ನು ಕಡಿಮೆಗೊಳಿಸುತ್ತದೆ ಎಂದು ತಿಳಿಸಿದರು.
ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಉಪಾಧ್ಯಕ್ಷ ಜಿ.ವಿಜಯಕುಮಾರ್ ಮಾತನಾಡಿ, ಯೋಗಕ್ಕೆ ಸಾವಿರಾರು ವರ್ಷಗಳ ಇತಿಹಾಸ ಇದ್ದು, ಔಷಧಿಗಳಿಂದ ಗುಣಪಡಿಸಲು ಸಾಧ್ಯವಾಗದ ಕೆಲ ಕಾಯಿಲೆಗಳನ್ನು ಯೋಗದಿಂದ ಗುಣಪಡಿಸಲು ಸಾಧ್ಯವಿದೆ ಎಂದು ಹೇಳಿದರು.
Shivaganga Yoga Centre ಪ್ರತಿ ನಿತ್ಯ ಯೋಗ ಗುರುಗಳ ಮಾರ್ಗದರ್ಶನದಲ್ಲಿ ಯೋಗ, ಪ್ರಾಣಾಯಾಮ, ಧ್ಯಾನ, ಭಜನೆ ಮಾಡಿದರೆ ಸದಾ ಹಸನ್ಮುಖಿಯಾಗಿರಲು ಸಾಧ್ಯ. ಲವಲವಿಕೆಯಿಂದ ಇರುವ ಜತೆಯಲ್ಲಿ ಆಯುಷ್ಯ ಹೆಚ್ಚಾಗಲು ಸಾಧ್ಯವಾಗುತ್ತದೆ. ಈಗಾಗಲೇ ಶಿವಗಂಗಾ ಯೋಗಕೇಂದ್ರದ ವತಿಯಿಂದ ನಗರದಲ್ಲಿ 32 ಕೇಂದ್ರಗಳಲ್ಲಿ ಉಚಿತವಾಗಿ ಯೋಗ ಕಲಿಸುತ್ತಿದೆ. ಉತ್ತಮ ಆರೋಗ್ಯ ಶೈಲಿ, ಜೀವನಕ್ರಮಗಳನ್ನು ಅಳವಡಿಸಿಕೊಳ್ಳಬೇಕು ಎಂದು ತಿಳಿಸಿದರು.
ಯೋಗ ಶಿಕ್ಷಕರಾದ ವಿಜಯಾ ಬಾಯರ್ ಅವರು ಮಾತನಾಡಿ, ಯೋಗ ನಮ್ಮ ಬಾಹ್ಯ ಹಾಗೂ ಆಂತರಿಕ ಸೌಂದರ್ಯ ಹೆಚ್ಚಿಸುವುದರ ಜತೆಗೆ ಕಾಯಿಲೆಗಳಿಂದ ದೂರ ಇರುವಂತೆ ಮಾಡುತ್ತದೆ. ಆತ್ಮಸ್ಥೈರ್ಯ ಹೆಚ್ಚಿಸುತ್ತದೆ ಎಂದು ಹೇಳಿದರು. ಸಹಶಿಕ್ಷಕ ಅಶೋಕ್, ಉಮೇಶ್, ಆಶಾ, ಪುಟ್ಟಸ್ವಾಮಿ, ಶಿವಕುಮಾರ್, ವಿನುತಾ, ತ್ರಿವೇಣಿ, ರೇಣುಕಮ್ಮ ಹಾಗೂ ಯೋಗ ಶಿಬಿರಾರ್ಥಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ಗೋಪಾಲ ಗೌಡರು ಶಿವಮೊಗ್ಗ ಜಿಲ್ಲೆಯನ್ನ ಸಮಾಜವಾದದ ತೊಟ್ಟಿಲನ್ನಾಗಿ ರೂಪಿಸಿದವರು- ವೈ.ಎಸ್.ವಿ.ದತ್ತ.

Shimoga News ನಗರದ ಮಥುರಾ ಪ್ಯಾರಡೈಸ್ ಸಭಾಂಗಣದಲ್ಲಿ ಮಾಜಿ ಶಾಸಕ ಹಾಗೂ...

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...