Wednesday, April 30, 2025
Wednesday, April 30, 2025

Friends Centre Shivamogga ಇತಿಹಾಸ, ಸಂಸ್ಕೃತಿ ಅರಿವು ಮೂಡಿಸಲು ಬೊಂಬೆ ಪ್ರದರ್ಶನ ಸಹಕಾರಿ- ವಿ.ನಾಗರಾಜ್

Date:

Friends Centre Shivamogga ಜನರ ಜೀವನಶೈಲಿ, ಆಚಾರ-ವಿಚಾರ, ಸಂಸ್ಕೃತಿ ಪರಂಪರೆ ಪ್ರತಿಬಿಂಬಿಸುವ ಮತ್ತು ಹಿಂದಿನ ಅನೇಕ ಘಟನೆಗಳ ಬಗ್ಗೆ ಮಾಹಿತಿ ನೀಡಲು ಬೊಂಬೆ ಸಂಸ್ಕೃತಿ ಇಂದಿಗೂ ಪ್ರಸ್ತುತ ಎಂದು ಫ್ರೆಂಡ್ಸ್ ಸೆಂಟರ್ ಮಾಜಿ ಅಧ್ಯಕ್ಷ, ನೇತ್ರಭಂಡಾರದ ಚೇರ್ಮನ್ ವಿ.ನಾಗರಾಜ್ ಹೇಳಿದರು.

ಶಿವಮೊಗ್ಗ ನಗರದ ನವ್ಯಶ್ರೀ ಸಭಾಂಗಣದಲ್ಲಿ ಫ್ರೆಂಡ್ಸ್ ಸೆಂಟರ್ ವತಿಯಿಂದ ಆಯೋಜಿಸಿದ್ದ ನೋಡೋಣ ಬನ್ನಿ ದಸರಾ ಬೊಂಬೆ ಕಾರ್ಯಕ್ರಮದಲ್ಲಿ ಮಾತನಾಡಿ, ಇತಿಹಾಸದ ಸಂಸ್ಕೃತಿ ಬಗ್ಗೆ ಅರಿವು ಮೂಡಿಸಲು ಹಾಗೂ ಮಕ್ಕಳಿಗೆ ತಿಳಿಸಲು ದಸರಾ ಬೊಂಬೆ ಪ್ರದರ್ಶನ ಹೆಚ್ಚು ಸಹಕಾರಿಯಾಗುತ್ತದೆ. ಕಲೆ ಹಾಗೂ ಸಂಸ್ಕೃತಿಯನ್ನು ಉಳಿಸಿ ಬೆಳೆಸುವುದರ ಜೊತೆಗೆ ನಮ್ಮ ಮಕ್ಕಳಿಗೆ ಪರಿಚಯಿಸುವ ಅಗತ್ಯತೆ ಇದೆ ಎಂದು ತಿಳಿಸಿದರು.

ಫ್ರೆಂಡ್ಸ್ ಸೆಂಟರ್ ಸಂಸ್ಥೆ ವತಿಯಿಂದ ನಗರ ಹಾಗೂ ಗ್ರಾಮೀಣ ಪ್ರದೇಶದಲ್ಲಿ ದಸರಾ ಬೊಂಬೆ ಇಟ್ಟಿರುವ ಮನೆಗಳನ್ನು ಭೇಟಿ ಮಾಡಿ ಬೊಂಬೆ ಸಂಸ್ಕೃತಿಯನ್ನು ವೀಕ್ಷಿಸಿ ಅತ್ಯುತ್ತಮವಾಗಿ ಪ್ರದರ್ಶನ ಹಾಗೂ ಸಂಸ್ಕೃತಿ ಬಗ್ಗೆ ವಿವರಿಸಿದ 25 ಜನ ಸ್ಪರ್ಧಾಳುಗಳಿಗೆ ಸನ್ಮಾನಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಫ್ರೆಂಡ್ಸ್ ಸಎಂಟರ್ ಅಧ್ಯಕ್ಷ ಬಿ.ಜಿ.ಧನರಾಜ್ ಮಾತನಾಡಿ, ಕಲೆ ಸಂಸ್ಕೃತಿ ಸಾಹಿತ್ಯವನ್ನು ಉಳಿಸುವಂತಹ ಕೆಲಸಗಳನ್ನು ಸಂಘ ಸಂಸ್ಥೆಗಳು ಮಾಡಬೇಕು. ನಮ್ಮ ಫ್ರೆಂಡ್ಸ್ ಸೆಂಟರ್ ವತಿಯಿಂದ ಅನೇಕ ಸಮಾಜಮುಖಿ ಕಾರ್ಯಕ್ರಮಗಳ ಜೊತೆಗೆ ಇಂತಹ ಕಾರ್ಯಕ್ರಮಗಳಿಗೆ ಹೆಚ್ಚು ಪ್ರೋತ್ಸಾಹ ನೀಡುತ್ತಿದ್ದೇವೆ ಎಂದು ತಿಳಿಸಿದರು.

Friends Centre Shivamogga ಕಾರ್ಯಕ್ರಮದ ಪ್ರಮುಖ ಆಯೋಜಕರಾದ ಶ್ರೀ ರಂಜಿನಿ ದತ್ತಾತ್ರಿ ಅವರು ತೀರ್ಪುಗಾರರ ತಂಡದೊಂದಿಗೆ ಭೇಟಿ ನೀಡಿ ಬೊಂಬೆ ಮನೆಗಳನ್ನು ವೀಕ್ಷಿಸಿ ತೀರ್ಪು ನೀಡಿ ಬಹುಮಾನ ವಿತರಿಸಿದರು.

ಕಾರ್ಯಕ್ರಮದಲ್ಲಿ ಮಾಜಿ ಅಧ್ಯಕ್ಷ ಜಿ.ವಿಜಯಕುಮಾರ್, ಕಾರ್ಯದರ್ಶಿ ಯು.ರವೀಂದ್ರನಾಥ್ ಐತಾಳ್, ಎಲ್‌ಎಂ.ಮೋಹನ್, ರಮೇಶ್, ಲಕ್ಷ್ಮೀ ಸತ್ಯನ್, ರಜನಿ ಅಶೋಕ್, ಫ್ರೆಂಡ್ಸ್ ಸೆಂಟರ್ ಪದಾಧಿಕಾರಿಗಳು ಉಪಸ್ಥಿತರಿದ್ದರು.
ನೋಡೋಣ ಬನ್ನಿ ದಸರಾ ಗೊಂಬೆಯಲ್ಲಿ ಒಟ್ಟು 25 ಸ್ಪರ್ಧಿಗಳು ಭಾಗವಹಿಸಿದ್ದರು. ಸುರೇಂದ್ರ, ಸುಧಾ ರಾಮಪ್ರಸಾದ್, ರುಕ್ಮಿಣಿ, ಬೃಂದಾ ಪ್ರಸನ್ನ ಕುಮಾರ್, ದೀಪ ವಿವಿ, ವೀಣಾ ನಾಗರಾಜ್, ಸುಕನ್ಯಾ ನಂಜುಂಡಯ್ಯ, ಶ್ರುತಿ ದೀಕ್ಷಿತ್, ರುಕ್ಕು ಮತ್ತು ನಾಗು, ಕಲಾವತಿ, ಉಮಾ ರವಿಶಂಕರ್, ಶಾಲಿನಿ ರಾಜೀವ್, ದೀಪಾ ರವೀಂದ್ರ, ಸುಜಾತ ಮುರಳೀಧರ್ ಅನಂತಯ್ಯಂಗಾರ್, ಸುಜಾತ ಗಣಪತಿ, ಮಾಲತಿ ಮತ್ತೂರು, ಅನ್ನಪೂರ್ಣ, ನಾಗರಾಜು ಎಚ್ ಎಸ್, ಮೇರಿ ಡಿಸೋಜ, ನೇತ್ರ ನಾಗರಾಜ್, ಜಾನಕಿ ಸುಬ್ರಹ್ಮಣ್ಯ, ಬಿಂದು ಮಾಲಿನಿ, ಪ್ರದೀಪ್ , ಸುಷ್ಮಾ ಸುಧೀರ್ ಇತರರು ಸ್ಪರ್ಧೆಯಲ್ಲಿ ಭಾಗವಹಿಸಿದ್ದರು. ಒಟ್ಟು 25 ಜನರಿಗೆ ಆಕರ್ಷಕ ಬಹುಮಾನ ನೀಡಲಾಯಿತು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ಕೆಡಿಪಿ ಸಭೆಯಲ್ಲಿ ಮಹತ್ವದ ವಿಷಯಗಳ ಬಗ್ಗೆ ಶಾಸಕ ಚೆನ್ನ ಅವರಿಂದ ಚರ್ಚೆ

S.N. Channabasappa ಶಿವಮೊಗ್ಗ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಕೆಡಿಪಿ...

KSRTC ಮೃತವ್ಯಕ್ತಿ ಕುಟುಂಬಕ್ಕೆ ಪರಿಹಾರ ಧನ ತಲುಪಿಸಿದ ಕಾರವಾರ ಸಾರಿಗೆ ವಿಭಾಗ

KSRTC 2024 ರ ಜು.22 ರಂದು ಶಿರಸಿ ಮತ್ತು ಸಾಗರ ಮಾರ್ಗದಲ್ಲಿ...

ಚಿತ್ರದುರ್ಗ ಜಿಲ್ಲೆಯ “ಕನ್ನಡ ಸಂಪಿಗೆ” ಪತ್ರಕರ್ತ ಟಿ.ತಿಪ್ಪೆಸ್ವಾಮಿ “ಬಸವಸೇವಾರತ್ನ” ಪ್ರಶಸ್ತಿ

ಯಶಸ್ವಿ ಪತ್ರಿಕೋದ್ಯಮ ಹಾಗೂ ಅಲಕ್ಷಿತ ಸಣ್ಣ ಸಮುದಾಯಗಳ ಪರವಾಗಿ ದುಡಿದ ಅನುಪಮ...

Sri Shivananda Bharati Chintamani Swami ಹೊಸಪೇಟೆಯಲ್ಲಿ ಶಂಕರ ವರ್ಧಂತಿ ವಿಶೇಷ ಶಂಕರ ಸ್ತೋತ್ರ ಪಠಣ ಸಮರ್ಪಣೆ

Sri Shivananda Bharati Chintamani Swami ಶ್ರೀಶ್ರೀ ಶಿವಾನಂದ ಭಾರತಿ ಚಿಂತಾಮಣಿ...