Thursday, March 13, 2025
Thursday, March 13, 2025

Yasir Ahmad Khan Pathan ಶಿಗ್ಗಾಂವಿ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಯಾಸಿರ್ ಪಠಾಣ್ ಆಯ್ಕೆ. ಕಾರ್ಯಕರ್ತರಲ್ಲಿ ಅಸಮಾಧಾನದ ಅಲೆ?

Date:

Yasir Ahmad Khan Pathan ರಾಜ್ಯದ ಶಿಗ್ಗಾಂವಿ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಕೊನೆಗೂ ಕಾಂಗ್ರೆಸ್ ಅಭ್ಯರ್ಥಿಯನ್ನು ಘೋಷಿಸಿದ್ದು, ಪಕ್ಷದ ನಾಯಕ ಯಾಸೀರ್ ಅಹ್ಮದ್ ಖಾನ್ ಪಠಾಣ್ ಅವರನ್ನು ಆಯ್ಕೆ ಮಾಡಿದೆ. ಇದಕ್ಕೂ ಮೊದಲು ಬಸವರಾಜ ಬೊಮ್ಮಾಯಿ ಅವರ ಮಗ ಭರತ್ ಬೊಮ್ಮಾಯಿ ಅವರನ್ನು ಬಿಜೆಪಿ ಕಣಕ್ಕೆ ಇಳಿಸಿದೆ.

ಕಾಂಗ್ರೆಸ್ನಿಂದ ಯಾಸೀರ್ ಅಹ್ಮದ್ ಖಾನ್ ಪಠಾಣ್ ಸ್ಪರ್ಧಿಸುತ್ತಿದ್ದಾರೆ ಎಂದು ಕಾಂಗ್ರೆಸ್ ಘೋಷಣೆ ಮಾಡಿದ್ದು, ಕಳೆದ ಬಾರಿ ಬಸವರಾಜ್ ಬೊಮ್ಮಾಯಿ ಎದುರು ಅವರು 35 ಸಾವಿರ ಮತಗಳ ಅಂತರದಲ್ಲಿ ಸೋತಿದ್ದರು.

ಈ ಬಾರಿ ಅಲ್ಪಸಂಖ್ಯಾತ ಅಭ್ಯರ್ಥಿಗೆ ಟಿಕೆಟ್ ನೀಡುವುದಿಲ್ಲ ಎಂದು ಕಾಂಗ್ರೆಸ್ ವಲಯದಲ್ಲಿ ಭಾರಿ ಚರ್ಚೆ ನಡೆದಿತ್ತು. ಅದಾಗ್ಯೂ, ಕೊನೆಗೂ ಯಾಸೀರ್ ಅವರು ಟಿಕೆಟ್ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಶಿಗ್ಗಾಂವಿ ಉಪ ಚುನಾವಣೆ
ಯಾಸೀರ್ ಅವರು ಎರಡನೇ ಬಾರಿ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುತ್ತಿದ್ದಾರೆ.

Yasir Ahmad Khan Pathan ಅವರ ತಾಯಿ ಕೂಡ ಜಿಲ್ಲಾ ಪಂಚಾಯತ್ ಸದಸ್ಯರಾಗಿ ಆಯ್ಕೆಯಾಗಿದ್ದರು. ಕ್ಷೇತ್ರದಲ್ಲಿ ಮುಸ್ಲಿಮರ ಮತಗಳು ಗಣನೀಯವಾಗಿದ್ದು 30%ಕ್ಕಿಂತ ಹೆಚ್ಚಿವೆ. ಜೊತೆಗೆ ಬೊಮ್ಮಾಯಿ ವಿರುದ್ಧ ಕ್ಷೇತ್ರದಲ್ಲಿ ಅಸಮಾಧಾನ ಹೆಚ್ಚಾಗಿವೆ. ಹಾಗಾಗಿ ಅವರ ಗೆಲುವು ಸುಲಭವಾಗಿರುತ್ತದೆ ಎಂದು ಕಾಂಗ್ರೆಸ್ ಲೆಕ್ಕಾಚಾರವಾಗಿದೆ.
ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಲಿಂಗಾಯತ ಸಮುದಾಯದ ಅಭ್ಯರ್ಥಿಗೆ ಟಿಕೆಟ್ ನೀಡಲು ಬಯಸಿದ್ದರು.

ಆದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಸಚಿವ ಜಮೀರ್ ಅಹಮದ್ ಖಾನ್ ಅವರು ಮುಸ್ಲಿಂ ಅಭ್ಯರ್ಥಿಗೆ ಟಿಕೆಟ್ ನೀಡಬೇಕು ಎಂದು ಒತ್ತಡ ಹೇರಿದ್ದರು ಎಂದು ವರದಿಯಾಗಿತ್ತು. ಒಂದು ವೇಳೆ ಮುಸ್ಲಿಮೇತರರಿಗೆ ಟಿಕೆಟ್ ನೀಡಿದ್ದರೆ ಮುಸ್ಲಿಮರ ಅಸಮಾಧಾನಕ್ಕೂ ಗುರಿಯಾಗುವ ಭಯ ಕಾಂಗ್ರೆಸ್‌ಗೆ ಇತ್ತು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

State Film Awards 2020 ನೇ ಸಾಲಿನ ಚಲನಚಿತ್ರ ಪ್ರಶಸ್ತಿ ಘೋಷಣೆ

State Film Awards 2020ನೇ ಸಾಲಿನ ಆಯ್ಕೆ ಸಮಿತಿಯು ಸಲ್ಲಿಸಿರುವ ವರದಿಯಲ್ಲಿ...

Klive Special ಹೆತ್ತವಳಿಗೊಂದು ಕವನ-ನಮನ

Klive Special ದೇವರ ಸ್ವರೂಪ ಗರ್ಭದಲ್ಲಿ ಹೊತ್ತುನವಮಾಸಕ್ಕೆ ಹೆತ್ತುಮೌಲ್ಯಗಳನ್ನೇ ಬಿತ್ತುಸಲಹಿದೆ ನೀಡಿ ಕೈತುತ್ತು ಅಮ್ಮ...

Guarantee Scheme ಸತ್ಯ & ಶುದ್ಧ ಮಾರ್ಗದಿಂದ ರಾಷ್ಟ್ರ ಕಟ್ಟಲು ಸಾಧ್ಯ- ಸಿ.ಎಸ್.ಚಂದ್ರಭೂಪಾಲ್

Guarantee Scheme ಅಂತರಂಗ ಮತ್ತು ಬಹಿರಂಗ ಶುದ್ದಿಯಿಂದ ಹಾಗೂ ಸತ್ಯದ ಮಾರ್ಗದಲ್ಲಿ...