Sunday, August 2, 2026
Sunday, August 2, 2026

ಬೈಸೆ ಗ್ರಾಮದಲ್ಲಿ ಬೆಂಕಿ ಆಕಸ್ಮಿಕ ₹4.5. ಲಕ್ಷ ಮೌಲ್ಯದನಗದು, ಬಟ್ಟೆ , ಬಂಗಾರ ಬೆಂಕಿಗಾಹುತಿ

Date:

ಆಕಸ್ಮಿಕ ಬೆಂಕಿಗೆ ತುತ್ತಾಗಿ ವಾಸದ ಮನೆ ಭಾಗಶಃ ಸುಟ್ಟು ಹೋದ ಘಟನೆ ತಾಲೂಕಿನ ಬೈಸೆ ಗ್ರಾಮದ ಹೂಕೊಪ್ಪಲು ಎಂಬಲ್ಲಿ ಭಾನುವಾರ ನಡೆದಿದೆ.

ವಿಶಾಲಾಕ್ಷಿಯವರಿಗೆ ಸೇರಿದ ಮನೆಗೆ ಮಧ್ಯಾಹ್ಮ ಆಕಸ್ಮಿಕವಾಗಿ ಬೆಂಕಿ ತಗುಲಿದೆ. ಬೆಂಕಿಗೆ 95 ಸಾವಿರ ಹಣ, ಬಟ್ಟೆ, 30 ಗ್ರಾಂ ತೂಕದ ಬಂಗಾರ, ಅಡಿಕೆ ಸೇರಿದಂತೆ ಒಟ್ಟು ರೂ. 4.5 ಲಕ್ಷ ನಷ್ಟ ಉಂಟಾಗಿದೆ.

ಮನೆಯವರು ಹತ್ತಿರದ ಜಮೀನಿನಲ್ಲಿ ಕೆಲಸ ನಿರ್ವಹಿಸುತ್ತಿದ್ದಾಗ ಈ ಘಟನೆ ಸಂಭವಿಸಿದೆ. ಮನೆ ಯಿಂದ ಹೊಗೆ ಹೊರಗೆ ಹೋಗುತ್ತಿದ್ದುದನ್ನು ಗಮನಿಸಿ ಅವರು ಓಡೋಡಿ ಬಂದಿದ್ದಾರೆ. ಬಳಿಕ ಸ್ಥಳೀಯರ ಸಹಕಾರದಿಂದ ಸತತ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.
ವಿಶಾಲಾಕ್ಷಿ ಎಂಬುವವರು 5 ವರ್ಷದ ಹಿಂದೆ ಪತಿಯನ್ನು ಕಳೆದುಕೊಂಡಿದ್ದರು. ಮೂವರು ಚಿಕ್ಕ ಮಕ್ಕಳನ್ನು ಹೊಂದಿದ್ದಾರೆ.

ಕಷ್ಟಪಟ್ಟು ಬದುಕುತ್ತಿದ್ದ ಅವರಿಗೆ ಈ ದುರಂತ ಅಸಹಾಯಕನ್ನಾಗಿ ಮಾಡಿದೆ.
ಸ್ಥಳಕ್ಕೆ ಗ್ರಾಪಂ ಸದಸ್ಯರಾದ ಅರುಣ ಬೈಸೆ, ಕೆ.ಬಿ.ಕುಮಾರ್, ಕರುಣಾಕರ ಶೆಟ್ಟಿ, ಪೊಲೀಸ್ ಮತ್ತು ಕಂದಾಯ ಅಧಿಕಾರಿಗಳು ದೌಡಾಯಿಸಿ ಪರಿಶೀಲನೆ ನಡೆಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ತೀರ್ಥಹಳ್ಳಿಯಲ್ಲಿ ಮಳೆಗೆ ಶೆಡ್ ಕುಸಿತ: ಮೂವರ ಸಾವು.ಡಿಸಿಎಂ. ಡಾ.ಜಿ.ಪರಮೇಶ್ವರ ಸಂತಾಪ.

Breaking News ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಇಂದಿರಾನಗರದಲ್ಲಿ ಭಾರೀ ಮಳೆಗೆ ಗುಡ್ಡ...

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...