Monday, February 2, 2026
Monday, February 2, 2026

Bhadravati Police ಭದ್ರಾವತಿಯಲ್ಲಿ ಗಾಂಜಾ ಮಾರಾಟ. ಆರೋಪಿ ಮಹಮ್ಮದ್ ಅಬ್ಬಾಸ್ ಬಂಧನ

Date:

Bhadravati Police ಭದ್ರಾವತಿ ನಗರದ ಸಿಗೇಬಾಗಿ ಹಳೆ ಬಸ್ ಸ್ಟ್ಯಾಂಡ್ ಹತ್ತಿರ ಸಾರ್ವಜನಿಕ ಸ್ಥಳದಲ್ಲಿ, ಮಾದಕ ವಸ್ತು ಗಾಂಜಾವನ್ನು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದ
ಸ್ಥಳೀಯ ಮೊಹಮ್ಮದ್ ಅಬ್ಬಾಸ್ (೨೭) ಎನ್ನುವವನನ್ನು ಪೊಲೀಸರು ಬಂಧಿಸಿದ್ದಾರೆ.

 ಖಚಿತ ಮಾಹಿತಿಯ ಮೇರೆಗೆ ಪಿಐ* ಸಿಇಎನ್ ಕ್ರೈಂ ಪೊಲೀಸ್ ಠಾಣೆಯ ಮಂಜುನಾಥ ನೇತೃತ್ವದ ಸಿಬ್ಬಂದಿಗಳ ತಂಡವು ಸ್ಥಳಕ್ಕೆ ಹೋಗಿ ದಾಳಿ ನಡೆಸಿ, ಬಂಧಿಸಿ
ಅಂದಾಜು ಮೌಲ್ಯ ೯೫,೦೦೦ ರೂಗಳ ೧ ಕೆಜಿ ೩೭ ಗ್ರಾಂ ತೂಕದ ಒಣ ಗಾಂಜಾ ಮತ್ತು ರೂ ೩೫೦ ನಗದು ಹಣವನ್ನು* ಅಮಾನತ್ತುಪಡಿಸಿ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದೆ.
 Bhadravati Police ಇನ್ನೊಂದು ಪ್ರಕರಣದಲ್ಲಿ ಹೊಳೆನ್ನೂರು ಪೊಲೀಸ್ ಠಾಣಾ ವ್ಯಾಪ್ತಿಯ ಅಗರದಹಳ್ಳಿ ಕ್ಯಾಂಪ್ ನ ವಾಸಿ ಸಂಜೀವಬಾಬು (೪೦) ಮಾದಕ ವಸ್ತು ಗಾಂಜಾವನ್ನು ಸಾರ್ವಜನಿಕರಿಗೆ ಮಾರಾಟ ಮಾಡುವ ಉದ್ದೇಶದಿಂದ ತನ್ನ ಮನೆಯಲ್ಲಿ ಸಂಗ್ರಹಿಸಿ ಇಟ್ಟಿದ್ದನ್ನು ಖಚಿತ ಮಾಹಿತಿಯ ಮೇರೆಗೆ ಪಿ ಐ ಲಕ್ಷ್ಮಿಪತಿ, ಎಸ್ ಐ ರಮೇಶ್, ಸಿಬ್ಬಂಧಿಗಳ ತಂಡವು ಸ್ಥಳಕ್ಕೆ ಹೋಗಿ ದಾಳಿ ನಡೆಸಿ, ಗಾಂಜಾ ಮಾರಾಟ ಮಾಡುತ್ತಿದ್ದವನ್ನು ಬಂಧಿಸಿದೆ.
 ಇನ್ನೊಬ್ಬ ಆರೋಪಿತ ಗುರುಪ್ರಸಾದ್ (೨೪) ಸಿದ್ದರ ಕಾಲೋನಿ ಭದ್ರಾವತಿ ಈತನನ್ನೂ ಸಹ ದಸ್ತಗಿರಿ ಮಾಡಿ, ಸದರಿ ಆರೋಪಿತರಿಂದ ಅಂದಾಜು ಮೌಲ್ಯ ೨,೮೦,೦೦೦ ರೂ ಗಳ ಒಟ್ಟು ೫ ಕೆಜಿ ೫೭೪ ಗ್ರಾಂ ತೂಕದ ಒಣ ಗಾಂಜಾ ಮತ್ತು ಮೊಬೈಲ್ ಫೋನ್ ಅನ್ನು ಅಮಾನತ್ತು ಪಡಿಸಿಕೊಂಡು, ಹೊಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಳ್ಳಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...