Sunday, August 2, 2026
Sunday, August 2, 2026

Bhadravati Police ಭದ್ರಾವತಿಯಲ್ಲಿ ಗಾಂಜಾ ಮಾರಾಟ. ಆರೋಪಿ ಮಹಮ್ಮದ್ ಅಬ್ಬಾಸ್ ಬಂಧನ

Date:

Bhadravati Police ಭದ್ರಾವತಿ ನಗರದ ಸಿಗೇಬಾಗಿ ಹಳೆ ಬಸ್ ಸ್ಟ್ಯಾಂಡ್ ಹತ್ತಿರ ಸಾರ್ವಜನಿಕ ಸ್ಥಳದಲ್ಲಿ, ಮಾದಕ ವಸ್ತು ಗಾಂಜಾವನ್ನು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದ
ಸ್ಥಳೀಯ ಮೊಹಮ್ಮದ್ ಅಬ್ಬಾಸ್ (೨೭) ಎನ್ನುವವನನ್ನು ಪೊಲೀಸರು ಬಂಧಿಸಿದ್ದಾರೆ.

 ಖಚಿತ ಮಾಹಿತಿಯ ಮೇರೆಗೆ ಪಿಐ* ಸಿಇಎನ್ ಕ್ರೈಂ ಪೊಲೀಸ್ ಠಾಣೆಯ ಮಂಜುನಾಥ ನೇತೃತ್ವದ ಸಿಬ್ಬಂದಿಗಳ ತಂಡವು ಸ್ಥಳಕ್ಕೆ ಹೋಗಿ ದಾಳಿ ನಡೆಸಿ, ಬಂಧಿಸಿ
ಅಂದಾಜು ಮೌಲ್ಯ ೯೫,೦೦೦ ರೂಗಳ ೧ ಕೆಜಿ ೩೭ ಗ್ರಾಂ ತೂಕದ ಒಣ ಗಾಂಜಾ ಮತ್ತು ರೂ ೩೫೦ ನಗದು ಹಣವನ್ನು* ಅಮಾನತ್ತುಪಡಿಸಿ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದೆ.
 Bhadravati Police ಇನ್ನೊಂದು ಪ್ರಕರಣದಲ್ಲಿ ಹೊಳೆನ್ನೂರು ಪೊಲೀಸ್ ಠಾಣಾ ವ್ಯಾಪ್ತಿಯ ಅಗರದಹಳ್ಳಿ ಕ್ಯಾಂಪ್ ನ ವಾಸಿ ಸಂಜೀವಬಾಬು (೪೦) ಮಾದಕ ವಸ್ತು ಗಾಂಜಾವನ್ನು ಸಾರ್ವಜನಿಕರಿಗೆ ಮಾರಾಟ ಮಾಡುವ ಉದ್ದೇಶದಿಂದ ತನ್ನ ಮನೆಯಲ್ಲಿ ಸಂಗ್ರಹಿಸಿ ಇಟ್ಟಿದ್ದನ್ನು ಖಚಿತ ಮಾಹಿತಿಯ ಮೇರೆಗೆ ಪಿ ಐ ಲಕ್ಷ್ಮಿಪತಿ, ಎಸ್ ಐ ರಮೇಶ್, ಸಿಬ್ಬಂಧಿಗಳ ತಂಡವು ಸ್ಥಳಕ್ಕೆ ಹೋಗಿ ದಾಳಿ ನಡೆಸಿ, ಗಾಂಜಾ ಮಾರಾಟ ಮಾಡುತ್ತಿದ್ದವನ್ನು ಬಂಧಿಸಿದೆ.
 ಇನ್ನೊಬ್ಬ ಆರೋಪಿತ ಗುರುಪ್ರಸಾದ್ (೨೪) ಸಿದ್ದರ ಕಾಲೋನಿ ಭದ್ರಾವತಿ ಈತನನ್ನೂ ಸಹ ದಸ್ತಗಿರಿ ಮಾಡಿ, ಸದರಿ ಆರೋಪಿತರಿಂದ ಅಂದಾಜು ಮೌಲ್ಯ ೨,೮೦,೦೦೦ ರೂ ಗಳ ಒಟ್ಟು ೫ ಕೆಜಿ ೫೭೪ ಗ್ರಾಂ ತೂಕದ ಒಣ ಗಾಂಜಾ ಮತ್ತು ಮೊಬೈಲ್ ಫೋನ್ ಅನ್ನು ಅಮಾನತ್ತು ಪಡಿಸಿಕೊಂಡು, ಹೊಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಳ್ಳಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ತೀರ್ಥಹಳ್ಳಿಯಲ್ಲಿ ಮಳೆಗೆ ಶೆಡ್ ಕುಸಿತ: ಮೂವರ ಸಾವು.ಡಿಸಿಎಂ. ಡಾ.ಜಿ.ಪರಮೇಶ್ವರ ಸಂತಾಪ.

Breaking News ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಇಂದಿರಾನಗರದಲ್ಲಿ ಭಾರೀ ಮಳೆಗೆ ಗುಡ್ಡ...

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...