Saturday, December 6, 2025
Saturday, December 6, 2025

Madhu Bangarappa ಸರಳ, ಸಹೃದಯಿ ವ್ಯಕ್ತಿ ಸುಭಾಷ್. ಅವರ ನಿಧನ ನೋವು ತಂದಿದೆ- ಸಚಿವ ಮಧು ಬಂಗಾರಪ್ಪ

Date:

Madhu Bangarappa ಶಿವಮೊಗ್ಗ ನಗರ ಸಭೆ ಮಾಜಿ ಅಧ್ಯಕ್ಷರು ವೀರಶೈವ ಸಮಾಜದ ಪ್ರಮುಖರೂ ಆದ ಎನ್.ಜೆ.ರಾಜಶೇಖರ್‌ (ಸುಭಾಷ್‌) ನಿಧನಕ್ಕೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವರು ಹಾಗೂ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವರಾದ ಮಧುಬಂಗಾರಪ್ಪ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಸರಳ ಮತ್ತು ಸಹೃದಯಿ ವ್ಯಕ್ತಿಯಾಗಿದ್ದ ಸುಭಾಷ್‌ ನಿಧನ ನೋವು ತಂದಿದೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ. ಕುಟುಂಬಕ್ಕೆ ನೋವು ಸಹಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಅವರು ತಮ್ಮ ಸಂತಾಪ ಸೂಚಕ ಸಂದೇಶದಲ್ಲಿ ತಿಳಿಸಿದ್ದಾರೆ.
Madhu Bangarappa ಶಿವಮೊಗ್ಗ ಜಿಲ್ಲೆಯ ಉದ್ಯಮ ವಲಯಕ್ಕೆ ತಮ್ಮದೇ ಆದ ಸೇವೆ ಸಲ್ಲಿಸಿರುವ ರಾಜಶೇಖರ್‌ ಕುಟುಂಬ ರಾಜಕೀಯವಾಗಿಯೂ ಸೇವೆ ಸಲ್ಲಿಸಿದೆ. ಶುಭಾಷ್‌ ಹಿರಿಯ ಸೋದರ ಎನ್.ಜೆ.ವೀರಣ್ಣ ಅವರು ತಮ್ಮ ಕುಟುಂಬಕ್ಕೆ ಆತ್ಮೀಯರಾಗಿದ್ದು, ತಂದೆ ಬಂಗಾರಪ್ಪ ಅವರಿಗೆ ಅತ್ಯಾಪ್ತರಾಗಿದ್ದರು ಎಂದು ಹೇಳಿರುವ ಸಚಿವರು,ಸುಭಾಷ್‌ ನಿಧನದಿಂದ ಶಿವಮೊಗ್ಗ ಜಿಲ್ಲೆ ಒಬ್ಬ ಸಭ್ಯ ವ್ಯಕ್ತಿಯನ್ನು ಕಳೆದುಕೊಂಡಂತಾಗಿದೆ ಎಂದು ದುಃಖ ವ್ಯಕ್ತಪಡಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...