Monday, May 4, 2026
Monday, May 4, 2026

CM Siddharamaiah ಪ್ರಸ್ತುತ ರಾಜ್ಯದ ಜಲಾಶಯಗಳಲ್ಲಿ 871.26 ಟಿಎಂಸಿ ನೀರು ಸಂಗ್ರಹವಿದೆ, ಕಳೆದ ವರ್ಷ 505.81 ಟಿಎಂಸಿ ಇತ್ತು- ಸಿ.ಎಂ.ಸಿದ್ಧರಾಮಯ್ಯ

Date:

CM Siddharamaiah ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಪ್ರಸಕ್ತ ಸಾಲಿನ ಹಿಂಗಾರು ಅವಧಿಯಲ್ಲಿ ಉಂಟಾದ ಮಳೆಹಾನಿ ಕುರಿತು ಜಿಲ್ಲಾಧಿಕಾರಿಗಳು ಹಾಗೂ ಜಿ.ಪಂ ನ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳೊಂದಿಗೆ ಸಭೆ ನಡೆಸಿ, ಬಳಿಕ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು.
ಸುದ್ದಿಗೋಷ್ಠಿಯ ಮುಖ್ಯಾಂಶಗಳು ಹೀಗಿವೆ

ಈ ಬಾರಿ ಹಿಂಗಾರು ಹಂಗಾಮಿನಲ್ಲಿ ಅಕ್ಟೋಬರ್‌ 1ರಿಂದ 25ರ ವರೆಗೆ ರಾಜ್ಯದಲ್ಲಿ ಸರಾಸರಿ 181 ಮಿ.ಮೀ ಮಳೆಯಾಗಿದೆ. ಈ ಅವಧಿಯ ವಾಸ್ತವಿಕ ಸರಾಸರಿ ಮಳೆ ಪ್ರಮಾಣ 114 ಮಿ.ಮೀ ಆಗಿದ್ದು, ಶೇ.58 ರಷ್ಟು ಹೆಚ್ಚುವರಿ ಮಳೆ ದಾಖಲಾಗಿದೆ.

ಮುಂಗಾರು ಅವಧಿಯಲ್ಲಿ ಅಂದರೆ ಜೂನ್‌ 1ರಿಂದ ಸೆಪ್ಟಂಬರ್‌ 30ರ ಅವಧಿಯಲ್ಲಿ ರಾಜ್ಯದಲ್ಲಿ ವಾಡಿಕೆ ಮಳೆ 852 ಮಿ.ಮೀ ಆಗಿದ್ದು, ಈ ಬಾರಿ 978 ಮಿ.ಮೀ ಮಳೆ ದಾಖಲಾಗಿದೆ. ಮುಂಗಾರು ಅವಧಿಯಲ್ಲೂ ಶೇ.15ರಷ್ಟು ಹೆಚ್ಚುವರಿ ಮಳೆಯಾಗಿತ್ತು.

ಹಿಂಗಾರು ಅವಧಿಯಲ್ಲಿ ಅಂದರೆ ಅಕ್ಟೋಬರ್‌ನಿಂದ ಡಿಸೆಂಬರ್‌ ತಿಂಗಳಲ್ಲಿ ರಾಜ್ಯದ ಹಲವು ಭಾಗಗಳಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗಲಿದೆ ಎಂದು ಈಗಾಗಲೇ ಮುನ್ಸೂಚನೆ ನೀಡಲಾಗಿದೆ.

CM Siddharamaiah ಪ್ರಸ್ತುತ ರಾಜ್ಯದ ಜಲಾಶಯಗಳಲ್ಲಿ 871.26 ಟಿಎಂಸಿ ನೀರು ಸಂಗ್ರಹವಿದೆ, ಕಳೆದ ವರ್ಷ 505.81 ಟಿಎಂಸಿ ಇತ್ತು- ಸಿ.ಎಂ.ಸಿದ್ಧರಾಮಯ್ಯ ರಾಜ್ಯದ ಪ್ರಮುಖ ಜಲಾಶಯಗಳ ಒಟ್ಟು ಸಂಗ್ರಹಣಾ ಸಾಮರ್ಥ್ಯ 895.62 ಟಿಎಂಸಿ ಆಗಿದ್ದು, ಪ್ರಸ್ತುತ 871.26 ಟಿಎಂಸಿ ನೀರು ಸಂಗ್ರಹವಿದೆ. ಕಳೆದ ವರ್ಷ ಇದೇ ಅವಧಿಯಲ್ಲಿ ಇದು 505.81 ಟಿಎಂಸಿ ಇತ್ತು

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shivamogga Police ಗಾಡಿಕೊಪ್ಪ ಸಂಚಾರ ನಿಯತ್ರಣ ಓಕೆ. ಆದರೆ ಮಿಕ್ಕ ಸಮಸ್ಯೆಗಳಿಗೆ ಪರಿಹಾರವಿಲ್ಲ ಯಾಕೆ?

Shivamogga Police ಗಾಡಿಕೊಪ್ಪ‌,ಶಿವಮೊಗ್ಗದ ಸೆಟಲೈಟ್ ಟೌನ್ ಎಂಬ ವ್ಯಾಪ್ತಿಗೆ ಬೆಳೆದುಬಿಟ್ಟಿದೆ. ಅಲ್ಕಿನ ವೃತ್ತಕ್ಕೆ...

Shivamogga Airport ಶಿವಮೊಗ್ಗಏರ್ ಪೋರ್ಟ್ ನಲ್ಲಿನೈಟ್ ಲ್ಯಾಂಡಿಂಗ್ಕಾಮಗಾರಿಯು ಜೂನ್ ತಿಂಗಳಲ್ಲಿ ಮುಗಿಯಲಿದೆ- ನಂಜಯ್ಯ‌ಮಠ

Shivamogga Airport ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಕರ್ಯ ನಿಗಮ ಮಂಡಳಿಯ (ಕೆಎಸ್‌ಐಡಿಸಿ)...

B.Y. Raghavendra ಬಿಎಸ್ ವೈ ಅಭಿಮಾನೋತ್ಸವ ಕೇವಲ ಸಮಾರಂಭವಲ್ಲ.ನಮ್ಮನಾಯಕರಿಗೆ ಸಲ್ಲಿಸುವ ಗೌರವ- ಬಿ.ವೈ.ರಾಘವೇಂದ್ರ.

B.Y. Raghavendra ಇದೇ ಮೇ 9ರಂದು ಚಿತ್ರದುರ್ಗದಲ್ಲಿ ಆಯೋಜಿಸಲಾಗಿರುವ ರೈತ ನಾಯಕ, ಮಾಜಿ...