Monday, April 21, 2025
Monday, April 21, 2025

Bhoomi Hunnime Festival ನೋನಿ ಹಬ್ಬ , ಮಲೆನಾಡಿನ ವಿಶಿಷ್ಟ ಆಚರಣೆ

Date:

Bhoomi Hunnime Festival ಮಲೆನಾಡಿನ ಪ್ರದೇಶದಲ್ಲಿ ಅದರಲ್ಲೂ ಹೊಸನಗರ ತಾಲೂಕಿನಲ್ಲಿ ದೀಪಾವಳಿಯಲ್ಲಿ ಗ್ರಾಮ ದೇವರುಗಳಿಗೆ ವಿಶೇಷವಾಗಿ ಪೂಜೆ ಸಲ್ಲಿಸಿ ಕುರಿಕೋಳಿ ಬಲಿ ನೀಡಿ ಸಂಭ್ರಮದೊಂದಿಗೆ ನೋನಿ ಆಚರಿಸುವುದು ಪುರಾತನ ಕಾಲದಿಂದಲೂ ನಡೆದುಕೊಂಡು ಬಂದಿದೆ.

ಭೂಮಿ ಹುಣ್ಣಿಮೆ ಆಗುತ್ತಿದ್ದಂತೆ ಕೆಲ ಊರುಗಳಲ್ಲಿ ಹೆಣ್ಣು ಮಕ್ಕಳು, ಮಹಿಳೆಯರು, ಗರ್ಭಿಣಿಯರು ಊರು ಬಿಡುವುದು ಪದ್ದತಿ ಕಾರಣ ಗ್ರಾಮ ದೇವರಿಗೆ ಸಾರು ಹಾಕುವ ಮೊದಲು ಅವರನ್ನು ಗ್ರಾಮದಲ್ಲಿನ ಜಮೀನಿನ ಗುಡಿಸಿಲಿನಲ್ಲಿ ಅಥವಾ ಸಂಬಂಧಿಕರ ಮನೆಗಳಿಗೆ ಕಳುಹಿಸುತ್ತಾರೆ ಇನ್ನೂ ಕೆಲವರು ಊರಿನಲ್ಲಿಯೇ ಉಳಿದರೂ ಅವರು ಋತುಮತಿಯಾದರೆ ಅಥವಾ ಸಾವನ್ನಪ್ಪಿದರೆ ಇಲ್ಲವೆ ಹೆರಿಗೆಯಾದರೆ ಆ ಊರಿನಲ್ಲಿ ನೋನಿ ಆಚರಣೆ ಇರುವುದಿಲ್ಲ. ಇನ್ನೂ ಬರುವ ವರ್ಷದ ವರೆಗೂ ಕಾಯಬೇಕಾಗುತ್ತದೆ ಇಂತಹ ಪದ್ದತಿ ಪರಂಪರಾಗತವಾಗಿ ಆಚರಣೆಯಲ್ಲಿರುವುದು ಗ್ರಾಮೀಣ ಪ್ರದೇಶದಲ್ಲಿ ಇನ್ನೂ ಜೀವಂತವಾಗಿ ಉಳಿಯುವರೊಂದಿಗೆ ಕಠಿಣ ಆಚರಣೆಯಿಂದಾಗಿ ಗ್ರಾಮದಲ್ಲಿ ಜಾತಿ ಬೇಧ-ಭಾವನೆ ಇಲ್ಲದೆ ಸಹೋದರತ್ವ ಸ್ನೇಹ ಸೌಹಾರ್ದತೆಯಿಂದಿರಲು ನೋನಿ ಕಾರಣವಾಗಿದೆ.

ಎಷ್ಟೇ ದ್ವೇಷ, ಅಸೂಯೆ ಇದ್ದರೂ ನೋನಿ ಆಚರಣೆಯಲ್ಲಿ ಊರು ಜನ ಸಂಘಟಿತರಾಗಿ ಒಂದು ಕಡೆ ಜಮಾಯಿಸಿ ನಿರ್ಧಾರ ಕೈಗೊಂಡು ಗ್ರಾಮ ದೇವರುಗಳಿಗೆ ಪೂಜೆ ಸಲ್ಲಿಸಿ ತಮ್ಮ ಜಮೀನಿನಲ್ಲಿನ ಫಸಲು ಹಾಗೂ ಜನ ಜಾನುವಾರುಗಳಿಗೆ ರೋಗ ರುಜಿನೆ ಬಾರದಂತೆ ರಕ್ಷಣೆ ನೀಡಿ ಗ್ರಾಮದಲ್ಲಿ ಕಳ್ಳತನ ಇನ್ನಿತರ ಅವಘಡಗಳು ಸಂಭವಿಸದಂತೆ ಊರ ಗಡಿರಕ್ಷಣೆ ಮಾಡು ತಾಯಿ ಎಂದು ಪ್ರಾರ್ಥಿಸಿ ಹರಕೆ ಒಪ್ಪಿಸುವುದು ವಾಡಿಕೆ.

ರಿಪ್ಪನ್‌ಪೇಟೆ ಪಟ್ಟಣದ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಆಯಾ ಗ್ರಾಮದವರು ಒಂದೊಂದು ದಿನ ತಮ ಗ್ರಾಮ ದೇವತೆಗಳಿಗೆ ವಿಶೇಷ ಪೂಜೆ ಸಲ್ಲಿಸಿ ಕುರಿ ಕೋಳಿ ಬಲಿ ನೀಡುತ್ತಾರೆ.

Bhoomi Hunnime Festival ಈ ವಾರದಲ್ಲಿ ಪಟ್ಟಣದ ವ್ಯಾಪ್ತಿಯ ಬರುವೆ ಗಾಮದಬನ, ಚಿಕ್ಕಬೀರನಕೆರೆ ಬೂತಪ್ಪ, ಮಲ್ಲಾಪುರದ ಮರುಬಿನಕುಣಿ ಬೂತಪ್ಪ, ಯಕ್ಷಣಿ ಹೀಗೆ ಗವಟೂರು ಬರುವೆ, ಕಣಬಂದೂರು, ಬೆಳಕೋಡು, ಕುಕ್ಕಳಲೇ, ವಡಗೆರೆ, ಬಟ್ಟೆಮಲ್ಲಪ್ಪ, ಹರತಾಳು, ದೊಡ್ಡಿನಕೊಪ್ಪದ ಶೀಲವಂತ ಮಕ್ಕಳ ಚೌಡಿ, ಬೈರಾಪುರ, ಮುಡುಬ, ಬೆನವಳ್ಳಿ, ಲಕ್ಕವಳ್ಳಿ, ಮಾದಾಪುರ, ಆಲವಳ್ಳಿ, ಚೌಡೇಶ್ವರಿ ಬೀದಿಯಲ್ಲಿನ ಯಕ್ಷಿಣಿ, ತಮ್ಮಡಿಕೊಪ್ಪ, ಬಸವಾಪುರ, ಹೆದ್ದಾರಿಪುರ, ಕೊಳವಳ್ಳಿ,ಕೋಟೆತಾರಿಗ, ಬೆಳ್ಳೂರು, ಮೂಲೆಗದ್ದೆ, ವಿಜಾಪುರ, ಕಚ್ಚಿಗೆಬೈಲು, ಕೇಶವಪುರ, ಬಾಳೂರು, ಹಾಲುಗುಡ್ಡೆ ಮಾದ್ಲಾರದಿಂಬ, ನೇರಲುಮನೆ, ಬೆಳಂದೂರು, ಕೆದಲುಗುಡ್ಡೆ ಇನ್ನಿತರ ಗ್ರಾಮಗಳಲ್ಲಿ ಊರು ಹೊರಭಾಗದಲ್ಲಿ ಮತ್ತು ಜಮೀನಿನ ಮೇಲ್ಭಾಗದಲ್ಲಿ ನೆಲಸಿರುವ ಗ್ರಾಮ ದೇವರುಗಳಿಗೆ ನೋನಿಯ ಸಂದರ್ಭದಲ್ಲಿ ಹರಕೆ ಕುರಿ, ಕೋಳಿ, ಹಣ್ಣು-ಕಾಯಿ ಸಮರ್ಪಿಸುವುದು ಪದ್ದತಿ ಇದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Sri Chidambara Mahaswami ಗುಬ್ಬಿ ಚಿದಂಬರಾಶ್ರಮದಲ್ಲಿಎಲೆಕ್ಟ್ರಿಷಿಯನ್ ವೃತ್ತಿ ಶಿಕ್ಷಣಕ್ಕೆ ಅರ್ಜಿ ಆಹ್ವಾನ

Sri Chidambara Mahaswami ಶ್ರೀ ಶ್ರೀ ಚಿದಂಬರ ಮಹಾಸ್ವಾಮಿಗಳು ಶ್ರೀ ಚಿದಂಬರಾಶ್ರಮವನ್ನು...

CM Siddharamaih ಪೌರ ಕಾರ್ಮಿಕರ ಸೇವೆ ಖಾಯಂಗೊಳಿಸುವ ಕಾರ್ಯ ನಡೆಯುತ್ತಿದೆ- ಸಿದ್ಧರಾಮಯ್ಯ

CM Siddharamaih ಎಲ್ಲಾ ಪೌರ ಕಾರ್ಮಿಕರ ಸೇವೆಯನ್ನು ಕಾಯಂಗೊಳಿಸುವ ಕಾರ್ಯ ನಡೆಯುತ್ತಿದೆ.ಈಗಾಗಲೇ...

DC Shivamogga ಪರೀಕ್ಷಾರ್ಥಿಯ ಜನಿವಾರ ತೆಗೆಸಿದ ಪ್ರಕರಣ, ಈರ್ವರು ಗೃಹ ರಕ್ಷಕ ದಳ ಸಿಬ್ಬಂದಿ ಅಮಾನತು-ಗುರುದತ್ತ‌ ಹೆಗಡೆ

DC Shivamogga ಶಿವಮೊಗ್ಗ ನಗರದ ಖಾಸಗಿ ಶಿಕ್ಷಣ ಸಂಸ್ಥೆಯೊಂದರಲ್ಲಿ ಇತ್ತೀಚಿಗೆ...

Mental health ಮಾನಸಿಕ ಸಮಸ್ಯೆಗಳು‌‌ ಮತ್ತು‌ ಸೂಕ್ತ ಪರಿಹಾರಗಳು ...

Mental health ಮಾನಸಿಕ ಖಾಯಿಲೆಗಳು ಯಾರಿಗಾದರೂ ಬರಬಹುದು : ಸೂಕ್ತ...