Monday, December 15, 2025
Monday, December 15, 2025

State Bank of India ನ್ಯಾಮತಿ ಎಸ್ ಬಿ ಐ ನಿಂದ ಹಣ,ಚಿನ್ನಾಭರಣ ಅಪಹರಣ

Date:

State Bank of India ಕಳ್ಳರು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್ಬಿಐ)ದ ಕಿಟಕಿಯ ಸರಳು ಮುರಿದು ಜಿಲ್ಲೆಯ ನ್ಯಾಮತಿ ಪಟ್ಟಣದ ನೆಹರು ರಸ್ತೆಯಲ್ಲಿರುವ ಶಾಖೆಯಲ್ಲಿ ಹಣ ಚಿನ್ನಾಭರಣ ಕದ್ದೊಯ್ದಿರುವ ಘಟನೆ ನಡೆದಿದೆ.

ಎರಡು ದಿನಗಳ ಹಿಂದೆಯೇ ಕಳ್ಳರು ಈ ಕೃತ್ಯ ಎಸಗಿರುವ ಬಗ್ಗೆ ನ್ಯಾಮತಿ ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.

ಶನಿವಾರ ಹಾಗು ಭಾನುವಾರ ಎರಡು ದಿನಗಳ ಕಾಲ ಬ್ಯಾಂಕ್ ರಜೆ ಇದ್ದ ಕಾರಣ ಶುಕ್ರವಾರ ರಾತ್ರಿ ಕಳ್ಳರು ಈ ಕೃತ್ಯ ಎಸಗಿದ್ದಾರೆ. ಕಿಟಕಿಯ ಸರಳುಗಳನ್ನು ಮುರಿದು ಎಸ್ ಬಿಐ ಬ್ಯಾಂಕ್ ಗೆ ನುಗ್ಗಿರುವ ದರೋಡೆಕೋರರು ಇಡೀ ಬ್ಯಾಂಕ್ ತಡಕಾಡಿದ್ದಾರೆ. ಬಳಿಕ ಬ್ಯಾಂಕ್ ನ ಮೇನ್ ಲಾಕರ್ ಒಡೆದು ಅದರಲ್ಲಿಟ್ಟಿದ್ದ ಚಿನ್ನಾಭರಣ ಹಾಗೂ ಹಣ ದೋಚಿ ಪರಾರಿಯಾಗಿದ್ದಾರೆ.

ಅಲ್ಲದೆ ಚಿನ್ನಾಭರಣ ಮತ್ತು ನಗದು ಜೊತೆಗೆ ಕಳ್ಳರು ಸಿಸಿಟಿವಿ ಕ್ಯಾಮರಾದ ಡಿವಿಆರ್ ಸಮೇತ ಪರಾರಿಯಾಗಿದ್ದಾರೆ.
ಇಂದು ಬೆಳಗ್ಗೆ ಕರ್ತವ್ಯಕ್ಕೆ ಆಗಮಿಸಿದ ಬ್ಯಾಂಕ್ ಸಿಬ್ಬಂದಿ ಇದನ್ನು ಗಮನಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

State Bank of India ತಕ್ಷಣ ಘಟನಾ ಸ್ಥಳಕ್ಕೆ ಭೇಟಿ ನೀಡಿದ ನ್ಯಾಮತಿ ಪೊಲೀಸ್ ಠಾಣೆಯ ಪಿಐ ಎನ್.ಎಸ್. ರವಿ ಅವರ ನೇತೃತ್ವದ ಪೊಲೀಸರ ತಂಡ ಪರಿಶೀಲನೆ ನಡೆಸುತ್ತಿದೆ. ಕೋಟ್ಯಂತರ ಮೌಲ್ಯದ ಚಿನ್ನಾಭರಣ ದರೋಡೆಯಾಗಿರುವ ಬಗ್ಗೆ ಅನುಮಾನ ವ್ಯಕ್ತವಾಗಿದೆ. ಶ್ವಾನದಳ ಹಾಗೂ ಬೆರಳಚ್ಚು ತಜ್ಞರ ತಂಡ ಸ್ಥಳಕ್ಕೆ ಭೇಟಿ ನೀಡಬೇಕಿದೆ.

ನ್ಯಾಮತಿ ಠಾಣೆಯ ಪಿಐ ರವಿ ಎನ್ಎಸ್ ಅವರು “ಬ್ಯಾಂಕಿನ ಕಿಟಕಿಯ ಸರಳು ಮುರಿದು ಕಳ್ಳರು ಬ್ಯಾಂಕ್ ಲೂಟಿ ಮಾಡಿದ್ದಾರೆ. ಈ ಘಟನೆ ಶುಕ್ರವಾರ ಇಲ್ಲ ಶನಿವಾರ ನಡೆದಿರಬಹುದು. ಈಗಾಗಲೇ ಶ್ವಾನದಳ, ಬೆರಳಚ್ಚು ತಜ್ಞರು ಆಗಮಿಸುತ್ತಿದ್ದು, ಅವರು ಬಂದು ಹೋದ ಬಳಿಕ ಎಷ್ಟು ಹಣ, ಚಿನ್ನಾಭರಣ ಕಳ್ಳತನ ಆಗಿದೆ ಅನ್ನೋದು ಗೊತ್ತಾಗಲಿದೆ‌. ಎಷ್ಟು ಮೌಲ್ಯದ ಚಿನ್ನಾಭರಣ ಹಣ ಕಳ್ಳತನ ಆಗಿದೆ ಎಂದು ತಿಳಿದ ಬಳಿಕ ಎಫ್ಐಆರ್ ಮಾಡಲಾಗುವುದು” ಎಂದು ತಿಳಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...