Monday, December 15, 2025
Monday, December 15, 2025

Shimoga National Festivals Celebration Committee ಅದ್ಧೂರಿ ರಾಜ್ಯೋತ್ಸವಕ್ಕೆ ಜಿಲ್ಲಾಡಳಿತ ಸಜ್ಜು. ಸಾರ್ವಜನಿಕರಿಗೆ ಪ್ರಕಟಣೆ

Date:

Shimoga National Festivals Celebration Committee ಶಿವಮೊಗ್ಗ ಜಿಲ್ಲಾ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ನವೆಂಬರ್ 1 ರಂದು ಬೆಳಿಗ್ಗೆ 9.00 ಗಂಟೆಗೆ ನಗರದ ಡಿ.ಎ.ಆರ್. ಪೊಲೀಸ್ ಪೆರೇಡ್ ಮೈದಾನದಲ್ಲಿ ಕನ್ನಡ ರಾಜ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮ ಏರ್ಪಡಿಸಲಾಗಿದೆ.
ಧ್ವಜಾರೋಹಣವನ್ನು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್ ಮಧು ಬಂಗಾರಪ್ಪ ಇವರು ನೆರವೇರಿಸುವರು. ವಿಶೇಷ ಆಹ್ವಾನಿತರಾಗಿ ಭದ್ರಾವತಿ ಕ್ಷೇತ್ರ ಶಾಸಕರು ಹಾಗೂ ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯಗಳ ಅಭಿವೃದ್ಧಿ ನಿಗಮದ ಅಧ್ಯಕ್ಷ ಬಿ.ಕೆ. ಸಂಗಮೇಶ್ವರ ಹಾಗೂ ಸಾಗರ ಕ್ಷೇತ್ರದ ಶಾಸಕರು ಹಾಗೂ ಕನಾಟಕ ರಾಜ್ಯ ಅರಣ್ಯ ಕೈಗಾರಿಕೆ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ಇವರುಗಳು ಉಪಸ್ಥಿತರಿರುವರು.
ಮುಖ್ಯ ಅತಿಥಿಗಳಾಗಿ ಸಂಸದರು, ವಿಧಾನಸಭಾ ಮತ್ತು ವಿಧಾನ ಪರಿಷತ್ ಶಾಸಕರು, ವಿವಿಧ ನಿಗಮ/ ಮಂಡಳಿ/ ಪ್ರಾಧಿಕಾರಗಳ ಅಧ್ಯಕ್ಷರು, ಜನಪ್ರತಿನಿಧಿಗಳು, ಜಿಲ್ಲಾಧಿಕಾರಿಗಳು, ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿಗಳು, ಜಿ.ಪಂ ಸಿಇಓ, ಪಾಲಿಕೆ ಆಯುಕ್ತರು, ವಿವಿಧ ಇಲಾಖೆಗಳ ಅಧಿಕಾರಿಗಳು, ಪಾಲ್ಗೊಳ್ಳುವರು.
Shimoga National Festivals Celebration Committee ಅಂದು ಬೆಳಿಗ್ಗೆ 8 ಗಂಟೆಗೆ ನಗರದ ಸೈನ್ಸ್ ಕಾಲೇಜು ಮೈದಾನದಿಂದ ಡಿ.ಎ.ಆರ್ ಪೊಲೀಸ್ ಪೆರೇಡ್ ಮೈದಾನದವರೆಗೆ ಶ್ರೀ ಭುವನೇಶ್ವರಿ ದೇವಿ ಮೆರವಣಿಗೆ ಬರಲಿದೆ. ಸಂಜೆ 5 ಗಂಟೆಗೆ ಕುವೆಂಪು ರಂಗಮAದಿರದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ.
ಶಿವಮೊಗ್ಗ ಜಿಲ್ಲೆಯ ಎಲ್ಲಾ ಜನಪ್ರತಿನಿಧಿಗಳು ಸರ್ಕಾರಿ ಅಧಿಕಾರಿಗಳು/ನೌಕರರ, ಸರ್ಕಾರಿ ನೌಕರರ ಸಂಘದ ಪದಾಧಿಕಾರಿಗಳು, ಮತ್ತು ಕನ್ನಡ ಸಂಘಟನೆಗಳು ಹಾಗೂ ಸಾರ್ವಜನಿಕರು ಕನ್ನಡ ರಾಜ್ಯೋತ್ಸವ ದಿನಾಚರಣೆ ಸಮಾರಂಭದಲ್ಲಿ ಭಾಗವಹಿಸುವಂತೆ ರಾಷ್ಟ್ರೀಯ ಹಬ್ಬಗಳ ಆಚರಣ ಸಮಿತಿ ವತಿಯಿಂದ ವಿನಂತಿಸಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...