Monday, December 15, 2025
Monday, December 15, 2025

B.Y. Raghavendra ಸಂಗೀತ, ನಾಟಕ, ಸಾಹಿತ್ಯ ಆಸ್ವಾದನೆಯಿಂದ ಮಾನಸಿಕ ಒತ್ತಡ ನಿರ್ವಹಣೆ ಸಾಧ್ಯ- ಸಂಸದ ರಾಘವೇಂದ್ರ

Date:

B.Y. Raghavendra ಆಧುನಿಕ ಜಗತ್ತಿನಲ್ಲಿ ಬಹುತೇಕರು ಒತ್ತಡಕ್ಕೆ ಸಿಲುಕಿದ್ದಾರೆ, ಕಲೆ, ಸಾಹಿತ್ಯ, ಸಂಗೀತ, ಸಾಂಸ್ಕೃತಿಕ ಚಟುವಟಿಕೆಯಲ್ಲಿ ತೊಡಗಿಸಿಕೊಂಡರೆ ಒತ್ತಡ ದೂರವಾಗುತ್ತದೆ ಎಂದು ಸಂಸದ ಬಿ.ವೈ.ರಾಘವೇಂದ್ರ ಹೇಳಿದರು.
ಪಟ್ಟಣದಲ್ಲಿ ರೋಟರಿ ಕದಂಬ ಆಯೋಜಿಸಿದ್ದ ವಲಯ10ರ ಕುಮದ್ವತಿ ಕಲಾ ಸಂಭ್ರಮ ಕರ‍್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಬಿಡುವು ಎನ್ನುವುದು ಯಾರಿಗೂ ಸಿಗುತ್ತಿಲ್ಲ ಎಲ್ಲರೂ ಒತ್ತಡದಲ್ಲೆ ಜೀವನ ಸಾಗಿಸುತ್ತಿದ್ದಾರೆ ನಗರ ಪ್ರದೇಶದಕ್ಕೆ ಸೀಮಿತವಾಗಿದ್ದ ಅದು ಇದೀಗ ಎಲ್ಲೆಡೆ ಪಸರಿಸಿದೆ. ಜನರು ಈ ಹಿಂದೆ ಒತ್ತಡ ರಹಿತ ಜೀವನ ನಡೆಸುತ್ತಿದ್ದರು ಅವರೆಲ್ಲರೂ ಜನಪದ ಸಂಗೀತ, ನಾಟಕ, ಸಾಹಿತ್ಯ, ಗ್ರಾಮೀಣ ಕ್ರೀಡೆಗಳಲ್ಲಿ ತಮ್ಮನ್ನು ತೊಡಗಿಸಿಕೊಳ್ಳುತ್ತಿದ್ದರು. ಒತ್ತಡ ನಿರ್ವಹಣೆ ಮಾಡುವುದಕ್ಕಾಗಿ ಎಲ್ಲರೂ ಸಂಗೀತ ಕೇಳುವುದು, ಸಾಹಿತ್ಯದ ಓದು, ನಾಟಕ, ಚಲನಚಿತ್ರ ವೀಕ್ಷಣೆ ಹೀಗೆ ಹಲವು ಬಗೆಯ ಸಾಂಸ್ಕೃತಿಕ ಚಟುವಟಿಕೆಯಲ್ಲಿ ತೊಡಗಿಸಿಕೊಳ್ಳಬೇಕು ಎಂದರು.
B.Y. Raghavendra ರಂಗಭೂಮಿ ಕಿರುತೆರೆ ನಟ ಕೆ.ರವಿ ಮಾತನಾಡಿ, ರಂಗಭೂಮಿ ಚಟುವಟಿಕೆಯಲ್ಲಿ ಯುವಕರು ಹೆಚ್ಚು ತೊಡಗಿಸಿಕೊಳ್ಳುತ್ತಿಲ್ಲ ಅದು ಆಕರ್ಷಣೆ ಕಳೆದುಕೊಂಡಿದ್ದು ಎಲ್ಲರಿಗೂ ಹೊಡಿಬಡಿ ಚಿತ್ರಗಳತ್ತ ಆಕರ್ಷಿತರಾಗಿದ್ದಾರೆ. ಶಾಲಾ ದಿನಗಳಲ್ಲಿ ಸಾಹಿತ್ಯ, ರಂಗಭೂಮಿ ಚಟುವಟಿಕೆಗೆ ಆದ್ಯತೆ ಪ್ರೋತ್ಸಾಹ ನೀಡಬೇಕು. ಪ್ರತಿಭಾ ಕಾರಂಜಿ ಮೂಲಕ ಪ್ರಾಥಮಿಕ ಶಾಲಾ ಹಂತದಲ್ಲೆ ಸರಕಾರ ಅದಕ್ಕೆ ಅವಕಾಶ ಕಲ್ಪಿಸಿದ್ದು ಅದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಹೇಳಿದರು.
ರೋಟರಿ ವಲಯ10 ಸದಸ್ಯರಿಗೆ ಹಾಡು, ನೃತ್ಯ, ಏಕಪಾತ್ರಾಭಿನಯ, ಸೇರಿದಂತೆ ವಿವಿಧ ಸ್ಪರ್ಧೆ ನಡೆಯಿತು, ವಿಜೇತರಿಗೆ ಬಹುಮಾನ ವಿತರಿಸಲಾಯಿತು. ರೋಟರಿ ಕದಂಬ ಅಧ್ಯಕ್ಷ ಎ.ಎಸ್.ಶಿವಪ್ರಕಾಶ್ ಅಧ್ಯಕ್ಷತೆ ವಹಿಸಿದ್ದರು. ರೋಟರಿ ಸಹಾಯಕ ಗೋವರ್ನರ್ ಎಸ್ ಆರ್ ನಾಗರಾಜ್ ಮಾತನಾಡುತ್ತಾ ಸಾಂಸ್ಕೃತಿಕ ಸ್ಪರ್ಧೆಗಳು ರೋಟರಿ ಕುಟುಂಬದವರ ಸಂಬಂಧವನ್ನು ಗಟ್ಟಿ ಮಾಡುವುದರ ಜೊತೆಗೆ ಮಾನಸಿಕ ಹಾಗು ದೈಹಿಕ ಆರೋಗ್ಯವನ್ನು ಸೃಷ್ಟಿ ಮಾಡುತ್ತವೆ ಪರಸ್ಪರರಲ್ಲಿ ಒಡನಾಟ ಪ್ರೀತಿ ಹೆಚ್ಚುತ್ತದೆ ಇಲ್ಲಿ ವಿಜೇತರಾದ ತಂಡದವರು ನವಂಬರ್ 10 ರಂದು ಕುಂದಾಪುರದಲ್ಲಿ ನಡೆಯುವ ಜಿಲ್ಲಾಮಟ್ಟದ ಸ್ಪರ್ಧೆಯಲ್ಲಿ ಭಾಗವಹಿಸಲು ಅವಕಾಶವಿರುತ್ತದೆ ಇದರಿಂದ ರೋಟರಿ ಸದಸ್ಯರ ಪ್ರತಿಭೆ ಅನಾವರಣಗೊಳ್ಳುತ್ತದೆ ಎಂದು ನುಡಿದರು ಎಂ.ಬಿ.ಶಿವಕುಮಾರ್, ರವೀಂದ್ರನಾಥ ಐತಾಳ್, ಎಂ.ಅರ್.ರಘು, ಹರೀಶ್ ಮೊದಲಿಯಾರ್, ಕೋಟೋಜಿರಾವ್, ಮಧುಕೇಶ್ವರ್,, ವಿರೇಂದ್ರ ವಾಲಿ ಇತರರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...