Monday, December 15, 2025
Monday, December 15, 2025

India Test Cricket Team ನ್ಯೂಜಿಲೆಂಡ್ ಕ್ರಿಕೆಟ್ ಸರಣಿ ಸೋಲಿನ ಪರಿಣಾಮ ಕೋಚ್ ಗಂಭೀರ್ “ಔಟ್”. ಲಕ್ಷ್ಮಣ್ ‘ಇನ್’

Date:

India Test Cricket Team ಇತ್ತೀಚೆಗೆ ಭಾರತ ತಂಡ ಟೆಸ್ಟ್‌ ಕ್ರಿಕೆಟ್‌ಲ್ಲಿ ಸೋಲುಂಡಿದೆ, ಗೌತಮ್‌ ಗಂಭೀರ್‌ ಅವರ ನಿರ್ಧರಗಳೇ ಈ ಸೋಲಿಗೆ ಕಾರಣ ಎಂದು ಹಲವರು ದೂಷಿಸುತ್ತಿದ್ದು, ಇದರ ಮಧ್ಯೆ ಬಿಸಿಸಿಐ ಈ ಕುರಿತು ಮಹತ್ವದ ನಿರ್ಧಾರವನ್ನು ತೆಗೆದುಕೊಂಡಿದೆ.

ಕೋಚ್‌ ಸ್ಥಾನದಿಂದ ಗೌತಮ್‌ ಗಂಭೀರ್‌ ಅವರನ್ನು ಕೆಳಗಿಳಿಸಿ ಈ ಜವಾಬ್ದಾರಿಯನ್ನು ಲಕ್ಷ್ಮಣ್ ಅವರಿಗೆ ನೀಡಲಾಗಿದೆ.
ಇನ್ನು ಹತ್ತು ದಿನಗಳಲ್ಲಿ ಆರಂಭವಾಗಲಿರುವ ದಕ್ಷಿಣ ಆಫ್ರಿಕಾ ವಿರುದ್ಧದ ಟಿ20 ಸರಣಿಗೆ ಭಾರತ ತಂಡದ ಕೋಚ್ ಜವಾಬ್ದಾರಿಯನ್ನು ವಿವಿಎಸ್ ಲಕ್ಷ್ಮಣ್ ವಹಿಸಿಕೊಳ್ಳಲಿದ್ದಾರೆ.

ಎನ್‌ಸಿಎ ನಿರ್ದೇಶಕರಾಗಿರುವ ಲಕ್ಷ್ಮಣ್ ಅವರು ಈ ಹಿಂದೆ ಟೀಮ್ ಇಂಡಿಯಾದ ಹಂಗಾಮಿ ಕೋಚ್ ಆಗಿಯೂ ಸೇವೆ ಸಲ್ಲಿಸಿದ್ದರು. ಜಿಂಬಾಬ್ವೆ ಪ್ರವಾಸದ ವೇಳೆ ಗಿಲ್ ನೇತೃತ್ವದ ಯುವ ತಂಡಕ್ಕೆ ಶುಭಮನ್ ತರಬೇತಿ ನೀಡಿದ್ದರು.

India Test Cricket Team ನವೆಂಬರ್ 22 ರಿಂದ ನವೆಂಬರ್ 10 ರಂದು ಆರಂಭವಾಗಲಿರುವ ಆಸ್ಟ್ರೇಲಿಯಾ ವಿರುದ್ಧದ ಐದು ಟೆಸ್ಟ್ ಪಂದ್ಯಗಳ ಸರಣಿಗೆ ರೋಹಿತ್ ಸೇನೆ ಹೊರಡುವ ಸಾಧ್ಯತೆಯಿದೆ. ಮತ್ತೊಂದೆಡೆ, ಸೂರ್ಯಕುಮಾರ್ ಯಾದವ್ ನೇತೃತ್ವದ ತಂಡವು ದಕ್ಷಿಣ ಆಫ್ರಿಕಾ ವಿರುದ್ಧ ನವೆಂಬರ್ 8 ರಿಂದ 13 ರವರೆಗೆ ದಕ್ಷಿಣ ಆಫ್ರಿಕಾದಲ್ಲಿ ನಾಲ್ಕು ಟಿ20 ಪಂದ್ಯಗಳನ್ನು ಆಡಲಿದೆ.
ಇದರಿಂದಾಗಿ ದಕ್ಷಿಣ ಆಫ್ರಿಕಾ ಸರಣಿಗೆ ಗಂಭೀರ್ ಕೋಚ್ ಆಗಲು ಸಾಧ್ಯವಾಗುತ್ತಿಲ್ಲ. ಈ ಹಿನ್ನಲೆಯಲ್ಲಿ ಬಿಸಿಸಿಐ ಲಕ್ಷ್ಮಣ್ ಅವರಿಗೆ ತಾತ್ಕಾಲಿಕ ಕೋಚ್ ಆಗಿ ಜವಾಬ್ದಾರಿಯನ್ನು ಹಸ್ತಾಂತರಿಸಲಿದೆ.

ಸಾಯಿರಾಜ್ ಬಹುತುಲೆ, ಹೃಷಿಕೇಶ್ ಕಾಂತಿಕರ್ ಮತ್ತು ಸುಭದೀಪ್ ಘೋಷ್ ಎನ್‌ಸಿಎಯಲ್ಲಿ ಸಹಾಯಕ ಕೋಚಿಂಗ್ ಸಿಬ್ಬಂದಿಯಾಗಿ ಕಾರ್ಯನಿರ್ವಹಿಸಲಿದ್ದಾರೆ. ಸಾಯಿರಾಜ್ ಬಹುತುಲೆ ಅವರು ಉದಯೋನ್ಮುಖ ಏಷ್ಯಾ ಟಿ20 ಕಪ್‌ಗಾಗಿ ಭಾರತ-ಎ ತಂಡದ ಮುಖ್ಯ ಕೋಚ್ ಆಗಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...