Saturday, December 6, 2025
Saturday, December 6, 2025

ಕಾಡುಹಂದಿ ಅಕ್ರಮ ಬೇಟೆ. ಆರೋಪಿಯ ಬಂಧನ

Date:

ಕಾಡು ಹಂದಿಯನ್ನು ಅಕ್ರಮವಾಗಿ ಬೇಟೆಯಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ 40 ಕೆ.ಜಿ ಮಾಂಸ ಸಹಿತ ಒಬ್ಬ ಆರೋಪಿಯನ್ನು ಅರಣ್ಯ ಇಲಾಖೆಯ ಸಿಬ್ಬಂದಿ ವಶಕ್ಕೆ ಪಡೆದು ಪ್ರಕರಣ ದಾಖಲಿಸಿದ್ದಾರೆ.

ತಾಲೂಕಿನ ಹರತಾಳು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೆ.ಹುಣಸವಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದೆ.

ಗಣೇಶ ಬಂಧಿತ ವ್ಯಕ್ತಿ. ಇತರ ಆರೋಪಿಗಳಾದ ಡಾಕಪ್ಪ, ಕಾರ್ತಿಕ್ ಪರಾರಿಯಾಗಿದ್ದಾರೆ. ಎಸಿಎಫ್ ಮೋಹನ್ ಕುಮಾರ್ ಮಾರ್ಗದರ್ಶನದಲ್ಲಿ ವಲಯ ಅರಣ್ಯಾಧಿಕಾರಿ ಅನಿಲ್ ಕುಮಾರ್ ನೇತೃತ್ವದಲ್ಲಿ ಉಪ ವಲಯ ಅರಣ್ಯಾಧಿಕಾರಿ ನವೀನ್ ಕುಮಾರ್, ಬೀಟ್
ಫಾರೆಸ್ಟರ್ ಎನ್.ರಾಜು, ಪುಟ್ಟಸ್ವಾಮಿ, ಭರತ್‌, ಪ್ರದೀಪ್, ಚಾಲಕರಾದ ಪ್ರಮೋದ್, ಎಸ್‌. ಪಾಲ್ಗೊಂಡಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...