Monday, February 2, 2026
Monday, February 2, 2026

Kannada Rajyotsava 2024 ರಾಜ್ಯೋತ್ಸವ ಶಾಲಾಕಾಲೇಜುಗಳಿಗೆ ಸೀಮಿತವಾಗದೇ ಒಟ್ಟು ಕನ್ನಡಿಗರ ಹಬ್ಬವಾಗಲಿ- ಡಾ.ಹಾ.ಮ.ನಾಗಾರ್ಜುನ

Date:

Kannada Rajyotsava 2024 ನುಡಿ ಮನೆ ಕನ್ನಡ ಸಂಘ, ಶಿ. ವೈ.ವಿ.ಸಂ. ಶಿವಮೊಗ್ಗ.೬೯ನೇ ಕನ್ನಡ ರಾಜ್ಯೋತ್ಸವ” ಶಿವಮೊಗ್ಗದ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಕನ್ನಡ ನುಡಿ ಮನೆ ಯಲ್ಲಿ ,”ಕನ್ನಡ ನಾಡು ನುಡಿಯ ಅನನ್ಯತೆ” ಕುರಿತು ಕನ್ನಡ ಕೇವಲ ಭಾಷಾವಾಚಿಕವಾಗದೆ ಇದೊಂದು ಅಖಂಡವಾದ ಕನ್ನಡದ ಅಸ್ಮಿತೆಯ ಸಂಭ್ರಮವಾಗಿದ್ದು ಶಾಲಾ ಕಾಲೇಜುಗಳಿಗೆ ಅಷ್ಟೇ ಸೀಮಿತವಾಗದೆ ಇದು ಒಟ್ಟು ಕನ್ನಡಿಗರ ಮನ ಮನೆಯ ಹಬ್ಬವಾಗಬೇಕಿದೆ ಈ ದೃಷ್ಠಿಯಿಂದ ಸಿಮ್ಸ್ ಶಿವಮೊಗ್ಗ ಹಮ್ಮಿಕೊಂಡಿರುವ ಕನ್ನಡದ ಈ ಸಂಭ್ರಮ ಅನ್ಯಭಾಷಿಗರ, ಅನ್ಯನಾಡಿನವರಲ್ಲಿ ಕನ್ನಡದ ಕಂಪನ್ನು, ಕನ್ನಡಿಗರ ಸಹಿಷ್ಣುತೆಯನ್ನು, ವಿಶ್ವ ಭಾತೃತ್ವವನ್ನು ಹಾಗೂ ಒಟ್ಟು ಕನ್ನಡದ ಆಶಯಗಳನ್ನು ಸರಳವಾಗಿ ಜಾನಪದ ಸಾಹಿತ್ಯದಿಂದ Kannada Rajyotsava 2024 ವಡ್ಡಾರಾಧನೆ,ಕವಿರಾಜಮಾರ್ಗ,ಪಂಪ,ರನ್ನ,ಪೊನ್ನ,ಜನ್ನಾದಿ ಕವಿಗಳ ಕಾವ್ಯಗಳು ಮತ್ತು ಹನ್ನೆರಡನೆ ಶತಮಾನದ ವಚನಸಾಹಿತ್ಯ ನಂತರದ ದಾಸ ಸಾಹಿತ್ಯ,ಹೊಸಗನ್ನಡ ಸಾಹಿತ್ಯದಲ್ಲಿ ಮೂಡಿಬಂದಿರುವ ನಾಡು-ನುಡಿಯನ್ನು ಕಟ್ಟುವಲ್ಲಿ, ನೆಲಮೂಲದ ಆಶಯಗಳನ್ನು ಉಲ್ಲೇಖಿಸುವಲ್ಲಿ ಅವರ ಆದರ್ಶಗಳು ಆ ಮುಲಕ ಅವರ ದಾರ್ಶನಿಕತೆ ಕುರಿತು ಸುದೀರ್ಘವಾಗಿ ಕರಿಯನ್ನು ಕನ್ನಡಿಯಲ್ಲಿ ತೋರಿದಂತೆ ಡಾ ಹಾ ಮ ನಾಗಾರ್ಜನ ಪ್ರಾಧ್ಯಾಪಕರು ಸವಿಕಾಶಿ, ತಮ್ಮ ಉಪನ್ಯಾಸವನ್ನು ಮಾಡಿದರು. ಕಾಲೇಜಿನ ನಿರ್ದೇಶಕರು ಹಾಗೂ ಕಾರ್ಯಕ್ರಮ ಅಧ್ಯಕ್ಷತೆ ವಹಿಸಿದ್ದ ಡಾ ವಿರುಪಾಕ್ಷಪ್ಪ ವಿ ಅವರು ಪ್ರಸ್ತುತ ಸಂದರ್ಭದಲ್ಲಿ ಇಂತಹ ಕಾರ್ಯಕ್ರಮಗಳು ವಿದ್ಯಾರ್ಥಿಗಳಲ್ಲಿ ವಿಶೇಷ ಜ್ಞಾನವನ್ನು ಬೆಳೆಸುತ್ತದೆ ಎಂದರು, ಅತಿಥಿಗಳ ಪರಿಚಯದೊಂದಿಗೆ ಕರ್ನಾಟಕ ದ ಏಕೀಕರಣ ಕುರಿತು ಜಿಲ್ಲಾ ಮುಖ್ಯ ಶಸ್ತ್ರಚಿಕಿತ್ಸಕರಾದ ಡಾ ಸಿದ್ಧನಾಡಗೌಡ ಪಿ ಮಾತನಾಡಿದರು. ಕಾರ್ಯಕ್ರಮವನ್ನು ದೈಹಿಕ ಶಿಕ್ಷಣ ನಿರ್ದೇಶಕರಾದ ಡಾ ರಮೇಶ್ ನಾಯಕ್ ಸಂಘಟಿಸಿದ್ದು, ಸಿಮ್ಸ್ನ ವಿದ್ಯಾರ್ಥಿಗಳು ಪ್ರಾರ್ಥಿಸಿದರು, ನಾಡು ನುಡಿ ಗೀತಾ ಗಾಯನ ಮಾಡಿ, ನಿರೂಪಿಸಿದರು.ಸಿಮ್ಸ್ನ ಎಲ್ಲ ಸಿಬ್ಬಂದಿಗಳು ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...