Sunday, May 3, 2026
Sunday, May 3, 2026

Manipal ಐಟಿ ದಾಳಿ ನೆಪ ಹೇಳಿ ನಂಬಿಸಿ ಮನೆ‌ಮಾಲೀಕರಿಂದ ನಗದು & ಒಡವೆ ದೋಚಿದ ಕೆಲಸದ ಮಹಿಳೆ

Date:

Manipal ಐ.ಟಿ. ಅಧಿಕಾರಿಗಳು ದಾಳಿ ನಡೆಸುತ್ತಾರೆ ಎಂದು ನಂಬಿಸಿ 7.50 ಲಕ್ಷ ರೂ. ನಗದು ಹಾಗೂ 3 ಲಕ್ಷ ಬೆಲೆಬಾಳುವ ಡೈಮಂಡ್‌ ಸರ ತೆಗೆದುಕೊಂಡು ಹೋಗಿ ಮೋಸ ಮಾಡಿರುವ ಘಟನೆ ಮಣಿಪಾಲ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಶಿವಳ್ಳಿ ಗ್ರಾಮದ ನಿವಾಸಿ ಪೆರಂಪಳ್ಳಿ ರಸ್ತೆಯ ಜ್ಯೂಲಿಯಟ್‌ ಅವರು 4 ತಿಂಗಳಿನಿಂದ ಪೆರಂಪಳ್ಳಿಯ ಸುನೀತಾ ಅವರನ್ನು ಮನೆ ಕೆಲಸಕ್ಕೆ ಇಟ್ಟುಕೊಂಡಿದ್ದರು. ಕೆಲಸದಾಕೆ ಬಳಿ ಮನೆಯ ಯಜಮಾನಿ ತನ್ನ ಮತ್ತು ಗಂಡನ ನಡುವೆ ಇದ್ದ ಮನಸ್ತಾಪದ ಬಗ್ಗೆ ಹೇಳಿಕೊಂಡಿದ್ದರು. ಸುನೀತಾ ಅವರು ಜೂಲಿಯೆಟ್‌ಗೆ ಗಂಡನಿಗೆ ವಿಚ್ಛೇದನ ಕೊಡುವಂತೆ ಸಲಹೆ ನೀಡಿದ್ದರು. ಬೇಸರಗೊಂಡ ಜ್ಯೂಲಿಯೆಟ್‌ ಮನೆ ಬಿಟ್ಟು ಹೋಗಲು ನಿರ್ಧರಿಸಿದ್ದರು. ತಾಯಿಯನ್ನು ಮನೆಗೆ ಬರಲು ಹೇಳಿ ಅ. 10ರಂದು ತಾಯಿಯಲ್ಲಿ ಬಟ್ಟೆಬರೆ ಹಾಗೂ ಸ್ವಲ್ಪ ಚಿನ್ನ ಹಾಗೂ ಗಂಡನ ಮನೆಯ ಲಾಕರ್‌ನಲ್ಲಿ ಇರಿಸಿದ್ದ 10 ಲಕ್ಷ ರೂಪಾಯಿಯಲ್ಲಿ 1 ಲಕ್ಷ ರೂ. ಹಣವನ್ನು ನೀಡಿದ್ದರು.

Manipal ಅ. 29ರಂದು ಬೆಳಗ್ಗೆ 10.30ಕ್ಕೆ ಗಂಟೆಗೆ ಜ್ಯೂಲಿಯೆಟ್‌ ಮನೆಯಲ್ಲಿದ್ದಾಗಲೇ ಸುನೀತಾ ಅವರು ಸ್ಟ್ಯಾನಿ ಅವರೊಂದಿಗೆ ಮನೆಗೆ ಬಂದು ಐ.ಟಿ. ಅಧಿಕಾರಿಗಳು ಬಂದಿದ್ದಾರೆ. ನಿಮ್ಮ ಮನೆಗೆ ರೈಡ್‌ ಮಾಡುತ್ತಾರೆ. ಲಾಕರ್‌ನಲ್ಲಿ ಇದ್ದ ಹಣ ಹಾಗೂ ಒಡವೆಯನ್ನು ತೆಗೆಯಬೇಕು ಎಂದು ಹೇಳಿ ಲಾಕರ್‌ ಕೀ ತೆಗೆದುಕೊಂಡು ಲಾಕರ್‌ ಓಪನ್‌ ಮಾಡಿ ಅದರಲ್ಲಿ ಇದ್ದ ಹಣದಲ್ಲಿ 1.50 ಲಕ್ಷ ರೂ.ಗಳನ್ನು ಜ್ಯೂಲಿಯೆಟ್‌ ಅವರ ಬ್ಯಾಗ್‌ ಗೆ ಹಾಕಿ ಉಳಿದ 7 ಲಕ್ಷ 50 ಸಾವಿರ ರೂ. ಹಾಗೂ 3 ಲಕ್ಷ ಬೆಲೆಬಾಳುವ ಡೈಮಂಡ್‌ ನೆಕ್ಲೆಸ್‌ ಅವಳ ಚೀಲದಲ್ಲಿ ಹಾಕಿಕೊಂಡು ನನ್ನಲ್ಲಿ ಇರಲಿ ಆನಂತರ ಕೊಡುತ್ತೇನೆ ಎಂದು ಹೇಳಿದ್ದರು. ಐ.ಟಿ.ಅಧಿಕಾರಿಗಳು ದಾಳಿ ನಡೆಸುತ್ತಾರೆ ಎಂದು ನಂಬಿಸಿ ಸುನೀತಾ ಹಾಗೂ ಸ್ಟಾನಿ7.50 ಲಕ್ಷ ರೂ. ನಗದು ಹಾಗೂ 3 ಲಕ್ಷ ಬೆಲೆಬಾಳುವ ಡೈಮಂಡ್‌ ಸರವನ್ನು ತೆಗೆದುಕೊಂಡು ಹೋಗಿ ಮೋಸ ಮಾಡಿರುವುದಾಗಿ ದೂರಿನಲ್ಲಿ ತಿಳಿಸಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shivamogga Police ಗಾಡಿಕೊಪ್ಪ ಸಂಚಾರ ನಿಯತ್ರಣ ಓಕೆ. ಆದರೆ ಮಿಕ್ಕ ಸಮಸ್ಯೆಗಳಿಗೆ ಪರಿಹಾರವಿಲ್ಲ ಯಾಕೆ?

Shivamogga Police ಗಾಡಿಕೊಪ್ಪ‌,ಶಿವಮೊಗ್ಗದ ಸೆಟಲೈಟ್ ಟೌನ್ ಎಂಬ ವ್ಯಾಪ್ತಿಗೆ ಬೆಳೆದುಬಿಟ್ಟಿದೆ. ಅಲ್ಕಿನ ವೃತ್ತಕ್ಕೆ...

Shivamogga Airport ಶಿವಮೊಗ್ಗಏರ್ ಪೋರ್ಟ್ ನಲ್ಲಿನೈಟ್ ಲ್ಯಾಂಡಿಂಗ್ಕಾಮಗಾರಿಯು ಜೂನ್ ತಿಂಗಳಲ್ಲಿ ಮುಗಿಯಲಿದೆ- ನಂಜಯ್ಯ‌ಮಠ

Shivamogga Airport ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಕರ್ಯ ನಿಗಮ ಮಂಡಳಿಯ (ಕೆಎಸ್‌ಐಡಿಸಿ)...

B.Y. Raghavendra ಬಿಎಸ್ ವೈ ಅಭಿಮಾನೋತ್ಸವ ಕೇವಲ ಸಮಾರಂಭವಲ್ಲ.ನಮ್ಮನಾಯಕರಿಗೆ ಸಲ್ಲಿಸುವ ಗೌರವ- ಬಿ.ವೈ.ರಾಘವೇಂದ್ರ.

B.Y. Raghavendra ಇದೇ ಮೇ 9ರಂದು ಚಿತ್ರದುರ್ಗದಲ್ಲಿ ಆಯೋಜಿಸಲಾಗಿರುವ ರೈತ ನಾಯಕ, ಮಾಜಿ...