Sunday, December 14, 2025
Sunday, December 14, 2025

Waqf land: Karnataka CM Siddaramaiah orders ವಕ್ಫ್ ವಿವಾದ: ರೈತರಿಗೆ ನೀಡಿರುವ ನೋಟೀಸ್ ಗಳನ್ನು ತಕ್ಷಣ ವಾಪಸ್ ಪಡೆಯಿರಿ- ಸಿದ್ಧರಾಮಯ್ಯ

Date:

Waqf land: Karnataka CM Siddaramaiah orders ವಕ್ಫ್‌ ವಿಚಾರದಲ್ಲಿ ರೈತರಿಗೆ ನೀಡಲಾಗಿರುವ ನೋಟಿಸ್‌ಗಳನ್ನು ತಕ್ಷಣದಿಂದಲೇ ವಾಪಸ್‌ ಪಡೆಯಬೇಕು ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಹೇಳಿದ್ದಾರೆ.

ನೋಟೀಸ್‌ ನೀಡದೆ ಪಹಣಿಯಲ್ಲಿ ಯಾವುದೇ ರೀತಿಯ ತಿದ್ದುಪಡಿಗಳನ್ನು ಮಾಡಿದ್ದರೆ ತಕ್ಷಣ ರದ್ದು ಮಾಡಬೇಕು.
ಇನ್ನು ಮುಂದೆ ರೈತರಿಗೆ ಯಾವುದೇ ರೀತಿಯ ಸಣ್ಣ ತೊಂದರೆಯನ್ನೂ ನೀಡಬಾರದು.

ವಕ್ಫ್‌ ಜಮೀನು ವಿಚಾರದಲ್ಲಿ ಇತ್ತೀಚೆಗೆ ನಡೆದಿರುವ ಬೆಳವಣಿಗೆಗಳಿಂದ ರೈತರಿಗೂ ಬೇಸರವಾಗಿದೆ. ಈ ವಿಚಾರವನ್ನು ಜೆಡಿಎಸ್‌ ಮತ್ತು ಬಿಜೆಪಿ ರಾಜಕಾರಣಕ್ಕೆ ಬಳಸಿಕೊಳ್ಳುತ್ತಿದೆ. ಈ ಮೂಲಕ ರಾಜ್ಯದಲ್ಲಿ ಶಾಂತಿ ಕದಡುವ ದುಷ್ಟ ಪ್ರಯತ್ನವನ್ನು ಆ ಪಕ್ಷಗಳು ಜಂಟಿಯಾಗಿ ಮಾಡುತ್ತಿವೆ.

Waqf land: Karnataka CM Siddaramaiah orders ಇಂತಹ ಹೀನ ಪ್ರಯತ್ನಗಳಿಗೆ ರಾಜ್ಯದ ಜನರು ಸೊಪ್ಪು ಹಾಕದಂತೆ ಸಾರ್ವಜನಿಕರಲ್ಲೂ ವಿನಂತಿಸುತ್ತೇನೆ. ಜೊತೆಗೆ ಜನರು ಅಪಪ್ರಚಾರಗಳಿಗೆ ಕಿವಿಗೊಡಬಾರದು.
ಅಧಿಕಾರಿಗಳೂ ಈ ಕುರಿತು ಎಚ್ಚರ ವಹಿಸಬೇಕು. ರೈತರಿಗೆ ತೊಂದರೆ ಆಗುವ ಯಾವುದೇ ತೀರ್ಮಾನವನ್ನು ಕೈಗೊಳ್ಳಬಾರದು.

ಸಭೆಯ ಪ್ರಮುಖ ಅಂಶಗಳು:

  • ರೈತರ ಪಹಣಿ ಬದಲಾವಣೆ ಸಂಬಂಧ ಈಗಾಗಲೇ ನೀಡಿರುವ ನೋಟೀಸ್‌ಗಳನ್ನು ತಕ್ಷಣ ವಾಪಸ್‌ ಪಡೆಯಬೇಕು.
  • ರೈತರ ಸ್ವಾಧೀನದಲ್ಲಿರುವ ಜಮೀನುಗಳಿಗೆ ಯಾವುದೇ ರೀತಿಯ ತೊಂದರೆ ನೀಡಬಾರದು.‌
  • ಕಾನೂನು ಬಾಹಿರವಾಗಿ ಹಾಗೂ ನೋಟೀಸ್‌ ನೀಡದೆ ಪಹಣಿಯಲ್ಲಿ ಯಾವುದೇ ರೀತಿಯ ತಿದ್ದುಪಡಿಗಳನ್ನು ಮಾಡಿದ್ದರೆ ತಕ್ಷಣ ರದ್ದು ಮಾಡಬೇಕು.
  • ದಿನಾಂಕ 4-12-24 ರಂದು ಸರ್ಕಾರದ ಸಚಿವರು ಮತ್ತು ಕಂದಾಯ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಹಾಗೂ ವಕ್ಫ್‌ ಮಂಡಳಿಯ ಹಿರಿಯ ಅಧಿಕಾರಿಗಳ ಜೊತೆ ಸಭೆ ನಡೆಸಿ ಮುಖ್ಯಮಂತ್ರಿ ಸಿದ್ಧರಾಮಯ್ಯ ತುರ್ತು ಸೂಚನೆಗಳನ್ನ ಅಧಿಕಾರಿಗಳಿಗೆ ನೀಡಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...