Sunday, December 7, 2025
Sunday, December 7, 2025

waqf board karnataka ಸೊರಬದಲ್ಲಿ ವಕ್ಫ್ ಮಂಡಳಿಗೆ ನೀಡಿರುವ ಅಧಿಕಾರವನ್ನ ರದ್ದು‌ಮಾಡಲು ಆಗ್ರಹ

Date:

waqf board karnataka ರಾಜ್ಯದಲ್ಲಿನ ಮಠ, ಮಂದಿರಗಳು ಮತ್ತು ರೈತರ ಆಸ್ತಿಗಳನ್ನು ವಕ್ಫ್ ಆಸ್ತಿ ಎಂದು ನಮೂದಿಸಲಾಗುತ್ತಿದ್ದು, 1974ರಲ್ಲಿನ ವಕ್ಫ್ ಆಸ್ತಿ ಕುರಿತ ಗೆಜೆಟ್ ಅಧಿಸೂಚನೆ ಹಿಂಪಡೆಯಬೇಕು ಮತ್ತು ವಕ್ಫ್ ಮಂಡಳಿಗೆ ನೀಡಿರುವ ಅಪರಿಮಿತ ಅಧಿಕಾರವನ್ನು ರದ್ದು ಮಾಡಬೇಕು ಎಂದು ಬಿಜೆಪಿ ಜಿಲ್ಲಾ ಸಮಿತಿ ಸದಸ್ಯ ಎಂ.ಕೆ. ಯೋಗೇಶ್ ಆಗ್ರಹಿಸಿದರು.

ತಾಲೂಕು ಬಿಜೆಪಿ ವತಿಯಿಂದ ಪಟ್ಟಣದ ತಾಲೂಕು ಕಚೇರಿಗೆ ತೆರಳಿ, ತಹಶೀಲ್ದಾರ್ ಮಂಜುಳಾ ಹೆಗಡಾಳ್ ಅವರ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿ ಅವರು ಮಾತನಾಡಿದರು. ಕೇಂದ್ರ ಸರ್ಕಾರ ವಕ್ಫ್ ಕಾಯ್ದೆಗೆ ತಿದ್ದುಪಡಿ ತರಲು ಮುಂದಾಗಿರುವ ಹಿನ್ನೆಲೆಯಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರ ವಕ್ಫ್ ಮಂಡಳಿ ಮೂಲಕ ರೈತರ ಭೂಮಿ ವಶಪಡಿಸಿಕೊಳ್ಳಲು ಷಡ್ಯಂತ್ರ ರೂಪಿಸಿದೆ. ಇದು ಲ್ಯಾಂಡ್ ಜಿಹಾದ್ ಆಗಿದೆ. ನೂರಾರು ವರ್ಷಗಳಿಂದ ಉಳುಮೆ ಮಾಡಿಕೊಂಡು ಬಂದಿರುವ ರೈತರ ಭೂಮಿಯ ಆರ್‌ಟಿಸಿಯಲ್ಲಿ ವಕ್ಫ್ ಹೆಸರು ನಮೂದಾಗಿದೆ. ಇದರಿಂದ ರೈತರು ದಿಕ್ಕು ತೋಚದಂತಾಗಿದ್ದಾರೆ. ರಾಜ್ಯ ಮತ್ತು ದೇಶದಲ್ಲಿ ಕಾಂಗ್ರೆಸ್ ಜನತೆಯ ನೆಮ್ಮದಿಯನ್ನು ಹದಗೆಡವಲು ಹವಣಿಸುತ್ತಿದೆ ಎಂದು ಆರೋಪಿಸಿದರು.
ರೈತರಿಗೆ ನೀಡಿರುವ ನೋಟಿಸ್ ಹಿಂಪಡೆದರೆ ಸಾಲದು, ಆರ್‌ಟಿಸಿಯಲ್ಲಿ ವಕ್ಫ್ ಎಂದು ನಮೂದು ಮಾಡಿರುವುದು ತಗೆದು ಹಾಕಬೇಕು. ರೈತರಿಗೆ ಆಗುತ್ತಿರುವ ಅನ್ಯಾಯವನ್ನು ರಾಜ್ಯ ಸರ್ಕಾರ ತಡೆಯಬೇಕು. ತುಷ್ಟೀಕರಣ ರಾಜಕಾರಣವನ್ನು ರಾಜ್ಯ ಕಾಂಗ್ರೆಸ್ ಸರ್ಕಾರ ಕೈ ಬಿಡಬೇಕು. ಈಗಾಗಲೇ ರಾಜ್ಯ ಸರ್ಕಾರದ ನೀತಿಯನ್ನು ಖಂಡಿಸಿ ಬಿಜೆಪಿಯಿಂದ ರಾಜ್ಯದಾದ್ಯಂತ ಆಂದೋಲನ ನಡೆಸಿ, ಜನರಿಗೆ ಅರಿವು ಮೂಡಿಸುವ ಜೊತೆಗೆ ರೈತರ ಪರವಾಗಿ ಧ್ವನಿ ಎತ್ತಲಾಗಿದೆ ಎಂದರು.

waqf board karnataka ರಾಜ್ಯದಲ್ಲಿ ವಕ್ಫ್ ಆಸ್ತಿ ಎಂದು ರೈತರ ಆಸ್ತಿ, ದೇವಸ್ಥಾನಗಳ ಆಸ್ತಿಯನ್ನು ನಮೂದು ಮಾಡಿರುವುದು ಸಾರ್ವಜನಿಕರಲ್ಲಿ ಚರ್ಚೆ ನಡೆಯುತ್ತಿದೆ. ತಾಲೂಕಿನಲ್ಲಿ ಯಾವುದೇ ಆಸ್ತಿಯನ್ನು ವಕ್ಫ್ ಆಸ್ತಿ ಎಂದು ನಮೂದು ಮಾಡಬಾರದು. ನಮೂದು ಮಾಡಿದ್ದಲ್ಲಿ ಅಂತಹವುಗಳನ್ನು ರದ್ದು ಮಾಡಬೇಕು ಎಂದು ಮನವಿಯಲ್ಲಿ ತಿಳಿಸಲಾಗಿದೆ.

ಈ ಸಂದರ್ಭದಲ್ಲಿ ಬಿಜೆಪಿ ರಾಷ್ಟ್ರೀಯ ಪರಿಷತ್ ಮಾಜಿ ಸದಸ್ಯ ಪಾಣಿ ರಾಜಪ್ಪ, ಟೌನ್ ಶಕ್ತಿ ಕೇಂದ್ರದ ಪ್ರಧಾನ ಕಾರ್ಯದರ್ಶಿಗಳಾದ ಮೋಹನ್ ಹಿರೇಶಕುನ, ವೈ.ಜಿ. ಗುರುಮೂರ್ತಿ, ಗ್ರಾಪಂ ಮಾಜಿ ಅಧ್ಯಕ್ಷ ದಾನಶೇಖರ ಗೌಡ, ಪ್ರಮುಖರಾದ ಶಿವಕುಮಾರ ಗುಂಜನೂರು, ಬಸವರಾಜ ಪಾಟೀಲ್, ರಾಮಚಂದ್ರ ಉಳವಿ ಸೇರಿದಂತೆ ಇತರರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

CM Siddharamaiah ಕಾಂಗ್ರೆಸ್ ಕಾರ್ಯಕರ್ತ ಗಣೇಶ್ ಗೌಡ ಹತ್ಯೆ, ಸೀಎಂ ಸಿದ್ಧರಾಮಯ್ಯ ಖಂಡನೆ

CM Siddharamaiah ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ಸಖರಾಯಪಟ್ಟಣದ ಕಾಂಗ್ರೆಸ್ ಕಾರ್ಯಕರ್ತ...

ಶಾಲಾ ಬಸ್ ಅತಿವೇಗ ಚಾಲನೆ, ಬೈಕಿಗೆ ಢಿಕ್ಕಿ‌ ಸವಾರನ ಸ್ಥಿತಿ ಗಂಭೀರ

ಶಾಲಾ ಪ್ರವಾಸಕ್ಕೆ ಮಕ್ಕಳನ್ನು ಕರೆದೊಯ್ಯುತ್ತಿದ್ದ ಖಾಸಗಿ ಬಸ್ಸು ಮತ್ತು ಬೈಕ್ ನಡುವೆ...

B.Y.Raghavendra ಆರ್.ಎಸ್.ಎಸ್. ಗೃಹ ಸಂಪರ್ಕ ಅಭಿಯಾನದಲ್ಲಿ ಸಂಸದ ರಾಘವೇಂದ್ರ ಭಾಗಿ.

B.Y.Raghavendra ರಾಷ್ಟ್ರೀಯ ಸ್ವಯಂಸೇವಕ ಸಂಘದ ನೂರನೇ ವರ್ಷದ ಪ್ರಯುಕ್ತ, ಇಂದು...