Sunday, August 2, 2026
Sunday, August 2, 2026

Department of Youth Empowerment and Sports ರಾಜ್ಯಮಟ್ಟದ ಯುವಜನೋತ್ಸವಕ್ಕೆ ನ.16 ರಂದು ಆಯ್ಕೆ ಪ್ರಕ್ರಿಯೆ

Date:

Department of Youth Empowerment and Sports ರಾಜ್ಯ ಮಟ್ಟದ ಯುವಜನೋತ್ಸವಕ್ಕೆ ಜಿಲ್ಲಾ ತಂಡಗಳನ್ನು ಕಳುಹಿಸಿಕೊಡಲು ಜಿಲ್ಲಾ ಮಟ್ಟದ ಯುವಜನೋತ್ಸವದ ಆಯ್ಕೆ ಸ್ಪರ್ಧೆಗಳನ್ನು ಜಿಲ್ಲಾಡಳಿತ, ಜಿ.ಪಂ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಶಿವಮೊಗ್ಗ ಇವರ ಸಂಯುಕ್ತಾಶ್ರಯದಲ್ಲಿ ನ.16 ರಂದು ಬೆಳಗ್ಗೆ 10 ಗಂಟೆಗೆ ನಗರದ ಕುವೆಂಪು ರಂಗ ಮಂದಿರದಲ್ಲಿ ಏರ್ಪಡಿಸಲಾಗಿದೆ.
ಯುವಜನೋತ್ಸವದ ಸ್ಪರ್ಧೆಗಳು : ಜನಪದ ನೃತ್ಯ(ತಂಡ) ಕನ್ನಡ/ಆಂಗ್ಲ/ಹಿಂದಿ ಭಾಷೆಯಲ್ಲಿ 10 ಜನರು 15 ನಿಮಿಷ ಭಾಗವಹಿಸಲು ಸಮಯವಿರುತ್ತದೆ. ಜನಪದ ಗೀತೆ (ತಂಡ) ಕನ್ನಡ/ಆಂಗ್ಲ/ಹಿಂದಿ ಭಾಷೆಯಲ್ಲಿ 10 ಜನರು 07 ನಿಮಿಷ ಸಮಯ, ಜನಪದ ನೃತ್ಯ( ವೈಯಕ್ತಿಕ) ಕನ್ನಡ/ಆಂಗ್ಲ/ಹಿಂದಿ ಭಾಷೆಯಲ್ಲಿ ಒಬ್ಬರು 07 ನಿಮಿಷ ಸಮಯ, ಜನಪದ ಗೀತೆ ( ವೈಯಕ್ತಿಕ) ಕನ್ನಡ/ಆಂಗ್ಲ ಹಿಂದಿ ಭಾಷೆಯಲ್ಲಿ ಒಬ್ಬರು 07 ನಿಮಿಷ ಸಮಯವಿರುತ್ತದೆ. ವಿಷಯಾಧಾರಿತ ಸ್ಪರ್ಧೆಗಳು 40 ಜನರು, ಕವಿತೆ ಬರೆಯುವುದು 2 ಜನ 60 ನಿಮಿಷ ಸಮಯ, ಕಥೆ ಬರೆಯುವುದು 3 ಜನ 60 ನಿಮಿಷ ಸಮಯ, ಚಿತ್ರ ಕಲೆ 2 ಜನ 90 ನಿಮಿಷ, ಘೋಷಣೆ ಸ್ಪರ್ಧೆ 2 ಜನ 3 ನಿಮಿಷ ಸಮಯ, ಯುವ ಕೃತಿ ವಿಭಾಗದಲ್ಲಿ ಗುಡಿ ಕೈಗಾರಿಕೆ ಕಲಾ ಪ್ರಕಾರ, ನೇಕಾರಿಕೆ/ಜವಳಿ, ಕೃಷಿ ಉತ್ಪನ್ನಗಳು 7 ಜನರು ಭಾಗವಹಿಸಬಹುದು.
Department of Youth Empowerment and Sports ಭಾಗವಹಿಸುವ ಯುವಕ, ಯುವತಿಯರು 15 ರಿಂದ 29 ವರ್ಷ ವಯೋಮಿತಿಯೊಳಗಿರಬೇಕು. ನೊಂದಾವಣೆ ಸಮಯದಲ್ಲಿ ವಯಸ್ಸಿನ ದೃಢೀಕರಣಕ್ಕೆ ಸಂಬಂಧಿಸಿದಂತೆ ಎಸ್.ಎಸ್.ಎಲ್.ಸಿ ಅಂಕಪಟ್ಟಿ/ಜನನ ಪ್ರಮಾಣ ಪತ್ರ/ಆಧಾರ್ ಕಾರ್ಡ್ ತರುವುದು ಕಡ್ಡಾಯವಾಗಿರುತ್ತದೆ. ಗ್ರಾಮೀಣ ಪ್ರದೇಶದವರು, ನಗರ ಪ್ರದೇಶದವರು. ಕಾಲೇಜಿನ ಯುವಕ / ಯುವತಿಯರು, ಯುವಕ/ಯುವತಿ ಸಂಘದ ಸದಸ್ಯರು ಭಾಗವಹಿಸಬಹುದಾಗಿರುತ್ತದೆ. ಭಾಗವಹಿಸುವ ಸ್ಪರ್ಧಾಳುಗಳು ಅವಶ್ಯಕ ವೇಷ ಭೂಷಣ, ಸಂಗೀತ ಉಪಕರಣ ಮತ್ತು ಸ್ಪರ್ಧೆಗೆ ಅವಶ್ಯವಿರುವ ಸಾಮಗ್ರಿಗಳನ್ನು ತಾವೇ ತರತಕ್ಕದ್ದು. ಭಾಗವಹಿಸುವ ಸ್ಪರ್ಧಾಳುಗಳಿಗೆ ಮಧ್ಯಾಹ್ನ ಲಘು ಉಪಹಾರವನ್ನು ಹಾಗೂ ತಾಲ್ಲೂಕಿನಿಂದ ಭಾಗವಹಿಸುವ ಸ್ಪರ್ಧಾಳುಗಳಿಗೆ ಬಂದು ಹೋಗುವ ಸಾಮಾನ್ಯ ಪ್ರಯಾಣ ದರ ನೀಡಲಾಗುವುದು.
ಆಸಕ್ತರು ನ. 16 ರಂದು ಶನಿವಾರ ಬೆಳಗ್ಗೆ 10.00 ಗಂಟೆಗೆ ಕುವೆಂಪು ರಂಗಮಂದಿರ, ಶಿವಮೊಗ್ಗ ಇಲ್ಲಿ ವರದಿ ಮಾಡಿ ತಮ್ಮ ಹೆಸರುಗಳನ್ನು ನೊಂದಾಯಿಸಿಕೊಂಡು ಸ್ಪರ್ಧೆಯಲ್ಲಿ ಭಾಗವಹಿಸಬಹುದು. ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರ ಕಚೇರಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ನೆಹರೂ ಕ್ರೀಡಾಂಗಣ, ಶಿವಮೊಗ್ಗ, ದೂರವಾಣಿ ಸಂಖ್ಯೆ 99002-80416 ಮುಖಾಂತರ ಸಂಪರ್ಕಿಸಿ ಮಾಹಿತಿ ಪಡೆಯಬಹುದೆಂದು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ₹ 6.400 ಕೋಟಿ ವೆಚ್ಚದ ಶಿವಮೊಗ್ಗ- ತುಮಕೂರು ಚತುಷ್ಪಥ ರಸ್ತೆ ಮುಂದಿನ ಮಾರ್ಚ್ ಗೆ ಸಿದ್ಧ- ಬಿ.ವೈ.ರಾಘವೇಂದ್ರ

B.Y. Raghavendra ಮಲೆನಾಡು ಹಾಗೂ ರಾಜಧಾನಿ ಬೆಂಗಳೂರು ನಡುವಿನ ಸಂಪರ್ಕವನ್ನು ಕ್ರಾಂತಿಕಾರಕವಾಗಿ...

S. N. Channabasappa ಬಡಾವಣೆಗಳಿಗೆ ಮೂಲಭೂತ ಸೌಕರ್ಯ ಒದಗಿಸುವುದು ನಮ್ಮ ಮುಖ್ಯ ಕರ್ತವ್ಯ- ಎಸ್.ಎನ್.ಚನ್ನಬಸಪ್ಪ

S. N. Channabasappa ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಒಳಪಡುವ...

Rotary Club of Shivamogga ಮಕ್ಕಳಲ್ಲಿ ರೋಟರಿ ಸಂಸ್ಥೆ ನಾಯಕತ್ವ ಗುಣಗಳನ್ನ ಬೆಳೆಸುತ್ತದೆ- ಡಿ.ಕೆ.ನರಹರಿ

Rotary Club of Shivamogga ರೋಟರಿ ಸಂಸ್ಥೆಯು ಮಕ್ಕಳಿಗೆ ಶಾಲಾ ಹಂತದಲ್ಲಿಯೇ...

B.Y. Raghavendra ಹವಾಮಾನ ಆಧಾರಿತ ಬೆಳೆವಿಮೆ: ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ವಿಸ್ತರಿಸಿ- ಸಂಸದ ಬಿ.ವೈ‌.ರಾಘವೇಂದ್ರ

B.Y. Raghavendra ಮುಂಗಾರು ಹಂಗಾಮಿನಲ್ಲಿ ರಾಜ್ಯಾದ್ಯಂತ ವಾಡಿಕೆಗಿಂತ ಶೇ.34 ರಷ್ಟು ಮಳೆ...