Saturday, June 6, 2026
Saturday, June 6, 2026

Adichunchanagiri Muth ಹಿಂದೂ ಧರ್ಮ ಸನಾತನ- ಶ್ರೀ ನಿರ್ಮಲಾನಂದನಾಥಶ್ರೀ

Date:

Adichunchanagiri Muth ಸನಾತನ ಹಿಂದೂ ಧರ್ಮ, ಜಗತ್ತಿನ ಧರ್ಮಗಳಲ್ಲಿಯೇ ಪುರಾತನವಾದದ್ದು, ಸುಮಾರು 5 ಸಾವಿರ ವರ್ಷಗಳ ಪ್ರಾಚೀನತೆಯನ್ನು ಹೊಂದಿದೆ. ನಂತರ ಯಹೂದಿ ಧರ್ಮ, ಜೈನ ಧರ್ಮ, ಬೌದ್ಧ ಧರ್ಮ, ಕ್ರೈಸ್ತ ಧರ್ಮ, ಇಸ್ಲಾಂ ಧರ್ಮ,ಹೀಗೆ ಧರ್ಮಗಳು ಅಸ್ತಿತ್ವಕ್ಕೆ ಬಂದವು ಎಂದು ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಪರಮ ಪೂಜ್ಯ ಶ್ರೀ ಶ್ರೀ ಶ್ರೀ ಡಾ. ನಿರ್ಮಲಾ ನಂದನಾಥ ಮಹಾಸ್ವಾಮೀಜಿ ಅಭಿಪ್ರಾಯಪಟ್ಟರು.
ಅವರು ಶರಾವತಿ ನಗರದ ಶ್ರೀ ಆದಿಚುಂಚನಗಿರಿ ಶಾಖಾ ಮಠದಲ್ಲಿ ಶ್ರೀ ಆದಿಚುಂಚನಗಿರಿ ಶಿಕ್ಷಣ ಟ್ರಸ್ಟಿನ ವ್ಯಾಪ್ತಿಯ ವಿವಿಧ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಶಿಕ್ಷಕರ ಒಂದು ದಿನದ ಸಮಾಜ ವಿಜ್ಞಾನ ಮತ್ತು ಕನ್ನಡ ವಿಷಯಗಳ ಕುರಿತು ನಡೆಯುತ್ತಿರುವ ರಾಜ್ಯ ಮಟ್ಟ ಕಾರ್ಯಗಾರದಲ್ಲಿ ದಿವ್ಯ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡುತ್ತಾ, ಧರ್ಮ ಧರ್ಮಗಳ ನಡುವೆ ಸಾಮರಸ್ಯದ ಬದುಕಿನಿಂದ ಶಾಂತಿ ನೆಲೆಸಲು ಸಾಧ್ಯ,ಆ ನಿಟ್ಟಿನಲ್ಲಿ ನಾವೆಲ್ಲರೂ ಚಿಂತನೆ ಮಾಡಬೇಕಾಗಿದೆ. ಧರ್ಮ ನಮ್ಮ ಭೌತಿಕ ಬದುಕನ್ನು ಸಮೃದ್ಧಗೊಳಿಸುವುದಲ್ಲದೇ,ಭೂಮಿಯ ಮೇಲೆ ಆನಂದ ಸಂತೋಷದಿಂದ ಬದುಕುವುದನ್ನ ತಿಳಿಸುವುದೇ ಧರ್ಮದ ಕೆಲಸವಾಗಿದೆ ಎಂದರು.
Adichunchanagiri Muth ವಿಶ್ವ ಉಗಮದ ಬಗ್ಗೆ ತಿಳಿಸುತ್ತಾ, ವಿಶ್ವ ಅಸ್ತಿತ್ವಕ್ಕೆ ಬಂದು ಒಂದು ಸಾವಿರ 382 ಕೋಟಿ ವರ್ಷಗಳು ಆಗಿವೆ, ಸೂರ್ಯ ಅಸ್ತಿತ್ವಕ್ಕೆ ಬಂದು 500 ಕೋಟಿ ವರ್ಷಗಳು, ಭೂಮಿ ಅಸ್ತಿತ್ವಕ್ಕೆ ಬಂದು 450 ಕೋಟಿ ವರ್ಷಗಳು ಸಂದಿವೆ, ಆದರೆ ಮಾನವನ ವಿಕಾಸವಾಗಿ 2 ಲಕ್ಷ ವರ್ಷಗಳು ಆಗಿವೆ, ಭೂಮಿಗೆ ವಸಾಹತುಶಾಹಿ ವ್ಯವಸ್ಥೆ ನೆಲೆಗಗೊಳ್ಳಲು 60 ಸಾವಿರ ವರ್ಷ ಹೀಗೆ ವಿಶ್ವ ಅಸ್ತಿತ್ವ ಬಂದಿತು ಎಂದರು.
ಎರಡು ಸಾವಿರ ಐದು ನೂರು ವರ್ಷಗಳ ಹಿಂದೆ ಬಂದ ಬುದ್ಧ, ಭೋಧಿಸಿದ ಜೀವನ ಮೌಲ್ಯಗಳು ಇಂದಿಗೂ ಪ್ರಸ್ತುತವಾಗಿವೆ ಎಂದು ತಿಳಿಸಿದರು.
ಪ್ರತಿಯೊಬ್ಬ ಶಿಕ್ಷಕರು ಮಕ್ಕಳ ಜೊತೆ ಉತ್ತಮ ಒಡನಾಟದಿಂದ ಇರಬೇಕು, ಅವರಿಗೆ ಬೇಕು-ಬೇಡಗಳ ಬಗ್ಗೆ ತಿಳಿದು ತರಬೇತಿ ಕೊಟ್ಟಾಗ ಮಾತ್ರ ಶಿಕ್ಷಣ ಕ್ಷೇತ್ರದಲ್ಲಿ ಉತ್ತಮ ಸಾಧನೆ ಮಾಡಲು ಸಾಧ್ಯ.ಒಂದು ಶಾಲೆಯಲ್ಲಿ ಮಕ್ಕಳಲ್ಲಿ ಶಿಸ್ತು, ಸಂಯಮ, ಇದೆ ಅಂದರೆ ಅದಕ್ಕೆ ಶಿಕ್ಷಕರ ಪಾತ್ರ ದೊಡ್ಡದು, ಪೋಷಕರ ಜೊತೆಗೆ ಆತ್ಮೀಯತೆಯಿಂದ ಇರಬೇಕು ಎಂದರು. ಈಗಾಗಲೇ ರಾಜ್ಯದ ನುರಿತ ವಿವಿಧ ಶಿಕ್ಷಣ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಂಪನ್ಮೂಲ ವ್ಯಕ್ತಿಗಳಿಂದ ತಮಗೆ ಕಾರ್ಯಾಗಾರ ನಡೆಸುತ್ತಿದ್ದು,ಇದರ ಸದುಪಯೋಗ ಪಡೆದುಕೊಂಡು, ತಮ್ಮ ವಿದ್ಯಾರ್ಥಿಗಳಿಗೆ ತರಬೇತಿಯನ್ನು ಕೊಟ್ಟು ಶಿಕ್ಷಣ ಕ್ಷೇತ್ರದಲ್ಲಿ ವಿದ್ಯಾರ್ಥಿಗಳಿಂದ ತಾವು ಉತ್ತಮ ಸಾಧನೆ ಮಾಡಿಸಬೇಕಾಗಿದೆ ಎಂದು ಶಿಕ್ಷಕರಿಗೆ ಕಿವಿ ಮಾತು ತಿಳಿಸಿದರು.
ಮಕ್ಕಳಿಗೆ ತರಬೇತಿ, ನಿರಂತರ ಅಭ್ಯಾಸ ಮಾಡುವುದರ ಮೂಲಕ ಅವರ ಸಾಧನೆಗೆ ಶಕ್ತಿ ತುಂಬುವುದು, ಮಕ್ಕಳಲ್ಲಿ ಅನೇಕ ನೂನ್ಯತೆ ಗಳಿರುತ್ತವೆ,ಅವುಗಳನ್ನು ತಿದ್ದಿ-ತೀಡಿ ಉತ್ತಮ ರೀತಿಯಲ್ಲಿ ಒಬ್ಬ ಪ್ರಜ್ಞಾವಂತರನ್ನಾಗಿ ಸಜ್ಜುಗೊಳಿಸುವುದರಲ್ಲಿ ತಮ್ಮಗಳ ಪಾತ್ರ ದೊಡ್ಡದು ಎಂದರು.
ಕಾರ್ಯಕ್ರಮದಲ್ಲಿ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪ್ರಧಾನ ಕಾರ್ಯದರ್ಶಿಗಳಾದ ಪೂಜ್ಯ ಶ್ರೀ ಶ್ರೀ ಪ್ರಸನ್ನನಾಥ ಸ್ವಾಮೀಜಿ ದಿವ್ಯ ಉಪಸ್ಥಿತಿ ವಹಿಸಿದ್ದರು. ಕೊಡಚಾದ್ರಿ ಪ್ರಥಮ ದರ್ಜೆ ಕಾಲೇಜಿನ ಸಹಾಯಕ ಪ್ರಾಧ್ಯಾಪಕರಾದ ಡಾ.ಕೆ.ಪ್ರಭಾಕರ ರಾವ್ ಅವರು, ವಕೀಲರು ಮತ್ತು ಸಂಪಾದಕರಾದ ಶ್ರೀ ಸುಧೀರ ಕುಮಾರ ಮುರೊಳ್ಳಿ ಅವರು, ಮಂಡ್ಯ ಕರ್ನಾಟಕ ಸಂಘದ ಅಧ್ಯಕ್ಷರಾದ ಶ್ರೀ ಜಯಪ್ರಕಾಶಗೌಡ ಅವರು, ಆಡಳಿತಾಧಿಕಾರಿಗಳು, ಪ್ರಾಂಶುಪಾಲರು, ಶಿಕ್ಷಕರು ಹಾಗೂ ಸಿಬ್ಬಂದಿ ವರ್ಗವದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Akashavani Bhadravati ಜೂನ್ ತಿಂಗಳ ಪ್ರತೀ ಭಾನುವಾರ ಆಕಾಶವಾಣಿ ಭದ್ರಾವತಿ ಕೇಂದ್ರದ ಮೂಲಕ ” ಜೈಲು ಹಕ್ಕಿಗಳ ಗಾನಸುಧೆ” ಆಲಿಸಿ.

Akashavani Bhadravati ಭದ್ರಾವತಿ ಆಕಾಶವಾಣಿಯಲ್ಲಿ ಜೂನ್ 2026ರ ಪ್ರತಿ ಭಾನುವಾರ ಸಂಜೆ 4.00...

DK Shivakumar ಕೆಂಪೇಗೌಡ ದಿನಾಚರಣೆಯಂದು 15 ಲಕ್ಷ ಸಸಿನೆಡುವ ವಿಶೇಷ ಕಾರ್ಯಕ್ರಮ- ಸೀಎಂ ಡಿ.ಕೆ.ಶಿವಕುಮಾರ್

DK Shivakumar ಎಲ್ಲರೂ ಪರಿಸರವನ್ನು ಕಾಪಾಡುವ ಮೂಲಕ ರಾಜ್ಯವನ್ನು ಹಸಿರಾಗಿಸಬೇಕು. ಪ್ರತಿ ಮನೆಯಲ್ಲಿ...

World Environment Day ಪರಿಸರ ಮಾಲಿನ್ಯ ರಕ್ಷಣೆಗೆ ಕೃತಕ‌ ಬುದ್ಧಿಮತ್ತೆ ಬಳಕೆ ಅಗತ್ಯ- ಜಿ.ಎ.ಹಿರೇಮಠ್.

World Environment Day ಪರಿಸರ ಮಾಲಿನ್ಯದ ಮೂಲಗಳನ್ನು ಪತ್ತೆ ಹಚ್ಚಲು ಹಾಗೂ ನೈಜ,...