Monday, May 4, 2026
Monday, May 4, 2026

Gruha Lakshmi Scheme ಗೃಹಲಕ್ಷ್ಮಿ’ ಹಣದಲ್ಲಿ ಮಹಿಳೆಯರಿಗೆ ಉದ್ಯೋಗ ನೀಡಿದ ತಾಯಿ” ಗಂಗವ್ವ”

Date:

Gruha Lakshmi Scheme ಬಾಗಲಕೋಟೆ ಜಿಲ್ಲೆಯ ಬೀಳಗಿ ತಾಲೂಕಿನ ಕೊರ್ತಿ ಗ್ರಾಮದ ನಿವಾಸಿ ಗಂಗವ್ವ ಬಿರಾದಾರ ಎಂಬ ಮಹಿಳೆ ಗೃಹಲಕ್ಷ್ಮಿ ಯೋಜನೆಯ 12 ತಿಂಗಳ ₹24,000 ಹಣ ಕೂಡಿಟ್ಟು ಹೊಲಿಗೆ ಯಂತ್ರ ಖರೀದಿಸಿ, ತನ್ನ ಹೆಣ್ಣುಮಕ್ಕಳಿಗೆ ಹೊಲಿಗೆ ತರಬೇತಿ ನೀಡುವ ಮೂಲಕ ಬದುಕಿನ ಹಾದಿ ರೂಪಿಸಿಕೊಟ್ಟು ತಾಯ್ತನವನ್ನು ಮೆರೆದಿದ್ದಾರೆ. ಬಡತನದಲ್ಲೂ ಸ್ವಾವಲಂಬಿ ಬದುಕಿನ ಕನಸು ಕಾಣುತ್ತಿರುವ ಹೆಣ್ಣುಮಕ್ಕಳಿಗೆ ನೆರವಾಗುವುದೇ ನಮ್ಮ ಯೋಜನೆಯ ಉದ್ದೇಶವೂ ಆಗಿದೆ. ಈ ತಾಯಿಯ ಸಂಕಲ್ಪಕ್ಕೆ ನನ್ನ ಪ್ರಣಾಮ.

ಇದು ನನ್ನ ರಾಜಕೀಯ ಬದುಕಿನ ಮತ್ತೊಂದು ಸಾರ್ಥಕ ಕ್ಷಣ. ನಮ್ಮ ಗ್ಯಾರಂಟಿಗಳ ಬಗ್ಗೆ ದೇಶದ ಪ್ರಧಾನಿಯೇ ಅಪಪ್ರಚಾರಕ್ಕೆ ಇಳಿದಿರುವ, ಇಡೀ ಬಿಜೆಪಿ ಪಕ್ಷ ಗ್ಯಾರಂಟಿ ಯೋಜನೆಗಳು ಸ್ಥಗಿತವಾಗಲೆಂದು ದಿನವಿಡೀ ಜಪಿಸುತ್ತಿರುವ ಹೊತ್ತಿನಲ್ಲಿ ಇಂಥದ್ದೊಂದು ಘಟನೆ ಬೆಳಕಿಗೆ ಬಂದಿರುವುದು ಗ್ಯಾರಂಟಿ ವಿರೋಧಿಗಳೆಲ್ಲರಿಗೂ ತಪರಾಕಿ ಬಾರಿಸಿದಂತಿದೆ.

Gruha Lakshmi Scheme ಬಿಜೆಪಿ – ಜೆಡಿಎಸ್ ನಾಯಕರ ಸುಳ್ಳು, ಅಪಪ್ರಚಾರಗಳ ನಡುವೆ ನಮ್ಮ ಗ್ಯಾರಂಟಿ ಯೋಜನೆ ಗೆಲ್ಲುತ್ತಿದೆ, ಜನರ ಬದುಕು ಬದಲಿಸುತ್ತಿದೆ.
ಟೀಕೆಗಳು ಸಾಯುತ್ತಿವೆ, ಕೆಲಸಗಳು ಕಾಣುತ್ತಿವೆ. ಇನ್ನಾದರೂ ಗ್ಯಾರಂಟಿ ವಿರೋಧಿಗಳ ಕಣ್ಣು ತೆರೆಯಲಿ ಎಂದು
ಮುಖ್ಯಮಂತ್ರಿ ಸಿದ್ಧರಾಮಯ್ಯನವರು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಅನಿಸಿಕೆ ಹಂಚಿಕೊಂಡಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shivamogga Police ಗಾಡಿಕೊಪ್ಪ ಸಂಚಾರ ನಿಯತ್ರಣ ಓಕೆ. ಆದರೆ ಮಿಕ್ಕ ಸಮಸ್ಯೆಗಳಿಗೆ ಪರಿಹಾರವಿಲ್ಲ ಯಾಕೆ?

Shivamogga Police ಗಾಡಿಕೊಪ್ಪ‌,ಶಿವಮೊಗ್ಗದ ಸೆಟಲೈಟ್ ಟೌನ್ ಎಂಬ ವ್ಯಾಪ್ತಿಗೆ ಬೆಳೆದುಬಿಟ್ಟಿದೆ. ಅಲ್ಕಿನ ವೃತ್ತಕ್ಕೆ...

Shivamogga Airport ಶಿವಮೊಗ್ಗಏರ್ ಪೋರ್ಟ್ ನಲ್ಲಿನೈಟ್ ಲ್ಯಾಂಡಿಂಗ್ಕಾಮಗಾರಿಯು ಜೂನ್ ತಿಂಗಳಲ್ಲಿ ಮುಗಿಯಲಿದೆ- ನಂಜಯ್ಯ‌ಮಠ

Shivamogga Airport ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಕರ್ಯ ನಿಗಮ ಮಂಡಳಿಯ (ಕೆಎಸ್‌ಐಡಿಸಿ)...

B.Y. Raghavendra ಬಿಎಸ್ ವೈ ಅಭಿಮಾನೋತ್ಸವ ಕೇವಲ ಸಮಾರಂಭವಲ್ಲ.ನಮ್ಮನಾಯಕರಿಗೆ ಸಲ್ಲಿಸುವ ಗೌರವ- ಬಿ.ವೈ.ರಾಘವೇಂದ್ರ.

B.Y. Raghavendra ಇದೇ ಮೇ 9ರಂದು ಚಿತ್ರದುರ್ಗದಲ್ಲಿ ಆಯೋಜಿಸಲಾಗಿರುವ ರೈತ ನಾಯಕ, ಮಾಜಿ...