Wednesday, September 9, 2026
Wednesday, September 9, 2026

code of conduct election ಜಿಲ್ಲೆಯ ವಿವಿಧ “ಗ್ರಾಪಂ” ಚುನಾವಣೆ ನಿಮಿತ್ತ ಜಿಲ್ಲಾಡಳಿತದಿಂದ ಚುನಾವಣಾ ನೀತಿ ಸಂಹಿತೆ ಜಾರಿ- ಗುರುದತ್ತ ಹೆಗಡೆ

Date:

code of conduct election ಶಿವಮೊಗ್ಗ ಜಿಲ್ಲೆಯ ವಿವಿಧ ಗ್ರಾಮ ಪಂಚಾಯತಿಗಳಲ್ಲಿ ವಿವಿಧ ಕಾರಣಗಳಿಂದ ಖಾಲಿ ಇರುವ/ ತೆರವಾಗಿರುವ ಸದಸ್ಯ ಸ್ಥಾನಗಳಿಗೆ ಉಪ ಚುನಾವಣೆ ನಡೆಯಲಿದ್ದು ಕೆಳಕಂಡ ಗ್ರಾಮ ಪಂಚಾಯ್ತಿ, ಪಟ್ಟಣ ಪಂಚಾಯ್ತಿ ವ್ಯಾಪ್ತಿಯಲ್ಲಿ ಶಸ್ತ್ರ/ಆಯುಧಗಳನ್ನು ಚುನಾವಣಾ ಪ್ರಕ್ರಿಯೆ ಪೂರ್ಣ ಗೊಳ್ಳುವವರೆಗೆ ಸಮೀಪದ ಪೊಲೀಸ್ ಠಾಣೆಯಲ್ಲಿ ಠೇವಣಿ ಇರಿಸಬೇಕು ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಸೂಚಿಸಿದ್ದಾರೆ.

ರಾಜ್ಯ ಚುನಾವಣಾ
ಆಯೋಗವು ಶಿವಮೊಗ್ಗ ತಾಲ್ಲೂಕಿನ 32- ಕೋಟೆಗಂಗೂರು, ಸಾಗರ ತಾಲ್ಲೂಕಿನ 23-ಕುದರೂರು, ಭದ್ರಾವತಿ ತಾಲ್ಲೂಕಿನ 34-ಬಾರಂದೂರು, 40- ಮೈದೊಳಲು, 10-ಅರಹತೊಳಲು, 17-ಅರಕೆರೆ, ತೀರ್ಥಹಳ್ಳಿ ತಾಲ್ಲೂಕಿನ 9-ತೀರ್ಥಮತ್ತೂರು, ಹೊಸನಗರ ತಾಲ್ಲೂಕಿನ
4-ಎಂ ಗುಡ್ಡೆಕೊಪ್ಪ, ಶಿಕಾರಿಪುರ ತಾಲ್ಲೂಕಿನ 1-ಮಾರವಳ್ಳಿ, 13-ಹಿತ್ತಲ, 18-ಸುಣ್ಣದಕೊಪ್ಪ, 11-ತರಲಘಟ್ಟ, ಸೊರಬ ತಾಲ್ಲೂಕಿನ 22-ಹೊಸಬಾಳೆ, 5-ಜಡೆ, 2-ಭಾರಂಗಿ ಗ್ರಾಮ ಪಂಚಾಯ್ತಿ, ಪಟ್ಟಣ ಪಂಚಾಯ್ತಿಗಳ ವ್ಯಾಪ್ತಿಗಳಲ್ಲಿ ಚುನಾವಣೆ ನಡೆಸಲು ವೇಳಾಪಟ್ಟಿಯನ್ನು ಪ್ರಕಟಿಸಿದೆ. ಚುನಾವಣೆ ನೀತಿ ಸಂಹಿತೆ ನ. 06 ರಿಂದ 26 ರ ವರೆಗೆ ಜಾರಿಯಲ್ಲಿರುತ್ತದೆ.

ಚುನಾವಣಾ ನೀತಿ ಸಂಹಿತೆ ಮುಕ್ತಾಯಗೊಳ್ಳುವವರೆಗೆ ಮೇಲ್ಕಂಡ ಗ್ರಾಮ ಪಂಚಾಯ್ತಿ, ಪಟ್ಟಣ ಪಂಚಾಯ್ತಿಗಳ ವ್ಯಾಪ್ತಿಗಳಲ್ಲಿ ಆಯುಧಗಳನ್ನು ಹೊಂದಿರುವವರು ತಕ್ಷಣದಿಂದ ಜಾರಿಗೆ ಬರುವಂತೆ ಮತ್ತು ಚುನಾವಣಾ ಪ್ರಕ್ರಿಯೆ ಪೂರ್ಣಗೊಳ್ಳುವವರೆಗೆ ಶಸ್ತ್ರ/ಆಯುಧಗಳನ್ನು ಸಮೀಪದ ಪೊಲೀಸ್ ಠಾಣೆಯಲ್ಲಿ ಠೇವಣಿ ಮಾಡಬೇಕು.

code of conduct election ಈ ಶಸ್ತ್ರ/ಆಯುಧಗಳನ್ನು ಚುನಾವಣಾ ಪ್ರಕ್ರಿಯೆ ಮುಕ್ತಾಯವಾದ ನಂತರ ಚುನಾವಣೆಯ ಫಲಿತಾಂಶವನ್ನು ಘೋಷಿಸಿದ ಮೇಲೆ ಡಿಪಾಸಿಟ್ ಮಾಡಿದ ಪರವಾನಿಗೆದಾರರಿಗೆ ಹಿಂದಿರುಗಿಸಲಾಗುವುದು. ಚುನಾವಣೆಯು ಮುಕ್ತ ಹಾಗೂ ನ್ಯಾಯಯುತವಾಗಿ ನಡೆಯಬೇಕಾಗಿರುವುದರಿಂದ ಜಿಲ್ಲಾಡಳಿತವು ಕೈಗೊಂಡ ಕ್ರಮಕ್ಕೆ ಸಾರ್ವಜನಿಕರು ಸಹಕರಿಸಬೇಕಾಗಿ ಕೋರಿದ್ದಾರೆ.

ಸರ್ಕಾರಿ ಕರ್ತವ್ಯದಲ್ಲಿ ನಿರತರಾದ ರಕ್ಷಣಾ ಸಿಬ್ಬಂದಿಗಳಿಗೆ ಎಂ.ಪಿ.ಎಂ/ವಿ.ಐ.ಎಸ್.ಎಲ್ ಮತ್ತು ರಾಷ್ಟ್ರೀಕೃತ ಬ್ಯಾಂಕ್ ಇತ್ಯಾದಿಗಳಲ್ಲಿ ಭದ್ರತಾ ಕರ್ತವ್ಯದಲ್ಲಿರುವ ಆಯುಧ ಪರವಾನಿಗೆ ಹೊಂದಿರುವ ಸಿಬ್ಬಂದಿಗಳಿಗೆ ಈ ಆದೇಶವು ಅನ್ವಯಿಸುವುದಿಲ್ಲ ಎಂದು ಅವರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ಸಮಾಜಮುಖಿಯಾಗಿ ಕ್ರಿಯಾಶೀಲವಾಗಿರುವ ಆರ್ಯವೈಶ್ಯ ಶ್ರೀರಾಮಸಹಕಾರ ಸಂಘದ ಕಾರ್ಯ ಶ್ಲಾಘನೀಯ : ಎಸ್.ಎನ್.ಚನ್ನಬಸಪ್ಪ

S.N. Channabasappa "ಸಮಾಜದ ಉದಯೋನ್ಮುಖ ಯುವ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸುವುದು ಹಾಗೂ...

B.Y. Raghavendra ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ವಿಳಂಬಕ್ಕೆ ಸಂಸದ ಬಿ.ವೈ. ರಾಘವೇಂದ್ರ ಅಸಮಾಧಾನ

B.Y. Raghavendra ಶಿವಮೊಗ್ಗ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ನಡೆಯುತ್ತಿರುವ ವಿವಿಧ ರಾಷ್ಟ್ರೀಯ ಹೆದ್ದಾರಿ...

Bhadra Reservoir ಸೆಪ್ಟೆಂಬರ್ 1 ರಿಂದ 10 ರವರೆಗೆ ಭದ್ರಾ ಬಲದಂಡೆ ನಾಲೆಯಲ್ಲಿ ನೀರು ಬಿಡುಗಡೆ: ಕುಡಿಯುವ ನೀರಿಗೆ ಮಾತ್ರ ಬಳಕೆ

Bhadra Reservoir ದಾವಣಗೆರೆ ಹಾಗೂ ಚನ್ನಗಿರಿ ತಾಲ್ಲೂಕುಗಳ ಜನ-ಜಾನುವಾರುಗಳಿಗೆ ಮತ್ತು ಬಹುಗ್ರಾಮ...