Saturday, June 21, 2025
Saturday, June 21, 2025

Shivamogga City Corporation ಇ- ಸ್ವತ್ತು ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸಿ- ಎನ್.ಗೋಪಿನಾಥ್.

Date:

Shivamogga City Corporation ಮಹಾನಗರ ಪಾಲಿಕೆ ವ್ಯಾಪ್ತಿಯ ವಾರ್ಡ್ ಗಳಲ್ಲಿ ಇ-ಸ್ವತ್ತು ಕುರಿತು ಸಾರ್ವಜನಿಕರಿಗೆ ಅರಿವು ಮೂಡಿಸಲು ಮಹಾನಗರ ಪಾಲಿಕೆ ವತಿಯಿಂದ ಹೆಚ್ಚೆಚ್ಚು ಕಾರ್ಯಕ್ರಮಗಳನ್ನು ಆಯೋಜಿಸುವಂತೆ ನಮ್ಮ ಕನಸಿನ ಶಿವಮೊಗ್ಗದ ಅಧ್ಯಕ್ಷ ಎನ್.ಗೋಪಿನಾಥ್ ಕೋರಿದ್ದಾರೆ.

ಶಿವಮೊಗ್ಗದ ಎಲ್ಲ ವಾರ್ಡ್ ಗಳಲ್ಲಿ ಇ-ಸ್ವತ್ತು ಕುರಿತು ಅರಿವು ಮೂಡಿಸುವಂತೆ ಮಹಾನಗರ ಪಾಲಿಕೆ ಆಯುಕ್ತರಿಗೆ ನಮ್ಮ ಕನಸಿನ ಶಿವಮೊಗ್ಗ ಪರವಾಗಿ ಹಾಗೂ ನಾಗರಿಕರ ಪರವಾಗಿ ಮನವಿ ಮಾಡುತ್ತಿದ್ದು, ಜನರಿಗೆ ಜಾಗೃತಿ ಅತ್ಯಂತ ಅವಶ್ಯಕವಾಗಿದೆ.

ಕರ್ನಾಟಕ ಸರ್ಕಾರದ ಇ-ಸ್ವತ್ತು ವೇದಿಕೆ, ನಾಗರಿಕರಿಗೆ ಆಸ್ತಿ ದಾಖಲೆಗಳ ಮಾಹಿತಿ ಪಡೆಯಲು, ಆಸ್ತಿ ಮಾಲಿಕತ್ವ ಪರಿಶೀಲಿಸಲು ಮತ್ತು ಆಸ್ತಿ ಸಂಬಂಧಿತ ವಂಚನೆಗಳನ್ನು ತಪ್ಪಿಸಲು ನೆರವಾಗುವ ಉದ್ದೇಶದಿಂದ ತಯಾರಿಸಲಾಗಿದೆ. ಆದರೆ ಹೆಚ್ಚಿನ ನಾಗರಿಕರಿಗೆ ಇ-ಸ್ವತ್ತು ಮತ್ತು ಪ್ರಯೋಜನಗಳ ಬಗ್ಗೆ ತಿಳಿದಿಲ್ಲ, ಇದರಿಂದ ವೇದಿಕೆಯ ಪೂರ್ಣ ಪ್ರಯೋಜನ ಸಮಾಜಕ್ಕೆ ತಲುಪುತ್ತಿಲ್ಲ.

ಅರಿವು ಕಾರ್ಯಕ್ರಮಗಳನ್ನು ನಡೆಸುವುದರಿಂದ, ನಾಗರಿಕರಿಗೆ ಆಸ್ತಿ ದಾಖಲೆಗಳ ಪೂರೈಕೆ, ಮಾಲಿಕತ್ವ ನೋಂದಣಿ ಮತ್ತು ಸರ್ಕಾರದ ನಿಯಮಾವಳಿಗಳಿಗೆ ಅನುಗುಣವಾಗಿ ಆಸ್ತಿಗಳನ್ನು ದಾಖಲಿಸಲು ಸಹಾಯ ಆಗಲಿದೆ. ಇಂತಹ ಕಾರ್ಯಕ್ರಮಗಳು ಆಸ್ತಿ ವಂಚನೆಗಳು ಮತ್ತು ಅನಧಿಕೃತ ಭೂಮಿ ನೋಂದಣಿಗಳನ್ನು ತಡೆಗಟ್ಟುವಲ್ಲಿ ಸಹಾಯಮಾಡುತ್ತವೆ. ಇದರಿಂದ ನಮ್ಮ ನಗರದಲ್ಲಿ ಆಸ್ತಿ ವ್ಯವಹಾರಗಳ ಸುರಕ್ಷತೆ ಮತ್ತು ಪಾರದರ್ಶಕತೆ ಹೆಚ್ಚಾಗುತ್ತದೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Shivamogga City Corporation ವಿವಿಧ ವಾರ್ಡ್ ಗಳಲ್ಲಿ ಇ-ಸ್ವತ್ತು ಕುರಿತು ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಹೆಚ್ಚಿನ ನಾಗರಿಕರು ಇ-ಸ್ವತ್ತು ಬಳಕೆ ಮಾಡಿಕೊಳ್ಳುವಂತೆ ಪ್ರೋತ್ಸಾಹಿಸಬೇಕು. ಆಸ್ತಿಗಳನ್ನು ಸರಿಯಾಗಿ ನೋಂದಣಿ ಮಾಡಿಸಿಕೊಳ್ಳುವಂತೆ ಮಾಡಬೇಕು. ಇ-ಸ್ವತ್ತು ಪ್ರಚಾರಕ್ಕಾಗಿ ಶಿವಮೊಗ್ಗ ಮಹಾನಗರ ಪಾಲಿಕೆ ಹೆಚ್ಚು ಗಮನ ಹರಿಸಬೇಕು. ಸಮೃದ್ಧ ಮತ್ತು ಸುರಕ್ಷಿತ ಆಸ್ತಿ ನಿರ್ವಹಣಾ ವ್ಯವಸ್ಥೆಯನ್ನು ಶಿವಮೊಗ್ಗದಲ್ಲಿ ನಿರ್ಮಿಸಬೇಕು ಎಂದು ನಮ್ಮ ಕನಸಿನ ಶಿವಮೊಗ್ಗದ ಅಧ್ಯಕ್ಷ ಎನ್.ಗೋಪಿನಾಥ್ ಮನವಿ ಮಾಡಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಮಕ್ಕಳಿಗೆ ಜಾನಪದದ ಅರಿವು ಮೂಡಿಸುವುದು ಅವಶ್ಯ: ಕವಿತಾ ಸುಧೀಂದ್ರ

ಮಕ್ಕಳಲ್ಲಿ ಬಾಲ್ಯದಿಂದಲೇ ಜಾನಪದ ಸಂಸ್ಕೃತಿಯ ಮಹತ್ವದ ಕುರಿತು ಅರಿವು ಮೂಡಿಸಬೇಕು ಎಂದು...

Shivamogga District Minority Welfare Department ವಿದ್ಯಾರ್ಥಿನಿಲಯಕ್ಕೆ ಆನ್‌ಲೈನ್ ಅರ್ಜಿ ಆಹ್ವಾನ, ಅವಧಿ ವಿಸ್ತರಣೆ

Shivamogga District Minority Welfare Department ಶಿವಮೊಗ್ಗ ಜಿಲ್ಲಾ ಅಲ್ಪಸಂಖ್ಯಾತರ...

ರಾಜ್ಯ ಮಟ್ಟದ ಅಂಬೆಗಾಲು – 6 ಕಿರು ಚಿತ್ರ ಸ್ಪರ್ಧೆ ವಿಜೇತರಿಗೆ ಬಹುಮಾನ ವಿತರಣೆ

ಶಿವಮೊಗ್ಗ ನಗರದ ಸಿನಿಮೊಗೆ - ಶಿವಮೊಗ್ಗ ಚಿತ್ರ ಸಮಾಜದ ವತಿಯಿಂದ...