Thursday, June 18, 2026
Thursday, June 18, 2026

All Karnataka Financiers Association ರಾಜ್ಯ ಫೈನಾನ್ಷಿಯರ್ಸ್ ಸಂಸ್ಥೆ ಕಾರ್ಯಕಾರಿ ಸಮಿತಿಗೆ ಬದರಿನಾಥ್ & ವಿಜಯ ಕುಮಾರ್ ಆಯ್ಕೆ

Date:

All Karnataka Financiers Association ಅಖಿಲ ಕರ್ನಾಟಕ ಫೈನಾನ್ಸಿಯರ್ ಅಸೋಸಿಯೇಷನ್‌ನ 2024ರಿಂದ 2027ರ ಕಾರ್ಯಕಾರಿ ಸಮಿತಿಗೆ ಶಿವಮೊಗ್ಗದ ಲಕ್ಷ್ಮೀ ಫೈನಾನ್ಸ್ ನ ಟಿ.ಎಸ್.ಬದರಿನಾಥ್, ಸಾವಿತ್ರಮ್ಮ ಫೈನಾನ್ಸ್ ನ ಜಿ.ವಿಜಯಕುಮಾರ್ ಅವರು ಚುನಾವಣೆಯಲ್ಲಿ ವಿಜೇತರಾಗಿದ್ದಾರೆ.

ಅಖಿಲ ಕರ್ನಾಟಕ ಫೈನಾನ್ಸಿಯರ್ ಅಸೋಸಿಯೇಷನ್‌ನ ರಾಜ್ಯಮಟ್ಟದ ಕಾರ್ಯಕಾರಿ ಸಮಿತಿಗೆ ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಶ್ರೀ ರಾಮೇಶ್ವರ ಸ್ವಾಮಿ ದೇವಸ್ಥಾನ ಕಲ್ಯಾಣ ಮಂಟಪದಲ್ಲಿ ಆಯ್ಕೆ ಪ್ರಕ್ರಿಯೆ ನಡೆಯಿತು.

ಶಿವಮೊಗ್ಗ ನಗರದ ಲಕ್ಷ್ಮೀ ಫೈನಾನ್ಸ್ ಮಾಲೀಕರಾದ ಟಿ.ಎಸ್.ಬದರಿನಾಥ್ ಪ್ರಥಮ ಬಾರಿಗೆ ಅಧಿಕ ಮತಗಳಿಂದ ಜಯಶೀಲರಾಗಿ ನಿರ್ದೇಶಕರಾಗಿ ಆಯ್ಕೆಯಾಗಿದ್ದಾರೆ. ಬದರಿನಾಥ್ ಅವರು ಹಲವಾರು ಸಂಘ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.

ಸಾವಿತ್ರಮ್ಮ ಫೈನಾನ್ಸ್ ಮಾಲೀಕರಾದ ಜಿ.ವಿಜಯಕುಮಾರ್ ಅವರು ಎರಡನೇ ಬಾರಿಗೆ ಅಧಿಕ ಮತಗಳಿಂದ ಜಯಶೀಲರಾಗಿ ರಾಜ್ಯ ಸಂಘಟನಾ ಕಾರ್ಯದರ್ಶಿಯಾಗಿ ಆಯ್ಕೆಯಾಗಿದ್ದಾರೆ. ಜಿ.ವಿಜಯಕುಮಾರ್ ಅವರು ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಉಪಾಧ್ಯಕ್ಷರಾಗಿದ್ದಾರೆ.

All Karnataka Financiers Association ಜಿ.ವಿಜಯಕುಮಾರ್ ಅವರು ರೋವರ್ಸ್ ಕ್ಲಬ್ ನಿರ್ದೇಶಕರು, ಸ್ಕೌಟ್ಸ್ ಮತ್ತು ಗೈಡ್ಸ್ ಕೇಂದ್ರ ಸ್ಥಾನಿಕ ಆಯುಕ್ತರಾಗಿ ಸೇವೆ ಸಲ್ಲಿಸುತ್ತಿದ್ದು, ವಿವಿಧ ಸಂಘ ಸಂಸ್ಥೆಗಳಲ್ಲಿ ಸಮಾಜಮುಖಿಯಾಗಿ ಕೆಲಸ ಮಾಡುತ್ತಿದ್ದಾರೆ.

ಅಖಿಲ ಕರ್ನಾಟಕ ಫೈನಾನ್ಸಿಯರ್ ಅಸೋಸಿಯೇಷನ್ ಅಧ್ಯಕ್ಷ ಸಿ.ಕೆ.ಮೂರ್ತಿ, ಉಪಾಧ್ಯಕ್ಷ ಬಿ.ಟಿ.ರಾಜಶೇಖರ್, ಬಿ.ಶಿವರಾಂ, ಎಂ.ಮಾದಯ್ಯ, ನರಸಿಂಹಮೂರ್ತಿ ಮತ್ತು ನೂತನ ಕಾರ್ಯಕಾರಿ ಮಂಡಳಿ ಸದಸ್ಯರು, ನಿರ್ದೇಶಕರು, ಪದಾಧಿಕಾರಿಗಳಿಗೆ ಅಭಿನಂದಿಸಿ ಪ್ರಮಾಣಪತ್ರ ನೀಡಿ ಸನ್ಮಾನಿಸಿದರು. ಶಿವಮೊಗ್ಗ ಸಹ್ಯಾದ್ರಿ ಚಿಟ್ಸ್ ಸಂಸ್ಥೆ ಪದಾಧಿಕಾರಿಗಳು ಅಭಿನಂದಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ನಿರ್ಲಕ್ಷ್ಯ ಮಾಡದ ನಿಶ್ಶಬ್ದ ಕಾಯಿಲೆ, ಕಿಡ್ನಿ ಕ್ಯಾನ್ಸರ್- ಡಾ.ಯು‌.ಎಸ್.ಕಾರ್ತಿಕ್

Klive Special Article ಕಿಡ್ನಿ ಕ್ಯಾನ್ಸರ್ : ನೀವು ನಿರ್ಲಕ್ಷಿಸಬಾರದ ನಿಶ್ಯಬ್ದ...

K.S. Eshwarappa ಮನಸ್ಸು ಬಿಜೆಪಿ: ದೇಹ ಮಾತ್ರ ಹೊರಗೆ : ಕೆ.ಎಸ್.ಈಶ್ವರಪ್ಪ

K.S. Eshwarappa ಪಕ್ಷದ ಬೆಳವಣಿಗೆ ಮತ್ತು ಶುದ್ಧೀಕರಣಕ್ಕೆ ಆಗ್ರಹಿಸಿ ಬಿಜೆಪಿಯಿಂದ ಹೊರ...

ಸಮಾನತೆ, ಸ್ವಾವಲಂಬನೆ ಸಾಧಿಸುವಲ್ಲಿ ಸಹಕಾರ ಸಂಘಗಳ ಪಾತ್ರ ಅಪಾರ : ಶ್ರೀರಂಭಾಪುರಿಶ್ರೀ

ಸಮಾನತೆ, ಸ್ವಾವಲಂಬನೆ ಸಾಧನೆಯಲ್ಲಿ ಸಹಕಾರ ಸಂಘಗಳ ಪಾತ್ರ ಮಹತ್ವವಾದದು. ಅಭಿವೃದ್ಧಿಯನ್ನು ಸಾಧಿಸಲು...