Thursday, June 18, 2026
Thursday, June 18, 2026

National Festivals Celebration Committee ಒನಕೆ ಓಬವ್ವನ ಧೈರ್ಯ & ಸಾಹಸ ಮಹಿಳೆಯರಿಗೆ ಮಾದರಿ- ಮಂಜುಳಾ ಬಿ.ಹೆಗಡಾಳ್

Date:

National Festivals Celebration Committee ಸಮಯ ಪ್ರಜ್ಞೆ ಮತ್ತು ಪರಾಕ್ರಮದಿಂದ ವೈರಿ ಸೈನಿಕರನ್ನು ಸದೆಬಡಿದ ಒನಕೆ ಓಬವ್ವ ಇಂದಿನ ಪೀಳಿಗೆಗೆ ಪ್ರೇರಣೆ ಆಗಿದ್ದಾರೆ ಎಂದು ತಹಶೀಲ್ದಾರ್ ಮಂಜುಳಾ ಬಿ. ಹೆಗಡಾಳ್ ಹೇಳಿದರು.

ಸೊರಬ ತಾಲೂಕು ಕಚೇರಿ ಸಭಾಂಗಣದಲ್ಲಿ ತಾಲೂಕು ಆಡಳಿತ, ತಾಪಂ, ಪುರಸಭೆ, ವಿವಿಧ ಇಲಾಖೆಗಳು ಹಾಗೂ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಮತ್ತು ತಾಲೂಕು ಛಲವಾದಿ ಸಮಾಜದ ವತಿಯಿಂದ ಹಮ್ಮಿಕೊಂಡ ವೀರ ವನಿತೆ ಒನಕೆ ಓಬವ್ವ ಜಯಂತ್ಯುತ್ಸವ ಕಾರ್ಯಕ್ರಮದಲ್ಲಿ ಅವರು ಉಪನ್ಯಾಸ ನೀಡಿದರು.

ಗೃಹಿಣಿಯಾಗಿದ್ದ ಓಬವ್ವ ತನ್ನ ಸಾಹಸ ಮತ್ತು ಧೈರ್ಯದ ಮೂಲಕ ಒನಕೆ ಹಿಡಿದು ಶತ್ರು ಸೈನ್ಯದ ಸೈನಿಕರನ್ನು ಸೆದೆಬಡಿದರು. ಇದು ದೇಶದ ಚರಿತ್ರೆಯ ಪುಟದಲ್ಲಿ ದಾಖಲಾಗಿದೆ. ಶತ್ರುಗಳ ಎದುರು ಉಗ್ರವಾಗಿ ನಿಂತು ಅನುಕರಣೀಯವಾದ ಧೈರ್ಯವನ್ನು ತೋರಿದರು. ಒನಕೆ ಓಬವ್ವನ ಧೈರ್ಯ ಮತ್ತು ಸಾಹಸ ಪ್ರಸ್ತುತ ದಿನಮಾನಗಳಲ್ಲಿ ಮಹಿಳೆಯರಿಗೆ ಮಾದರಿಯಾಗಿದೆ ಎಂದರು.

ಸಿಪಿಐ ಎಲ್. ರಾಜಶೇಖರ್ ಮಾತನಾಡಿ, ದೇಶದ ಮಹಾನ್ ವ್ಯಕ್ತಿಗಳ ಜಯಂತಿಯನ್ನು ಒಂದು ಜಾತಿಗೆ ಸೀಮಿತಗೊಳಿಸುವುದು ಸಲ್ಲದು. ಒನಕೆ ಓಬವ್ವ ಒಂದು ಜಾತಿಗೆ ಸೀಮಿತರಲ್ಲ. ಯಾವುದೇ ಆಸ್ಥಾನದ ರಾಣಿಯಾಗಿರದೇ ಸಾಮಾನ್ಯ ಮಹಿಳೆಯಾಗಿ, ಕೋಟೆಯ ಕಾವಲುಗಾರನ ಪತ್ನಿಯಾಗಿ ತೋರಿದ ಧೈರ್ಯ ಅವಿಸ್ಮರಣೀಯವಾದುದು. ಅವರ ಧೈರ್ಯ, ಸಾಹಸ ಮತ್ತು ಆದರ್ಶಗಳನ್ನು ಮಹಿಳೆಯರು ಬದುಕಿನಲ್ಲಿ ಅಳವಡಿಸಿಕೊಳ್ಳಬೇಕು. ಚಿತ್ರದುರ್ಗದ ಸಮೀಪದ ಅಗಸನಕಲ್ಲು ಎಂಬ ಗ್ರಾಮದಲ್ಲಿ ಒಬವ್ವನನ್ನು ಪೂಜನೀಯವಾಗಿ ಗೌರವಿಸಲಾಗುತ್ತಿರುವುದನ್ನು ಕಾಣಬಹುದಾಗಿದೆ ಎಂದರು.
ವೀರ ವನಿತೆ ಒನಕೆ ಓಬವ್ವ ಅವರ ಜೀವನ ಮತ್ತು ಸಾಹಸದ ಕುರಿತು ಉಪನ್ಯಾಸಕ ಡಾ. ಉಮೇಶ್ ಭದ್ರಾಪುರ ಉಪನ್ಯಾಸ ನೀಡಿದರು.

National Festivals Celebration Committee ಛಲವಾದಿ ಸಮಾಜದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು.
ತಾಲೂಕು ಛಲವಾದಿ ಸಮಾಜದ ಮಂಜಪ್ಪ ಹಸವಿ, ತಾಲೂಕು ಕಚೇರಿಯ ಶಿರಸ್ತೆದಾರ್ ಎಸ್. ನಿರ್ಮಲಾ, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಇಕ್ಬಾಲ್ ಜಾತಿಗೇರ್, ದಲಿತ ಸಂಘರ್ಷ ಸಮಿತಿಯ ವಿಭಾಗೀಯ ಸಂಚಾಲಕ ಗುರುರಾಜ್, ದಲಿತ ಮುಖಂಡ ಶ್ಯಾಮಣ್ಣ ತುಡನೀರು, ತಾಲೂಕು ಕಚೇರಿಯ ನಾಗರತ್ನಾ, ವಿಕ್ರಂ ಹೆಬ್ದಾರ್, ಬಿ.ಜೆ. ವಿನೋದ್ ಸೇರಿದಂತೆ ವಿವಿಧ ಇಲಾಖಾ ಅಧಿಕಾರಿಗಳು ಉಪಸ್ಥಿತರಿದ್ದರು. ಸುರೇಶ್ ಸ್ವಾಗತಿಸಿ, ಬಿ.ಜೆ. ವಿನೋದ್ ವಂದಿಸಿ, ಎಸ್. ರಾಘವೇಂದ್ರ ನಿರೂಪಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ನಿರ್ಲಕ್ಷ್ಯ ಮಾಡದ ನಿಶ್ಶಬ್ದ ಕಾಯಿಲೆ, ಕಿಡ್ನಿ ಕ್ಯಾನ್ಸರ್- ಡಾ.ಯು‌.ಎಸ್.ಕಾರ್ತಿಕ್

Klive Special Article ಕಿಡ್ನಿ ಕ್ಯಾನ್ಸರ್ : ನೀವು ನಿರ್ಲಕ್ಷಿಸಬಾರದ ನಿಶ್ಯಬ್ದ...

K.S. Eshwarappa ಮನಸ್ಸು ಬಿಜೆಪಿ: ದೇಹ ಮಾತ್ರ ಹೊರಗೆ : ಕೆ.ಎಸ್.ಈಶ್ವರಪ್ಪ

K.S. Eshwarappa ಪಕ್ಷದ ಬೆಳವಣಿಗೆ ಮತ್ತು ಶುದ್ಧೀಕರಣಕ್ಕೆ ಆಗ್ರಹಿಸಿ ಬಿಜೆಪಿಯಿಂದ ಹೊರ...

ಸಮಾನತೆ, ಸ್ವಾವಲಂಬನೆ ಸಾಧಿಸುವಲ್ಲಿ ಸಹಕಾರ ಸಂಘಗಳ ಪಾತ್ರ ಅಪಾರ : ಶ್ರೀರಂಭಾಪುರಿಶ್ರೀ

ಸಮಾನತೆ, ಸ್ವಾವಲಂಬನೆ ಸಾಧನೆಯಲ್ಲಿ ಸಹಕಾರ ಸಂಘಗಳ ಪಾತ್ರ ಮಹತ್ವವಾದದು. ಅಭಿವೃದ್ಧಿಯನ್ನು ಸಾಧಿಸಲು...