Monday, February 2, 2026
Monday, February 2, 2026

Sri Shivaganga Yoga Centre ಸಮಾಜ ಸೇವಕ ಜ್ಯೋತಿ ಪ್ರಕಾಶ್ ಅವರಿಗೆ ಜನ್ಮದಿನದ ಅಭಿನಂದನೆ

Date:


Sri Shivaganga Yoga Centre ಶಿವಮೊಗ್ಗ ನಗರದ ಪ್ರತಿಷ್ಠಿತ ಶ್ರೀ ಬಸವೇಶ್ವರ ವೀರಶೈವ ಲಿಂಗಾಯತ ಸಮಾಜ ಸೇವಾ ಸಂಘದ ಅಧ್ಯಕ್ಷರು ಹಾಗೂ ಕ್ಷೇಮಾಭಿವೃದ್ಧಿ ಸಂಘದ ಕ್ಷೇಮಾಭಿವೃದ್ಧಿ ಸಂಘದ ಕಟ್ಟಡ ಸಮಿತಿಯ ಗೌರವಾಧ್ಯಕ್ಷರೂ. ಶ್ರೀ ಶಿವಗಂಗಾ ಯೋಗ ಕೇಂದ್ರದ ಪ್ರಧಾನ ಕಾರ್ಯದರ್ಶಿಗಳು ಶಿವಮೊಗ್ಗ ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷರಾದ ಹಾಗೂ ಹಲವಾರು ಸಂಘ ಸಂಸ್ಥೆಗಳಲ್ಲಿ ನಿಸ್ವಾರ್ಥ ಹಾಗೂ ಪ್ರಾಮಾಣಿಕವಾಗಿ ಸೇವೆ ಸಲ್ಲಿಸುತ್ತಿರುವ ಸರಳ ಸಜ್ಜನಿಕೆಯ ರಾಜಕಾರಣಿ ಹಾಗೂ ದಾನಿಗಳಾದ ಶ್ರೀಯುತ ಎಸ್ ಜ್ಯೋತಿ ಪ್ರಕಾಶ್ ರವರಿಗೆ ಇಂದು ಅವರ 66ನೇ ಹುಟ್ಟುಹಬ್ಬದ ಸಂದರ್ಭದಲ್ಲಿ ಅವರ ನಿವಾಸದಲ್ಲಿ ಶ್ರೀ ಶಿವಗಂಗಾ ಯೋಗ ಕೇಂದ್ರ. ಜಿಲ್ಲಾ ಜಂಗಮ ಸಮಾಜ. ಬೇಡ ಜಂಗಮ ಸಮಾಜ. ಗಾಣಿಗ ಕ್ಷೇಮಭಿವೃದ್ಧಿ ಸಂಘ.. ಕಾರ್ಯದರ್ಶಿಗಳು ಹಾಗೂ ಹಲವಾರು ಸಂಘಟನೆಗಳಿಂದ ಅವರ ನಿವಾಸದಲ್ಲಿ ಆತ್ಮೀಯವಾಗಿ ಅಭಿನಂದಿಸಿ ಗೌರವಿಸಲಾಯಿತು. Sri Shivaganga Yoga Centre ಇದೇ ಸಂದರ್ಭದಲ್ಲಿ ರಾಷ್ಟ್ರಪ್ರಶಸ್ತಿ ಪುರಸ್ಕೃತರಾದ ಯೋಗಾಚಾರ್ಯ ಸಿವಿ ರುದ್ರಾರಾಧ್ಯ ಅವರು ಮಾತನಾಡಿ ಜ್ಯೋತಿ ಪ್ರಕಾಶ್ ಅವರ ಅಧಿಕಾರದ ಅವಧಿಯಲ್ಲಿ ಶಿವಮೊಗ್ಗ ನಗರದಲ್ಲಿ ಹಾಗೂ lಗ್ರಾಮೀಣ ಪ್ರದೇಶಗಳಲ್ಲಿ ಹಲವಾರು ಮಹತ್ತರ ಸಮಾಜಮುಖಿ ಸೇವಾ ಕಾರ್ಯಗಳು ನೆರವೇರಿದ್ದು ಇಂದಿಗೂ ಸ್ಮರಣೀಯವಾಗಿವೆ. ಶ್ರೀ ಶಿವಗಂಗಾ ಯೋಗ ಕೇಂದ್ರದ ಕಟ್ಟಡದ ನಿರ್ಮಾಣದಲ್ಲಿ ಅವರ ಪಾತ್ರ ಪ್ರಮುಖವಾಗಿದೆ ಹಾಗೆ ಬರುವ ದಿನಗಳಲ್ಲಿ ಅವರಿಂದ ಇನ್ನು ಅನೇಕ ಸಮಾಜಮುಖಿ ಮನುಕುಲದ ಕಾರ್ಯಕ್ರಮಗಳು ನೆರವೇರಲಿ ಎಂದು ಆಶೀರ್ವದಿಸಿದರು.. ಇದೇ ಸಂದರ್ಭದಲ್ಲಿ ಶಿವಮೊಗ್ಗ ಜಿಲ್ಲಾ ಜಂಗಮ ಸಮಾಜ ವತಿಯಿಂದ ಮಂತ್ರಾಕ್ಷತೆಯೊಂದಿಗೆ ಆಶೀರ್ವದಿಸಿ ಹಾರೈಸಿದರು ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಉಪಾಧ್ಯಕ್ಷ ಜಿ. ವಿಜಯ ಕುಮಾರ್ ಅವರು ಮಾತನಾಡುತ್ತಾ ಎಸ್ ಎಸ್ ಜ್ಯೋತಿಪ್ರಕಾಶ್ ಅವರು ಸಮಾಜದಲ್ಲಿ ಎಲ್ಲರೂ ಬೇಕಾದ ವ್ಯಕ್ತಿಯಾಗಿ ನಮ್ಮ ಸಂಘದ ಶಕ್ತಿಯಾಗಿ ದುಡಿಯುತ್ತಿದ್ದಾರೆ ಎಲ್ಲರ ಕಷ್ಟ ಕಾರ್ಪಣ್ಯಗಳಿಗೆ ಕೂಡಲೇ ಸ್ಪಂದಿಸಿ ಸಹಾಯ ವನ್ನು ನೀಡುತ್ತಿರುವ ಜ್ಯೋತಿಪ್ರಕಾಶ್ ಅವರು ಸಾಮಾನ್ಯರಲ್ಲಿ ಸಾಮಾನ್ಯರಾಗಿ ಬೆಳೆಯುತ್ತಿದ್ದಾರೆ ಇವರಿಗೆ ದೇವರು ಆಯಸ್ಸು ಆರೋಗ್ಯವನ್ನು ಕರುಣಿಸಲಿ ಎಂದು ಹಾರೈಸಿದರು. ಇದೇ ಸಂದರ್ಭದಲ್ಲಿ ಯೋಗ ಗುರುಗಳಾದ ಜಿಎಸ್ ಓಂಕಾರವರು ಜ್ಯೋತಿ ಪ್ರಕಾಶ್ ಅವರ ಬಾಲ್ಯದ ನೆನಪುಗಳನ್ನು ಮಾಡುತ್ತಾ ಅವರ ಸಾಧನೆಗಳನ್ನು ತಿಳಿಸಿದರು
ನಗರದ ಪ್ರಮುಖರಾದ ಜಂಗಮ ಸಮಾಜದ ಅಧ್ಯಕ್ಷರಾದ ಚಂದ್ರಯ್ಯ , ಜಿ. ಲಿಂಗರಾಜು ಎಚ್ ಎಲ್ ಸತೀಶ್, ಹಿರೇಮಠ್ ಸತೀಶ್ ಗಾಂಧಿ. ಪ್ರೇಮ್ ಕುಮಾರ್. ಎಸ್ ಟಿ ಆನಂದ್ ವಿಜಯಕುಮಾರ್, ಕಾಟನ್ ಜಗದೀಶ್, ಪರಿಸರ ನಾಗರಾಜ್ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...