Monday, December 15, 2025
Monday, December 15, 2025

Shimoga Institute of Medical Sciences Shivamogga ಮಧುಮೇಹ ದೊಡ್ಡ ಕಾಯಿಲೆಯೆಂಬ ಆತಂಕ ಬೇಡ. ಜೀವನ ಪದ್ಧತಿ ಬದಲಾವಣೆಯಿಂದ ನಿಯಂತ್ರಣ ಸಾಧ್ಯ- ಡಾ.ವಿರುಪಾಕ್ಷಪ್ಪ

Date:

Shimoga Institute of Medical Sciences Shivamogga ಜೀವನಶೈಲಿ ಬದಲಾವಣೆ ಮಾಡಿಕೊಳ್ಳುವ ಮೂಲಕ ಮಧುಮೇಹ ನಿಯಂತ್ರಿಸಬಹುದು ಎಂದು ಸಿಮ್ಸ್ ನಿರ್ದೇಶಕ ಡಾ. ವಿರುಪಾಕ್ಷಪ್ಪ ಅವರು ತಿಳಿಸಿದರು.

ಇತ್ತೀಚಿಗೆ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಎನ್ ಸಿಡಿ ಘಟಕ ವತಿಯಿಂದ ಸಿಮ್ಸ್ ಮೆಡಿಕಲ್ ಕಾಲೇಜಿನ ಎನ್‌ಸಿಡಿ ಆವರಣದಲ್ಲಿ ವಿಶ್ವ ಮಧುಮೇಹ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ಮಧುಮೇಹ ಒಂದು ದೊಡ್ಡ ಕಾಯಿಲೆ ಎಂದು ಜನರು ಆತಂಕ ಪಡುವ ಅಗತ್ಯವಿಲ್ಲ. ಪ್ರಾಥಮಿಕವಾಗಿ ನಿಯಂತ್ರಿಸಲು ನಮ್ಮ ಜೀವನ ಪದ್ದತಿ ಬದಲಾಗಬೇಕಿದೆ ಎಂದರು.

Shimoga Institute of Medical Sciences Shivamogga ಡಿಹೆಚ್‌ಓ ಡಾ.ನಟರಾಜ್ ಮಾತನಾಡಿ ಮಧುಮೇಹದಿಂದ ಕಿಡ್ನಿ ವೈಫಲ್ಯ, ಹೃದಯ ಸಂಬಂಧಿ ಕಾಯಿಲೆಗಳು, ಪಾರ್ಶ್ವವಾಯು, ನರಗಳಿಗೆ ಹಾನಿಯಾಗುವುದು ಈ ರೀತಿ ಅನೇಕ ಕಾಯಿಲೆಗಳಿಗೆ ಮಧುಮೇಹ ಕಾರಣವಾಗುತ್ತದೆ. ಅದ್ದರಿಂದ ಮಧುಮೇಹವನ್ನು ನಿಯಂತ್ರಿಸಲು ಪ್ರತಿನಿತ್ಯ ದೈಹಿಕ ಚಟುವಟಿಕೆ, ಆರೋಗ್ಯಕರ ಆಹಾರ ಸೇವನೆ, ತಾಜಾ ಹಣ್ಣು, ತರಕಾರಿ, ಧಾನ್ಯಗಳನ್ನು ಹೆಚ್ಚಾಗಿ ಸೇವಿಸುವುದು ಮತ್ತು ಮದ್ಯಪಾನ ತ್ಯಜಿಸುವುದು, ದಿನನಿತ್ಯ ನಿಗದಿತ ಚಿಕಿತ್ಸೆ ಪಾಲನೆ, ನಿಯಮಿತ ರಕ್ತದ ಸಕ್ಕರೆ ಪರೀಕ್ಷೆ ಮಾಡಿಸುವ ಮೂಲಕ ನಿಮ್ಮ ಆರೋಗ್ಯವನ್ನು ರಕ್ಷಿಸಿಕೊಳ್ಳುವ ಹೊಣೆ ನಿಮ್ಮ ಕೈಯಲ್ಲೇ ಇದೆ ಎಂದು ಸಲಹೆ ನೀಡಿದರು.

ಈ ಸಂದರ್ಭದಲ್ಲಿ ಜಿಲ್ಲಾ ಸರ್ಜನ್ ಡಾ. ಸಿದ್ದನಗೌಡ ಪಾಟೀಲ್, ಎಂ.ಎಸ್. ಡಾ.ತಿಮ್ಮಪ್ಪ, ಡಿ.ಎಸ್.ಓ ಡಾ.ನಾಗರಾಜ್ ನಾಯ್ಕ್, ಡಾ.ಹರ್ಷ ಹಾಗೂ ಎನ್‌ಸಿಡಿ ಸಿಬ್ಬಂದಿಗಳು ಮತ್ತು ಸಾರ್ವಜನಿಕರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...