Thursday, March 19, 2026
Thursday, March 19, 2026

Shimoga Gayatri Vidyalaya ಪರಿಪೂರ್ಣತೆ ಸಾಧಿಸಲು ಮಕ್ಕಳಿಗೆ ಸಂಸ್ಕಾರ & ಕೌಶಲ್ಯ ಅಗತ್ಯ – ಜಿ‌.ವಿಜಯ ಕುಮಾರ್

Date:

Shimoga Gayatri Vidyalaya ಮಕ್ಕಳು ಸಮಾಜದಲ್ಲಿ ಪರಿಪೂರ್ಣ ವ್ಯಕ್ತಿಗಳಾಗಿ ನಿರ್ಮಾಣಗೊಳ್ಳಬೇಕಾದರೆ ಸಂಸ್ಕಾರ ಹಾಗೂ ಕೌಶಲ್ಯ ತುಂಬಾ ಅತ್ಯಗತ್ಯ ಎಂದು ಶುಭದಿನ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಉಪಾಧ್ಯಕ್ಷ ಹಾಗೂ ರೋಟರಿ ಮಾಜಿ ಸಹಾಯಕ ಗವರ್ನರ್ ಆದ ಜಿ ವಿಜಯಕುಮಾರ್ ಅಭಿಮತ ವ್ಯಕ್ತಪಡಿಸಿದರು.

Shimoga Gayatri Vidyalaya ಶಿವಮೊಗ್ಗ ನಗರದ ಗಾಯಿತ್ರಿ ವಿದ್ಯಾಲಯದಲ್ಲಿ ಚಾಚಾ ನೆಹರು ಅವರ ಜನ್ಮದಿನಾಚರಣೆ ಹಾಗೂ ಮಕ್ಕಳ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು ಮಕ್ಕಳ ಮನಸ್ಸು ತಿಳಿಯಾದ ಸುಣ್ಣದ ಗೋಡೆ ಇದ್ದಹಾಗೆ ನಾವು ಬರೆಯುತ್ತೇವೋ ತಿಳಿಸುತ್ತೇವೆ ಅದು ಅವರ ಮನಸ್ಸಿನಲ್ಲಿ ಉಳಿಯುತ್ತದೆ ಹಾಗಾಗಿ ಮಕ್ಕಳ ಎದುರುಗಡೆ ನಮ್ಮ ನಡವಳಿಕೆಗಳು ತುಂಬಾ ಸರಿಯಾಗಿರಬೇಕು ಮಕ್ಕಳ ಪ್ರತಿಭೆ ಅನಾವರಣಗೊಳ್ಳಲು ಅವಕಾಶಗಳನ್ನು ಕಲ್ಪಿಸಬೇಕು ವೇದಿಕೆಗಳನ್ನು ನೀಡಬೇಕು ಅವರ ಸರಿ ತಪ್ಪುಗಳನ್ನು ತಿದ್ದುದರ ಮುಖಾಂತರ ಅವರನ್ನು ಸನ್ಮಾರ್ಗದಲ್ಲಿ ನಡೆಸುವುದು ಗುರುಹಿರಿಯರ ಹಾಗೂ ಶಿಕ್ಷಕರ ಕರ್ತವ್ಯ ಎಂದ ಅವರು ಬಾಲ್ಯದಲ್ಲಿ ಮಕ್ಕಳಿಗೆ ಕ್ರೀಡೆ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳ ಬಗ್ಗೆ ಆಸಕ್ತಿಯನ್ನು ಮೂಡಿಸಬೇಕು ಎಂದು ನುಡಿದರು ಇದೇ ಸಂದರ್ಭದಲ್ಲಿ ಗಾಯಿತ್ರಿ ವಿದ್ಯಾಲಯದ ಅಧ್ಯಕ್ಷರಾದ ಹೆಚ್ ಮೊಣೇಶ್ವರ ಶೇಟ್ ಅಧ್ಯಕ್ಷತೆ ವಹಿಸಿ ಮಾತನಾಡುತ್ತಾ ಮಕ್ಕಳಿಗೆ ವಿದ್ಯಾಭ್ಯಾಸದ ಜೊತೆಗೆ ಸಾಧಕರ ಪರಿಚಯ ಹಾಗೂ ಜಯಂತಿಗಳ ದಿನಾಚರಣೆಯ ಮಾಹಿತಿಯನ್ನು ತಿಳಿಸಬೇಕಾಗಿದೆ ಚಿಂತನೆಗಳನ್ನು ಬೋದಿ ಸುವ ಅವಶ್ಯಕತೆ ಇದೆ ಎಲ್ಲಾ ಮಕ್ಕಳಿಗೂ ಶುಭ ಹಾರೈಸಿದರು.. ಕಾರ್ಯಕ್ರಮದಲ್ಲಿ. ಖಜಾಂಚಿ ಚಂದ್ರಹಾಸ್ ಪಿ ರಾಯ್ಕರ್. ಎಂ ಬಿ ಕುರುಡೇಕರ್. ರಾಮ ಸುಬ್ಬರಾಯ ಶೇಟ್.. ಮಾಲ್ತೇಶ್ ರಾಯ್ಕರ್
ಮಂಜುನಾಥ ರಾಯ್ಕರ್. . ಮತ್ತು ಶಿಕ್ಷಕರು ಉಪಸ್ಥಿತರಿದ್ದರು

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ಗೋಪಾಲ ಗೌಡರು ಶಿವಮೊಗ್ಗ ಜಿಲ್ಲೆಯನ್ನ ಸಮಾಜವಾದದ ತೊಟ್ಟಿಲನ್ನಾಗಿ ರೂಪಿಸಿದವರು- ವೈ.ಎಸ್.ವಿ.ದತ್ತ.

Shimoga News ನಗರದ ಮಥುರಾ ಪ್ಯಾರಡೈಸ್ ಸಭಾಂಗಣದಲ್ಲಿ ಮಾಜಿ ಶಾಸಕ ಹಾಗೂ...

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...