Wednesday, December 17, 2025
Wednesday, December 17, 2025

Shimoga Roller Skating Association ಶಿವಮೊಗ್ಗದ ಆರು ಸ್ಕೇಟರ್ ಗಳು ರಾಷ್ಟ್ರಮಟ್ಟದ ಪಂದ್ಯಾವಳಿಗೆ ಆಯ್ಕೆ

Date:

Shimoga Roller Skating Association ಮೈಸೂರಿನಲ್ಲಿ ನಡೆದ ರಾಜ್ಯಮಟ್ಟದ ರೋಲರ್ ಸ್ಕೇಟಿಂಗ್ ಪಂದ್ಯಾವಳಿಯಲ್ಲಿ ನಮ್ಮ ಶಿವಮೊಗ್ಗ ರೋಲರ್ ಸ್ಕೇಟಿಂಗ್ ಅಸೋಸಿಯೇಷನ್ ನ ಆರು ಸ್ಕೇಟರ್‌ಗಳು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಮೊದಲ ಹಂತದಲ್ಲೇ ಐದರಿಂದ ಏಳು ವರ್ಷ ವಯೋಮಿತಿಯ ಕ್ರೀಡಾಕೂಟದಲ್ಲಿ ನಮ್ಮ ಶಿವಮೊಗ್ಗ ತಂಡದ ಹಿತಾ ಪ್ರವೀಣ್ ಎರಡು ಬೆಳ್ಳಿ ಪದಕ ಗೆಲ್ಲುವ ಮೂಲಕ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಅದೇ ರೀತಿ 17 ವರ್ಷ ವಯೋಮಿತಿಯ ಪಂದ್ಯಾವಳಿಯಲ್ಲಿ ನಮ್ಮ ಶಿವಮೊಗ್ಗ ತಂಡದ ರಾಗಶ್ರೀ ಎಸ್. ಅವರು ಒಂದು ಚಿನ್ನ ಹಾಗೂ ಎರಡು ಬೆಳ್ಳಿ ಪದಕಗಳನ್ನು ಗೆಲ್ಲುವ ಮೂಲಕ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದು ವಿಶೇಷವಾಗಿದೆ.
ಈ ಪಂದ್ಯಾವಳಿಯಲ್ಲಿ11-14 ವರ್ಷ ವಯೋಮಿತಿಯ ಸ್ಪರ್ಧೆಯಲ್ಲಿ ಸೈಯದ್ ಪೈಜಲ್ ಎರಡು ಕಂಚು ಹಾಗೂ ಒಂದು ಬೆಳ್ಳಿ ಪದಕವನ್ನು ಪಡೆದಿದ್ದು, ದಾನೇಶ್ ಎಚ್ ಶೆಟ್ಟಿ ಅವರು 14-17 ವರ್ಷ ವಯೋಮಿತಿಯ ಪಂದ್ಯದಲ್ಲಿ ಒಂದು ಕಂಚಿನ ಪದಕ ಪಡೆದಿದ್ದಾರೆ. 17ವರ್ಷ ವಯೋಮಿತಿಯ ಪಂದ್ಯದಲ್ಲಿ ಸಾಧನ ಎಸ್. ಒಂದು ಕಂಚಿನ ಪದಕ ಪಡೆದಿದ್ದರೆ 9-11 ವರ್ಷ ವಯೋಮಿತಿಯ ಪಂದ್ಯಾವಳಿಯಲ್ಲಿ ನೀಲಾಸಂಪತ್ ಒಂದು ಬೆಳ್ಳಿ ಪದಕ ಪಡೆಯುವ ಮೂಲಕ ರಾಷ್ಟ್ರಮಟ್ಟದ ಆಯ್ಕೆಗೆ ಪಾತ್ರರಾಗಿದ್ದಾರೆ.
Shimoga Roller Skating Association 11-14 ವರ್ಷ ವಯೋಮಿತಿಯ ಪಂದ್ಯದಲ್ಲಿ ವೇದಾಂಶ್ ಗಜೇಂದ್ರ ಪೆರಡಿ ಒಂದು ಬೆಳ್ಳಿ ಪದಕವನ್ನು ಪಡೆದಿದ್ದಾರೆ.
ನಮ್ಮ ಶಿವಮೊಗ್ಗ ಸ್ಟೇಟಿಂಗ್ ಅಸೋಸಿಯೇಷನ್‌ನ ಸ್ಕೇಟರ್ ಗಳು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿರುವುದನ್ನು ಶಿವಮೊಗ್ಗ ಲೋಕಸಭಾ ಸದಸ್ಯರಾದ ಶ್ರೀ ಬಿ. ವೈ. ರಾಘವೇಂದ್ರ ಅವರು ಪ್ರಶಂಸಿಸಿ ಅವರ ಕ್ರೀಡಾ ಜಗತ್ತು ಇನ್ನಷ್ಟು ಉತ್ತಮವಾಗಲೆಂದು ಶುಭ ಹಾರೈಸಿದ್ದಾರೆ.
ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗುವ ಮೂಲಕ ಜಿಲ್ಲೆಯ ಹಾಗೂ ಸಂಸ್ಥೆಯ ಗೌರವಕ್ಕೆ ಕಾರಣವಾದ ಎಲ್ಲಾ ಸ್ಟೇಟರ್‌ಗಳನ್ನು ಸಂಸ್ಥೆಯ ಅಧ್ಯಕ್ಷ ಮೋಹನ್ ಕುಮಾರ್ ಕೆ.ಎಚ್. ಹಾಗೂ ಪ್ರಧಾನ ಕಾರ್ಯದರ್ಶಿ ಎಂ. ರವಿ ಮತ್ತು ಪದಾಧಿಕಾರಿಗಳು ಅಭಿನಂದಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Scheduled Castes Welfare Department ಮಾನಿಸಿಕ ಒತ್ತಡ ನಿರ್ವಹಣೆ ಬಗ್ಗೆ ಆನ್ ಲೈನ್ ಪಾಡ್ ಕ್ಯಾಸ್ಟ್ ವಿಡಿಯೊ ಸಂವಾದ

Scheduled Castes Welfare Department ಶಿವಮೊಗ್ಗ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್,...

Kuvempu University ಶ್ರೀಕಾಂತ್ ಬಿರಾದಾರ್ ಅವರಿಗೆ ಕುವೆಂಪು ವಿವಿ ಡಾಕ್ಟರೇಟ್ ಪದವಿ

Kuvempu University ಮೂಡಲಗಿ ಶ್ರೀ ಶ್ರೀಪಾದಬೋಧ ಸ್ವಾಮೀಜಿ ಸರ್ಕಾರಿ ಪ್ರಥಮ ದರ್ಜೆ...

Karnataka Information Commission ಡಿಸೆಂಬರ್ 20. ರಾಜ್ಯ ಮಾಹಿತಿ ಆಯುಕ್ತರ ಶಿವಮೊಗ್ಗ ಜಿಲ್ಲಾ ಪ್ರವಾಸ ಮಾಹಿತಿ

Karnataka Information Commission ರಾಜ್ಯ ಮಾಹಿತಿ ಆಯೋಗದ ಆಯುಕ್ತರಾದ ರುದ್ರಣ್ಣ ಹರ್ತಿಕೋಟೆ...

B.Y. Raghavendra ವೈಯಕ್ತಿಕವಾಗಿ ಕುಟುಂಬದ ಹಿರಿಯರನ್ನ ಕಳೆದುಕೊಂಡಂತಾಗಿದೆ, ಶಾಮನೂರು ನಿಧನಕ್ಕೆ ಬಿ.ವೈ.ರಾಘವೇಂದ್ರ ಕಂಬನಿ

B.Y. Raghavendra ಅಖಿಲಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರು, ಹಿರಿಯ...