Sunday, July 13, 2025
Sunday, July 13, 2025

Shimoga Roller Skating Association ಶಿವಮೊಗ್ಗದ ಆರು ಸ್ಕೇಟರ್ ಗಳು ರಾಷ್ಟ್ರಮಟ್ಟದ ಪಂದ್ಯಾವಳಿಗೆ ಆಯ್ಕೆ

Date:

Shimoga Roller Skating Association ಮೈಸೂರಿನಲ್ಲಿ ನಡೆದ ರಾಜ್ಯಮಟ್ಟದ ರೋಲರ್ ಸ್ಕೇಟಿಂಗ್ ಪಂದ್ಯಾವಳಿಯಲ್ಲಿ ನಮ್ಮ ಶಿವಮೊಗ್ಗ ರೋಲರ್ ಸ್ಕೇಟಿಂಗ್ ಅಸೋಸಿಯೇಷನ್ ನ ಆರು ಸ್ಕೇಟರ್‌ಗಳು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಮೊದಲ ಹಂತದಲ್ಲೇ ಐದರಿಂದ ಏಳು ವರ್ಷ ವಯೋಮಿತಿಯ ಕ್ರೀಡಾಕೂಟದಲ್ಲಿ ನಮ್ಮ ಶಿವಮೊಗ್ಗ ತಂಡದ ಹಿತಾ ಪ್ರವೀಣ್ ಎರಡು ಬೆಳ್ಳಿ ಪದಕ ಗೆಲ್ಲುವ ಮೂಲಕ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಅದೇ ರೀತಿ 17 ವರ್ಷ ವಯೋಮಿತಿಯ ಪಂದ್ಯಾವಳಿಯಲ್ಲಿ ನಮ್ಮ ಶಿವಮೊಗ್ಗ ತಂಡದ ರಾಗಶ್ರೀ ಎಸ್. ಅವರು ಒಂದು ಚಿನ್ನ ಹಾಗೂ ಎರಡು ಬೆಳ್ಳಿ ಪದಕಗಳನ್ನು ಗೆಲ್ಲುವ ಮೂಲಕ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದು ವಿಶೇಷವಾಗಿದೆ.
ಈ ಪಂದ್ಯಾವಳಿಯಲ್ಲಿ11-14 ವರ್ಷ ವಯೋಮಿತಿಯ ಸ್ಪರ್ಧೆಯಲ್ಲಿ ಸೈಯದ್ ಪೈಜಲ್ ಎರಡು ಕಂಚು ಹಾಗೂ ಒಂದು ಬೆಳ್ಳಿ ಪದಕವನ್ನು ಪಡೆದಿದ್ದು, ದಾನೇಶ್ ಎಚ್ ಶೆಟ್ಟಿ ಅವರು 14-17 ವರ್ಷ ವಯೋಮಿತಿಯ ಪಂದ್ಯದಲ್ಲಿ ಒಂದು ಕಂಚಿನ ಪದಕ ಪಡೆದಿದ್ದಾರೆ. 17ವರ್ಷ ವಯೋಮಿತಿಯ ಪಂದ್ಯದಲ್ಲಿ ಸಾಧನ ಎಸ್. ಒಂದು ಕಂಚಿನ ಪದಕ ಪಡೆದಿದ್ದರೆ 9-11 ವರ್ಷ ವಯೋಮಿತಿಯ ಪಂದ್ಯಾವಳಿಯಲ್ಲಿ ನೀಲಾಸಂಪತ್ ಒಂದು ಬೆಳ್ಳಿ ಪದಕ ಪಡೆಯುವ ಮೂಲಕ ರಾಷ್ಟ್ರಮಟ್ಟದ ಆಯ್ಕೆಗೆ ಪಾತ್ರರಾಗಿದ್ದಾರೆ.
Shimoga Roller Skating Association 11-14 ವರ್ಷ ವಯೋಮಿತಿಯ ಪಂದ್ಯದಲ್ಲಿ ವೇದಾಂಶ್ ಗಜೇಂದ್ರ ಪೆರಡಿ ಒಂದು ಬೆಳ್ಳಿ ಪದಕವನ್ನು ಪಡೆದಿದ್ದಾರೆ.
ನಮ್ಮ ಶಿವಮೊಗ್ಗ ಸ್ಟೇಟಿಂಗ್ ಅಸೋಸಿಯೇಷನ್‌ನ ಸ್ಕೇಟರ್ ಗಳು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿರುವುದನ್ನು ಶಿವಮೊಗ್ಗ ಲೋಕಸಭಾ ಸದಸ್ಯರಾದ ಶ್ರೀ ಬಿ. ವೈ. ರಾಘವೇಂದ್ರ ಅವರು ಪ್ರಶಂಸಿಸಿ ಅವರ ಕ್ರೀಡಾ ಜಗತ್ತು ಇನ್ನಷ್ಟು ಉತ್ತಮವಾಗಲೆಂದು ಶುಭ ಹಾರೈಸಿದ್ದಾರೆ.
ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗುವ ಮೂಲಕ ಜಿಲ್ಲೆಯ ಹಾಗೂ ಸಂಸ್ಥೆಯ ಗೌರವಕ್ಕೆ ಕಾರಣವಾದ ಎಲ್ಲಾ ಸ್ಟೇಟರ್‌ಗಳನ್ನು ಸಂಸ್ಥೆಯ ಅಧ್ಯಕ್ಷ ಮೋಹನ್ ಕುಮಾರ್ ಕೆ.ಎಚ್. ಹಾಗೂ ಪ್ರಧಾನ ಕಾರ್ಯದರ್ಶಿ ಎಂ. ರವಿ ಮತ್ತು ಪದಾಧಿಕಾರಿಗಳು ಅಭಿನಂದಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Miss Universe Karnataka ಚಿಕ್ಕಮಗಳೂರಿನ ಕು.ವಂಶಿ ಅವರಿಗೆ ಮಿಸ್ ಯೂನಿವರ್ಸ್ ಕರ್ನಾಟಕ ಪುರಸ್ಕಾರ

Miss Universe Karnataka ಮಿಸ್ ಯೂನಿವರ್ಸ್ ಕರ್ನಾಟಕ ಸ್ಪರ್ಧೆಯಲ್ಲಿ ವಿಜೇತರಾಗಿರುವ ಚಿಕ್ಕಮಗಳೂರಿನ...

Department of Agriculture ಶೇ 48. ರಷ್ಟು ಮಾರುಕಟ್ಟೆ ಶುಲ್ಕ ವಿಧಿಸಲು ಅವಕಾಶ ಬೇಕೆಂಬ ಮನವಿಯನ್ನ ಪರಿಶೀಲಿಸಲಾಗುತ್ತದೆ- ಸಚಿವ ಶಿವಾನಂದ ಪಾಟೀಲ್

Department of Agriculture ಕ್ಯಾಂಪ್ಕೋದಿಂದ ಸಂಗ್ರಹಿಸುತ್ತಿರುವ ಮಾರುಕಟ್ಟೆ ಶುಲ್ಕವನ್ನು ಈ ಮೊದಲಿನಂತೆ...

ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಅರ್ಹತೆಗಳಲ್ಲಿ‌ ತಿದ್ದುಪಡಿ ಆದೇಶ

ಗ್ರಾಮೀಣ ಪತ್ರಕರ್ತರ ಉಚಿತ ಬಸ್ ಪಾಸ್ ಗಾಗಿ ತಿದ್ದುಪಡಿ ಆದೇಶ ಹೊರಡಿಸಲಾಗಿದ್ದು,...

University of Horticultural Sciences ಕೃಷಿ ಪದವಿಧರರು ಕೃಷಿಮಾಡಿ ಅಭಿವೃದ್ಧಿಗೆ ಕೊಡುಗೆ ನೀಡಿ-ನಟ ಶಶಿಕುಮಾರ್

ಪ್ರಾದೇಶಿಕ ತೋಟಗಾರಿಕೆ ಸಂಶೋಧನಾ ಮತ್ತು ವಿಸ್ತರಣಾ ಕೇಂದ್ರ, ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ...